AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Sringeri: ‘ಇದಕ್ಕೆ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’; ಬಿಗ್ ಬಾಸ್​ನಿಂದ ಹೊರ ಬಂದ ಸಂಗೀತಾ ಮೊದಲ ರಿಯಾಕ್ಷನ್

ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಮುಗಿದ ಬಳಿಕ ಯಾರ ಕೈಗೂ ಸಿಗಲಿಲ್ಲ. ಅವರು ಸದ್ಯ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

Sangeetha Sringeri: ‘ಇದಕ್ಕೆ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’; ಬಿಗ್ ಬಾಸ್​ನಿಂದ ಹೊರ ಬಂದ ಸಂಗೀತಾ ಮೊದಲ ರಿಯಾಕ್ಷನ್
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Jan 30, 2024 | 9:50 AM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ಈ ಬಾರಿಯ ಬಿಗ್ ಬಾಸ್​ನಲ್ಲಿ ಕಪ್ ಗೆಲ್ಲುತ್ತೇನೆ ಎನ್ನುವ ಭರವಸೆಯಲ್ಲಿದ್ದರು. ಶ್ರುತಿ ಬಳಿಕ ಎರಡನೇ ಲೇಡಿ ವಿನ್ನರ್ ತಾವೇ ಆಗಬೇಕು ಎನ್ನುವ ಕನಸು ಕಂಡಿದ್ದರು. ಆದರೆ, ಹಾಗಾಗಲೇ ಇಲ್ಲ. ಬಿಗ್ ಬಾಸ್ ವಿನ್ ಆಗಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ. ಎರಡನೇ ರನ್ನರ್​ಅಪ್ ಸ್ಥಾನಕ್ಕೆ ಅವರು ಖುಷಿಪಟ್ಟುಕೊಂಡಿದ್ದಾರೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಸಂಗೀತಾ ಮೊದಲ ಬಾರಿಗೆ ರಿಯಾಕ್ಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಕಾರ್ತಿಕ್ ಮಹೇಶ್, ವಿನಯ್ ಗೌಡ, ತುಕಾಲಿ ಸಂತೋಷ್ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಮಾಧ್ಯಮದವರ ಕೈಗೆ ಸಿಕ್ಕರು. ಅವರು ಈಗಾಗಲೇ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ, ಸಂಗೀತಾ ಶೃಂಗೇರಿ ಅವರು ಯಾರ ಕೈಗೂ ಸಿಗುತ್ತಿಲ್ಲ. ಅವರು ಸದ್ಯ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

‘ನನ್ನ ಪ್ರೀತಿಯ ಅಭಿಮಾನಿಗಳಿಗೆ, ಪ್ರೋತ್ಸಾಹಕರಿಗೆ, ಕನ್ನಡ ಜನತೆಗೆ ನಿಮ್ಮ ಸಂಗೀತಾ ಮಾಡುವ ನಮಸ್ಕಾರಗಳು. ಎಲ್ಲಾ ಹೇಗಿದ್ದೀರಿ? ನಮ್ಮ ಬಿಗ್ ಬಾಸ್ ಹೇಗಿತ್ತು? ನನ್ನ ಬಿಗ್ ಬಾಸ್ ಜರ್ನಿ ಅಂತೂ ನಿಮಗೆ ಗೊತ್ತೇ ಇದೆ. ನೀವು ಇಲ್ಲಿ ನನಗೆ ಕೊಟ್ಟ ಪ್ರೀತಿ, ಸಹಕಾರ ಈಗ ತಿಳಿಯುತ್ತಿದೆ. ನಿಮಗೆ ಹೇಗೆ ನನ್ನ ಧನ್ಯವಾದ ಅರ್ಪಿಸಲಿ ಎಂಬುದು ತಿಳಿಯದಾಗಿದೆ’ ಎಂದು ಪತ್ರ ಆರಂಭಿಸಿದ್ದಾರೆ ಸಂಗೀತಾ.

‘ನನ್ನ ಬೆನ್ನೆಲುಬಾಗಿ ನಿಂತು ನೀವು ತೋರಿದ ನಿಮ್ಮ ಪ್ರೀತಿಯ ಪ್ರೋತ್ಸಾಹಕ್ಕೆ ನಾನು ಎಂದಿಗೂ ಆಭಾರಿ. ಬಿಗ್ ಬಾಸ್ ಟ್ರೋಫಿ ನನಗೆ ಸಿಗದಿರಬಹುದು, ನಿಮ್ಮ ಪ್ರೀತಿ ನನಗೆ ನಿಜವಾದ ಗೆಲುವನ್ನೇ ತಂದುಕೊಟ್ಟಿದೆ. ನಿಮ್ಮಿಂದ ನಾನೇ ವಿನ್ನರ್ ಎನಿಸುತ್ತಿದೆ. ಇದಕ್ಕೆ ಇರಬೇಕು ನಮ್ಮ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’ ಎಂದು ಪೋಸ್ಟ್ ಪೂರ್ಣಗೊಳಿಸಿದ್ದಾರೆ ಸಂಗೀತಾ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ

ಸಂಗೀತಾ ಶೃಂಗೇರಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ಹೆಚ್ಚಿದೆ. ಇದರಿಂದ ಅವರು ಸಾಕಷ್ಟು ಖುಷಿಯಾಗಿದ್ದಾರೆ. ಆದರೆ, ಕಪ್ ಗೆಲ್ಲಬೇಕು ಎನ್ನುವ ಅವರು ಕನಸು ಈಡೇರಲಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಅವರು ಬದ್ಧ ವೈರಿ ಎಂದೇ ಪರಿಗಣಿಸಿದ್ದ ಕಾರ್ತಿಕ್ ಮಹೇಶ್ ಬಿಗ್ ಬಾಸ್ ವಿನ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