AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಕ್ಟಿಮ್ ಕಾರ್ಡ್​ ಪ್ಲೇ ಮಾಡ್ತಿದ್ದಾರೆ ಸಂಗೀತಾ? ನಟಿಯ ನಡೆಯಿಂದ ಅಭಿಮಾನಿಗಳಿಗೆ ಬೇಸರ

ಕಾರ್ತಿಕ್, ತನಿಷಾ ಹಾಗೂ ಸಂಗೀತಾ ಒಂದೇ ಗುಂಪಿನಲ್ಲಿದ್ದರು. ಈಗ ಸಂಗೀತಾ ಈ ಗುಂಪಿನಿಂದ ಹೊರ ಬಂದಿದ್ದಾರೆ. ಅವರು ಸದ್ಯ ವಿನಯ್ ಹಾಗೂ ನಮ್ರತಾ ಜೊತೆ ಸೇರಿಕೊಂಡಿದ್ದಾರೆ. ಕಾರ್ತಿಕ್ ಹಾಗೂ ತನಿಷಾ ಜೊತೆ ಇದ್ದ ಕೆಮಿಸ್ಟ್ರಿ ಇವರ ಜೊತೆ ಸಿಗುತ್ತಿಲ್ಲ.

ವಿಕ್ಟಿಮ್ ಕಾರ್ಡ್​ ಪ್ಲೇ ಮಾಡ್ತಿದ್ದಾರೆ ಸಂಗೀತಾ? ನಟಿಯ ನಡೆಯಿಂದ ಅಭಿಮಾನಿಗಳಿಗೆ ಬೇಸರ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Nov 23, 2023 | 11:02 AM

Share

ಕೆಲ ದಿನಗಳ ಹಿಂದೆ ವರ್ತೂರು ಸಂತೊಷ್ (Varthur Santosh) ಅವರು ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗ್ತೀನಿ ಎಂದು ಹಠ ಹಿಡಿದು ಕುಳಿತಿದ್ದರು. ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆ ಆಗಿತ್ತು. ಈ ಘಟನೆ ಬಳಿಕ ಅವರ ತಾಯಿಯನ್ನು ಬಿಗ್ ಬಾಸ್ ಮನೆಗೆ ಕರೆಸಲಾಯಿತು. ಸಂತೋಷ್ ಅವರು ಕೆಲ ದಿನಗಳ ಕಾಲ ಸಾಕಷ್ಟು ಸುದ್ದಿಯಲ್ಲಿದ್ದರು. ಇದನ್ನು ನೋಡಿದ ಸಂಗೀತಾ ಅವರು ತಾವು ಕೂಡ ವಿಕ್ಟಿಮ್ ಕಾರ್ಡ್ ಪ್ಲೇ ಮಾಡಲು ಹೊರಟಂತೆ ಇದೆ. ‘ದಯವಿಟ್ಟು ಬಿಗ್ ಬಾಸ್​ನಿಂದ ಅವರನ್ನು ಕಳುಹಿಸಿ’ ಎಂದು ಅನೇಕರು ಕೋರಿಕೆ ಇಡುತ್ತಿದ್ದಾರೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ನೋಡಬಹುದು.

ಕಾರ್ತಿಕ್, ತನಿಷಾ ಹಾಗೂ ಸಂಗೀತಾ ಒಂದೇ ಗುಂಪಿನಲ್ಲಿದ್ದರು. ಈಗ ಸಂಗೀತಾ ಈ ಗುಂಪಿನಿಂದ ಹೊರ ಬಂದಿದ್ದಾರೆ. ಅವರು ಸದ್ಯ ವಿನಯ್ ಹಾಗೂ ನಮ್ರತಾ ಜೊತೆ ಸೇರಿಕೊಂಡಿದ್ದಾರೆ. ಕಾರ್ತಿಕ್ ಹಾಗೂ ತನಿಷಾ ಜೊತೆ ಇದ್ದ ಕೆಮಿಸ್ಟ್ರಿ ಇವರ ಜೊತೆ ಸಿಗುತ್ತಿಲ್ಲ. ಇದು ಸಂಗೀತಾ ಬೇಸರಕ್ಕೆ ಕಾರಣವಾಗಿದೆ. ಸಂಗೀತಾ ಅವರು ತಾವು ದೊಡ್ಮನೆಯಿಂದ ಹೊರ ಹೋಗುವುದಾಗಿ ಹೇಳುತ್ತಿದ್ದಾರೆ.

ಕನ್ಫೆಷನ್​ ರೂಂಗೆ ತೆರಳಿದ ಸಂಗೀತಾ ಅವರು ತಮಗೆ ಇಲ್ಲಿ ಇರೋಕೆ ಕಷ್ಟ ಆಗುತ್ತಿದೆ ಎಂದು ಕಣ್ಣೀರು ಹಾಕಿದ್ದಾರೆ. ಬಿಗ್ ಬಾಸ್​ಗೆ ಅತಿಥಿಯಾಗಿ ಬಂದ ನರೇಂದ್ರ ಗುರೂಜಿ ಜೊತೆ ತಾವೂ ಹೊರ ಹೋಗುವುದಾಗಿ ಹೇಳಿದ್ದರು. ಇದಾದ ಕೆಲವೇ ನಿಮಿಷಗಳಲ್ಲಿ ಅವರು ಮತ್ತೆ ಟ್ರ್ಯಾಕ್​ಗೆ ಮರಳಿದ್ದಾರೆ. ಡ್ಯಾನ್ಸ್ ಮಾಡಿದ್ದಾರೆ. ಇದನ್ನು ಅನೇಕರು ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ

‘ಕಾರ್ತಿಕ್ ಅವರದ್ದೇ ತಪ್ಪು, ನಾನು ಸರಿ ಇದ್ದೇನೆ ಎಂದು ತೋರಿಸಿಕೊಳ್ಳುವ ರೀತಿಯಲ್ಲಿ ಸಂಗೀತಾ ಅವರ ನಡೆ ಇದೆ’ ಎಂಬುದಾಗಿ ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ. ಸಂಗೀತಾ ಅವರು ಇನ್​​ಸ್ಟಾಗ್ರಾಮ್​ನಲ್ಲಿ ಈಗಾಗಲೇ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡಿದ್ದಾರೆ. ಅವರ ಫಾಲೋವರ್ಸ್ ಸಂಖ್ಯೆಯಲ್ಲಿ ಕುಸಿತ ಕಾಣುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು