AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sangeetha Sringeri: ‘ಇದಕ್ಕೆ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’; ಬಿಗ್ ಬಾಸ್​ನಿಂದ ಹೊರ ಬಂದ ಸಂಗೀತಾ ಮೊದಲ ರಿಯಾಕ್ಷನ್

ಸಂಗೀತಾ ಶೃಂಗೇರಿ ಅವರು ಬಿಗ್ ಬಾಸ್ ಮುಗಿದ ಬಳಿಕ ಯಾರ ಕೈಗೂ ಸಿಗಲಿಲ್ಲ. ಅವರು ಸದ್ಯ ತಮ್ಮ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದಾರೆ.

Sangeetha Sringeri: ‘ಇದಕ್ಕೆ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’; ಬಿಗ್ ಬಾಸ್​ನಿಂದ ಹೊರ ಬಂದ ಸಂಗೀತಾ ಮೊದಲ ರಿಯಾಕ್ಷನ್
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Jan 30, 2024 | 9:50 AM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ಈ ಬಾರಿಯ ಬಿಗ್ ಬಾಸ್​ನಲ್ಲಿ ಕಪ್ ಗೆಲ್ಲುತ್ತೇನೆ ಎನ್ನುವ ಭರವಸೆಯಲ್ಲಿದ್ದರು. ಶ್ರುತಿ ಬಳಿಕ ಎರಡನೇ ಲೇಡಿ ವಿನ್ನರ್ ತಾವೇ ಆಗಬೇಕು ಎನ್ನುವ ಕನಸು ಕಂಡಿದ್ದರು. ಆದರೆ, ಹಾಗಾಗಲೇ ಇಲ್ಲ. ಬಿಗ್ ಬಾಸ್ ವಿನ್ ಆಗಬೇಕು ಎನ್ನುವ ಅವರ ಕನಸು ಕನಸಾಗಿಯೇ ಉಳಿದಿದೆ. ಎರಡನೇ ರನ್ನರ್​ಅಪ್ ಸ್ಥಾನಕ್ಕೆ ಅವರು ಖುಷಿಪಟ್ಟುಕೊಂಡಿದ್ದಾರೆ. ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಸಂಗೀತಾ ಮೊದಲ ಬಾರಿಗೆ ರಿಯಾಕ್ಟ್ ಮಾಡಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳಿಗೆ ಧನ್ಯವಾದ ಹೇಳಿದ್ದಾರೆ.

ಕಾರ್ತಿಕ್ ಮಹೇಶ್, ವಿನಯ್ ಗೌಡ, ತುಕಾಲಿ ಸಂತೋಷ್ ಬಿಗ್ ಬಾಸ್​ನಿಂದ ಹೊರ ಬಂದ ಬಳಿಕ ಮಾಧ್ಯಮದವರ ಕೈಗೆ ಸಿಕ್ಕರು. ಅವರು ಈಗಾಗಲೇ ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ. ಆದರೆ, ಸಂಗೀತಾ ಶೃಂಗೇರಿ ಅವರು ಯಾರ ಕೈಗೂ ಸಿಗುತ್ತಿಲ್ಲ. ಅವರು ಸದ್ಯ ಮನೆಯಲ್ಲಿಯೇ ಉಳಿದುಕೊಂಡಿದ್ದಾರೆ. ಅಲ್ಲಿಂದಲೇ ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಹಾಕಿದ್ದಾರೆ.

‘ನನ್ನ ಪ್ರೀತಿಯ ಅಭಿಮಾನಿಗಳಿಗೆ, ಪ್ರೋತ್ಸಾಹಕರಿಗೆ, ಕನ್ನಡ ಜನತೆಗೆ ನಿಮ್ಮ ಸಂಗೀತಾ ಮಾಡುವ ನಮಸ್ಕಾರಗಳು. ಎಲ್ಲಾ ಹೇಗಿದ್ದೀರಿ? ನಮ್ಮ ಬಿಗ್ ಬಾಸ್ ಹೇಗಿತ್ತು? ನನ್ನ ಬಿಗ್ ಬಾಸ್ ಜರ್ನಿ ಅಂತೂ ನಿಮಗೆ ಗೊತ್ತೇ ಇದೆ. ನೀವು ಇಲ್ಲಿ ನನಗೆ ಕೊಟ್ಟ ಪ್ರೀತಿ, ಸಹಕಾರ ಈಗ ತಿಳಿಯುತ್ತಿದೆ. ನಿಮಗೆ ಹೇಗೆ ನನ್ನ ಧನ್ಯವಾದ ಅರ್ಪಿಸಲಿ ಎಂಬುದು ತಿಳಿಯದಾಗಿದೆ’ ಎಂದು ಪತ್ರ ಆರಂಭಿಸಿದ್ದಾರೆ ಸಂಗೀತಾ.

