AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಅತ್ತವರ ಸಮಾಧಾನ ಮಾಡೋಕೆ ನಾವಿಲ್ಲ’; ವಿನಯ್ ಗುಂಪಲ್ಲಿ ಸಂಗೀತಾ ಹೊರಗಿನವರೇ..

ವಿನಯ್, ನಮ್ರತಾ ಹಾಗೂ ಸ್ನೇಹಿತ್ ಗೆಳೆತನ ಗ್ಯಾಂಗ್ ಆಗಿ ಬದಲಾಗಿದೆ. ಈ ಗ್ಯಾಂಗ್​​ಗೆ ಬಂದು ಸೇರ್ಪಡೆ ಆಗಿದ್ದು ಸಂಗೀತಾ. ಅವರನ್ನು ಇವರು ಹೊರಗಿನವರ ರೀತಿಯೇ ನೋಡುತ್ತಿದ್ದಾರೆ. ಆದರೆ, ಸಂಗೀತಾಗೆ ಈ ಬಗ್ಗೆ ತಿಳಿಯುತ್ತಿಲ್ಲ.

‘ಅತ್ತವರ ಸಮಾಧಾನ ಮಾಡೋಕೆ ನಾವಿಲ್ಲ’; ವಿನಯ್ ಗುಂಪಲ್ಲಿ ಸಂಗೀತಾ ಹೊರಗಿನವರೇ..
ಸಂಗೀತಾ ಶೃಂಗೇರಿ
ರಾಜೇಶ್ ದುಗ್ಗುಮನೆ
|

Updated on:Nov 25, 2023 | 10:46 AM

Share

ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಬಿಗ್ ಬಾಸ್’ (Bigg Boss) ಶೋನಲ್ಲಿ ಸಂಗೀತಾ ಶೃಂಗೇರಿ ಹಾಗೂ ಕಾರ್ತಿಕ್ ಮಹೇಶ್ ಮಧ್ಯೆ ಒಳ್ಳೆಯ ಫ್ರೆಂಡ್​ಶಿಪ್ ಇತ್ತು. ಆದರೆ, ಅದು ಮುರಿದುಬಿದ್ದಿದೆ. ಈ ಕಾರಣಕ್ಕೆ ಸಂಗೀತಾ ಬೇರೆ ದಾರಿ ಕಾಣದೆ ವಿನಯ್ ಗ್ಯಾಂಗ್ ಸೇರಿಕೊಂಡಿದ್ದಾರೆ. ಅವರಿಗೆ ಅಲ್ಲಿ ಕಾಳಜಿ ಸಿಗುತ್ತಿದೆ ಎಂದು ಅವರು ಅಂದುಕೊಂಡಿದ್ದಾರೆ. ಆದರೆ, ನಿಜವಾಗಿಯೂ ಅಲ್ಲಿ ಅವರಿಗೆ ಕೇರ್ ಸಿಗುತ್ತಿಲ್ಲ. ಸಂಗೀತಾ ಇಲ್ಲದ ಸಂದರ್ಭದಲ್ಲಿ ವಿನಯ್ ಈ ಬಗ್ಗೆ ಮಾತನಾಡಿದ್ದಾರೆ. ತಮ್ಮ ಗುಂಪಿನಲ್ಲಿ ಸಂಗೀತಾ ಹೊರಗಿನವರೇ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.

ವಿನಯ್, ನಮ್ರತಾ ಹಾಗೂ ಸ್ನೇಹಿತ್ ಗೆಳೆತನ ಗ್ಯಾಂಗ್ ಆಗಿ ಬದಲಾಗಿದೆ. ಈ ಗ್ಯಾಂಗ್​​ಗೆ ಬಂದು ಸೇರ್ಪಡೆ ಆಗಿದ್ದು ಸಂಗೀತಾ. ಅವರನ್ನು ಇವರು ಹೊರಗಿನವರ ರೀತಿಯೇ ನೋಡುತ್ತಿದ್ದಾರೆ. ಆದರೆ, ಸಂಗೀತಾಗೆ ಈ ಬಗ್ಗೆ ತಿಳಿಯುತ್ತಿಲ್ಲ. ಕಾರ್ತಿಕ್ ಹಾಗೂ ತನಿಷಾಗೆ ಬೈಯುತ್ತಾ ಕಾಲ ಕಳೆಯುತ್ತಿದ್ದಾರೆ.

