AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ

Sangeetha Sringeri: ಈಗ ಸಂಗೀತಾ ಶೃಂಗೇರಿ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಮಾತು ಮಾತಿಗೆ ತಾವು ಮನೆ ತೊರೆಯುವುದಾಗಿ ಅವರು ಹೇಳುತ್ತಿದ್ದಾರೆ. ಇದು ಡ್ರಾಮಾ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Nov 23, 2023 | 7:59 AM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ಬಿಗ್ ಬಾಸ್ ಮನೆಯಲ್ಲಿ ಈ ವಾರ ವಿಲನ್ ಆಗಿದ್ದಾರೆ. ಅವರು ತಂಡ ಒಂದು ಚಾಲೆಂಜ್ ನೀಡಿತ್ತು. ಇದರ ಪ್ರಕಾರ ಕಾರ್ತಿಕ್ ಹಾಗೂ ಸಂತೋಷ್​ ತಲೆಯನ್ನು ಶೇವ್ ಮಾಡಬೇಕಿತ್ತು. ಅವರು ಈ ಚಾಲೆಂಜ್​ನ ಸ್ವೀಕರಿಸಿದರು. ಈ ಘಟನೆ ಕಾರ್ತಿಕ್ ಮಹೇಶ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ. ಇದು ಸಂಗೀತಾ ಬಿಗ್ ಬಾಸ್ ಜರ್ನಿ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಸಂಗೀತಾ ಶೃಂಗೇರಿ ಅವರಿಗೆ 11 ಸಾವಿರ ಹಿಂಬಾಲಕರು ಕಡಿಮೆ ಆಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಯಾವುದೇ ಸೆಲೆಬ್ರಿಟಿ ಬಿಗ್ ಬಾಸ್​ಗೆ ಕಾಲಿಟ್ಟರೆ ಅವರ ಖ್ಯಾತಿ ಹೆಚ್ಚುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಜಾಸ್ತಿ ಆಗುತ್ತಾ ಹೋಗುತ್ತದೆ. ಬಿಗ್ ಬಾಸ್ ಜರ್ನಿ ಆರಂಭ ಆದಾಗ ಎಷ್ಟು ಜನ ಹಿಂಬಾಲಕರು ಇದ್ದರೋ ಜರ್ನಿ ಕೊನೆಗೊಳ್ಳುವಾಗ ಆ ಸಂಖ್ಯೆಯಲ್ಲಿ ದ್ವಿಗುಣ ಆದ ಉದಾಹರಣೆಯೂ ಸಾಕಷ್ಟು ಇದೆ. ನಟಿ ಸಂಗೀತಾ ಶೃಂಗೇರಿ ಅವರಿಗೂ ಹಾಗೆಯೇ ಆಗಿದೆ. ಅವರ ಹಿಂಬಾಲಕ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇತ್ತು. ಆದರೆ, ಈ ಸಂಖ್ಯೆ ಈಗ ಏಕಾಏಕಿ ಕುಸಿದಿದೆ.

ತಲೆ ಬೋಳಿಸುವ ಟಾಸ್ಕ್ ಕೊಡುವುದಕ್ಕೂ ಮೊದಲು ಸಂಗೀತಾಗೆ 4.49 ಲಕ್ಷ ಹಿಂಬಾಲಕರು ಇದ್ದರು. ಅಂದರೆ 449 ಸಾವಿರ ಫಾಲೋವರ್ಸ್​. ಶೇವಿಂಗ್ ಘಟನೆ ಆದ ಬಳಿಕ ಈ ಸಂಖ್ಯೆ 4.38 ಲಕ್ಷಕ್ಕೆ ಇಳಿಕೆ ಆಗಿದೆ. ಅಂದರೆ, 438 ಸಾವಿರ ಹಿಂಬಾಲಕರು ಆಗಿದ್ದಾರೆ. ಇದು ಸಂಗೀತಾ ಆಟದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಈ ಸಂಖ್ಯೆ ದಿನ ಕಳೆದಂತೆ ಇಳಿಕೆ ಆಗುತ್ತಲೇ ಇದೆ.

ಇದನ್ನೂ ಓದಿ: ‘ಅವನು ನನ್ನ ಬಾಯ್​ಫ್ರೆಂಡ್​ ಅಲ್ಲ, ಇನ್ನು ಮಾತನಾಡಲ್ಲ’; ಶಪಥ ಮಾಡಿದ ಸಂಗೀತಾ  

ಈಗ ಸಂಗೀತಾ ಶೃಂಗೇರಿ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಮಾತು ಮಾತಿಗೆ ತಾವು ಮನೆ ತೊರೆಯುವುದಾಗಿ ಅವರು ಹೇಳುತ್ತಿದ್ದಾರೆ. ಇದು ಡ್ರಾಮಾ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಜಿಯೋ ಸಿನಿಮಾ ಹಾಗೂ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆಗುತ್ತಿದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Thu, 23 November 23

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