‘ನನ್ನ ಬೆನ್ನೆಲುಬಾಗಿ ನಿಂತು ನೀವು ತೋರಿದ ನಿಮ್ಮ ಪ್ರೀತಿಯ ಪ್ರೋತ್ಸಾಹಕ್ಕೆ ನಾನು ಎಂದಿಗೂ ಆಭಾರಿ. ಬಿಗ್ ಬಾಸ್ ಟ್ರೋಫಿ ನನಗೆ ಸಿಗದಿರಬಹುದು, ನಿಮ್ಮ ಪ್ರೀತಿ ನನಗೆ ನಿಜವಾದ ಗೆಲುವನ್ನೇ ತಂದುಕೊಟ್ಟಿದೆ. ನಿಮ್ಮಿಂದ ನಾನೇ ವಿನ್ನರ್ ಎನಿಸುತ್ತಿದೆ. ಇದಕ್ಕೆ ಇರಬೇಕು ನಮ್ಮ ಅಣ್ಣಾವ್ರು ಅಭಿಮಾನಿಗಳನ್ನು ದೇವರಂತೆ ಕಂಡಿದ್ದು’ ಎಂದು ಪೋಸ್ಟ್ ಪೂರ್ಣಗೊಳಿಸಿದ್ದಾರೆ ಸಂಗೀತಾ.

ಇದನ್ನೂ ಓದಿ: ಬಿಗ್ ಬಾಸ್ ಕನ್ನಡ: ಕಪ್ ಎತ್ತಬೇಕು ಎನ್ನುವ ಸಂಗೀತಾ ಶೃಂಗೇರಿ ಕನಸು ಭಗ್ನ; ಎರಡನೇ ರನ್ನರ್​ಅಪ್ ಆದ ನಟಿ

ಸಂಗೀತಾ ಶೃಂಗೇರಿ ಅವರಿಗೆ ದೊಡ್ಡ ಅಭಿಮಾನಿ ಬಳಗ ಸೃಷ್ಟಿ ಆಗಿದೆ. ಇನ್​ಸ್ಟಾಗ್ರಾಮ್​ನಲ್ಲಿ ಅವರನ್ನು ಹಿಂಬಾಲಿಸುವವರ ಸಂಖ್ಯೆ ಕೂಡ ಹೆಚ್ಚಿದೆ. ಇದರಿಂದ ಅವರು ಸಾಕಷ್ಟು ಖುಷಿಯಾಗಿದ್ದಾರೆ. ಆದರೆ, ಕಪ್ ಗೆಲ್ಲಬೇಕು ಎನ್ನುವ ಅವರು ಕನಸು ಈಡೇರಲಿಲ್ಲ. ಈ ವಿಚಾರದಲ್ಲಿ ಅವರಿಗೆ ಬೇಸರ ಇದೆ. ಅವರು ಬದ್ಧ ವೈರಿ ಎಂದೇ ಪರಿಗಣಿಸಿದ್ದ ಕಾರ್ತಿಕ್ ಮಹೇಶ್ ಬಿಗ್ ಬಾಸ್ ವಿನ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಜೊತೆಗಿನ 25 ವರ್ಷದ ಆತ್ಮೀಯತೆ ಹಂಚಿಕೊಂಡ ಕಡಲೆಕಾಯಿ ವ್ಯಾಪಾರಿ
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಸಿಎಂ, ಪರಮೇಶ್ವರ್-ಡಿಸಿಎಂ: ಇಲ್ಲಿದೆ ಸಚಿವರ ಅಧಿಕೃತ ಲಿಸ್ಟ್
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು
ಡಿಕೆಶಿ ಪ್ರಮಾಣವಚನ ಕಾರ್ಯಕ್ರಮದ ಬಗ್ಗೆ ನೊಣವಿನಕೆರೆ ಶ್ರೀಗಳು ಹೇಳಿದ್ದಿಷ್ಟು