‘ಸಂಗೀತಾಗೆ ಮತ್ತೆ ಆ ಗುಂಪು ಸೇರಿಕೊಳ್ಳಬೇಕು ಎಂದಿದೆ. ಕಾರ್ತಿಕ್ ಇದಾನೆ ಎನ್ನುವ ಕಾರಣಕ್ಕೆ ಆಕೆ ಅಡುಗೆ ಮಾಡಲು ಒಪ್ಪಿದರು. ಅಳುವವರನ್ನು ಕನ್ಸೋಲ್ ಮಾಡೋಕೆ ನಾವಿಲ್ಲ. ನಮಗೆ ನಮ್ಮದೇ ಆದ ಬದುಕಿದೆ, ಆಟ ಇದೆ. ತನಿಷಾ ಹಾಗೂ ಕಾರ್ತಿಕ್ ಖುಷಿಯಾಗಿ ಇರೋದನ್ನು ಅವರ ಬಳಿ ತಡೆದುಕೊಳ್ಳೋಕೆ ಆಗುತ್ತಿಲ್ಲ’ ಎಂದಿದ್ದಾರೆ ವಿನಯ್. ಈ ಮೂಲಕ ತಮ್ಮ ಗುಂಪಿನಲ್ಲಿ ಅವರು ಹೊರಗಿನವರು ಎಂದು ನೇರವಾಗಿ ಹೇಳಿದ್ದಾರೆ.

ಸಂಗೀತಾ ನಡೆಯಿಂದ ಅವರು ಹಿಂಬಾಲಕರನ್ನು ಕಳೆದುಕೊಳ್ಳುತ್ತಿದ್ದಾರೆ. ಬಿಗ್ ಬಾಸ್ ಮನೆಯಲ್ಲಿ ಅವರಿಗೆ ಈ ಬಗ್ಗೆ ತಿಳಿಯುತ್ತಿಲ್ಲ. ಇನ್​ಸ್ಟಾಗ್ರಾಮ್​ನಲ್ಲಿ ಈಗಾಗಲೇ ಅವರು 14 ಸಾವಿರ ಹಿಂಬಾಲಕರನ್ನು ಕಳೆದುಕೊಳ್ಳುತ್ತಿದ್ದಾರೆ. ಅವರ ಫಾಲೋರ್ಸ್​ ಸಂಖ್ಯೆ ದಿನ ಕಳೆದಂತೆ ಕಡಿಮೆ ಆಗುತ್ತಲೇ ಇದೆ.

ಇದನ್ನೂ ಓದಿ: ಪ್ರತಾಪ್ ಬಗ್ಗೆಯೇ ಚುಚ್ಚು ಮಾತು; ವಿನಯ್ ಚಮಚ ಆಗಿ ಬದಲಾಗೋದ್ರಾ ಸಂಗೀತಾ?

ವೀಕೆಂಡ್ ಬಂದಿದೆ. ಸಂಗೀತಾ ಅವರು ನಡೆದುಕೊಳ್ಳುತ್ತಿರುವ ರೀತಿಯನ್ನು ಸುದೀಪ್ ಪ್ರಶ್ನೆ ಮಾಡುವ ಸಾಧ್ಯತೆ ಇದೆ. ಈ ವಾರ ಸ್ನೇಹಿತ್ ಅವರು ಬಿಗ್ ಬಾಸ್ ಮನೆಯಿಂದ ಹೊರ ಹೋಗುವ ಸಾಧ್ಯತೆ ಇದೆ. ಅವರ ಆಟ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಜಿಯೋ ಸಿನಿಮಾದಲ್ಲಿ ಬಿಗ್ ಬಾಸ್ ಶೋನ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:08 am, Sat, 25 November 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು