AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ

Sangeetha Sringeri: ಈಗ ಸಂಗೀತಾ ಶೃಂಗೇರಿ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಮಾತು ಮಾತಿಗೆ ತಾವು ಮನೆ ತೊರೆಯುವುದಾಗಿ ಅವರು ಹೇಳುತ್ತಿದ್ದಾರೆ. ಇದು ಡ್ರಾಮಾ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ.

ಇನ್​ಸ್ಟಾಗ್ರಾಮ್​ನಲ್ಲಿ 11 ಸಾವಿರ ಹಿಂಬಾಲಕರನ್ನು ಕಳೆದುಕೊಂಡ ಸಂಗೀತಾ ಶೃಂಗೇರಿ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Nov 23, 2023 | 7:59 AM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ಬಿಗ್ ಬಾಸ್ ಮನೆಯಲ್ಲಿ ಈ ವಾರ ವಿಲನ್ ಆಗಿದ್ದಾರೆ. ಅವರು ತಂಡ ಒಂದು ಚಾಲೆಂಜ್ ನೀಡಿತ್ತು. ಇದರ ಪ್ರಕಾರ ಕಾರ್ತಿಕ್ ಹಾಗೂ ಸಂತೋಷ್​ ತಲೆಯನ್ನು ಶೇವ್ ಮಾಡಬೇಕಿತ್ತು. ಅವರು ಈ ಚಾಲೆಂಜ್​ನ ಸ್ವೀಕರಿಸಿದರು. ಈ ಘಟನೆ ಕಾರ್ತಿಕ್ ಮಹೇಶ್ ಅಭಿಮಾನಿಗಳ ಕೋಪಕ್ಕೆ ಕಾರಣ ಆಗಿದೆ. ಇದು ಸಂಗೀತಾ ಬಿಗ್ ಬಾಸ್ ಜರ್ನಿ ಮೇಲೆ ನೇರ ಪರಿಣಾಮ ಬೀರುವ ಸಾಧ್ಯತೆ ಇದೆ. ಇನ್​ಸ್ಟಾಗ್ರಾಮ್​ನಲ್ಲಿ ಸಂಗೀತಾ ಶೃಂಗೇರಿ ಅವರಿಗೆ 11 ಸಾವಿರ ಹಿಂಬಾಲಕರು ಕಡಿಮೆ ಆಗಿದ್ದಾರೆ. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ಚರ್ಚೆ ಆಗುತ್ತಿದೆ.

ಯಾವುದೇ ಸೆಲೆಬ್ರಿಟಿ ಬಿಗ್ ಬಾಸ್​ಗೆ ಕಾಲಿಟ್ಟರೆ ಅವರ ಖ್ಯಾತಿ ಹೆಚ್ಚುತ್ತದೆ. ಸೋಶಿಯಲ್ ಮೀಡಿಯಾದಲ್ಲಿ ಅವರ ಹಿಂಬಾಲಕರ ಸಂಖ್ಯೆ ಜಾಸ್ತಿ ಆಗುತ್ತಾ ಹೋಗುತ್ತದೆ. ಬಿಗ್ ಬಾಸ್ ಜರ್ನಿ ಆರಂಭ ಆದಾಗ ಎಷ್ಟು ಜನ ಹಿಂಬಾಲಕರು ಇದ್ದರೋ ಜರ್ನಿ ಕೊನೆಗೊಳ್ಳುವಾಗ ಆ ಸಂಖ್ಯೆಯಲ್ಲಿ ದ್ವಿಗುಣ ಆದ ಉದಾಹರಣೆಯೂ ಸಾಕಷ್ಟು ಇದೆ. ನಟಿ ಸಂಗೀತಾ ಶೃಂಗೇರಿ ಅವರಿಗೂ ಹಾಗೆಯೇ ಆಗಿದೆ. ಅವರ ಹಿಂಬಾಲಕ ಸಂಖ್ಯೆ ದಿನ ಕಳೆದಂತೆ ಹೆಚ್ಚುತ್ತಲೇ ಇತ್ತು. ಆದರೆ, ಈ ಸಂಖ್ಯೆ ಈಗ ಏಕಾಏಕಿ ಕುಸಿದಿದೆ.

ತಲೆ ಬೋಳಿಸುವ ಟಾಸ್ಕ್ ಕೊಡುವುದಕ್ಕೂ ಮೊದಲು ಸಂಗೀತಾಗೆ 4.49 ಲಕ್ಷ ಹಿಂಬಾಲಕರು ಇದ್ದರು. ಅಂದರೆ 449 ಸಾವಿರ ಫಾಲೋವರ್ಸ್​. ಶೇವಿಂಗ್ ಘಟನೆ ಆದ ಬಳಿಕ ಈ ಸಂಖ್ಯೆ 4.38 ಲಕ್ಷಕ್ಕೆ ಇಳಿಕೆ ಆಗಿದೆ. ಅಂದರೆ, 438 ಸಾವಿರ ಹಿಂಬಾಲಕರು ಆಗಿದ್ದಾರೆ. ಇದು ಸಂಗೀತಾ ಆಟದ ಮೇಲೆ ನೇರ ಪರಿಣಾಮ ಬೀರುತ್ತಿದೆ. ಈ ಸಂಖ್ಯೆ ದಿನ ಕಳೆದಂತೆ ಇಳಿಕೆ ಆಗುತ್ತಲೇ ಇದೆ.

ಇದನ್ನೂ ಓದಿ: ‘ಅವನು ನನ್ನ ಬಾಯ್​ಫ್ರೆಂಡ್​ ಅಲ್ಲ, ಇನ್ನು ಮಾತನಾಡಲ್ಲ’; ಶಪಥ ಮಾಡಿದ ಸಂಗೀತಾ  

ಈಗ ಸಂಗೀತಾ ಶೃಂಗೇರಿ ಅವರು ಮನೆ ಬಿಟ್ಟು ಹೋಗುವ ನಿರ್ಧಾರಕ್ಕೆ ಬಂದಿದ್ದಾರೆ. ಮಾತು ಮಾತಿಗೆ ತಾವು ಮನೆ ತೊರೆಯುವುದಾಗಿ ಅವರು ಹೇಳುತ್ತಿದ್ದಾರೆ. ಇದು ಡ್ರಾಮಾ ಎಂದು ಅನೇಕರು ಅಭಿಪ್ರಾಯಪಟ್ಟಿದ್ದಾರೆ. ಜಿಯೋ ಸಿನಿಮಾ ಹಾಗೂ ಕಲರ್ಸ್ ಕನ್ನಡದಲ್ಲಿ ಬಿಗ್ ಬಾಸ್ ಪ್ರಸಾರ ಆಗುತ್ತಿದೆ. ಜಿಯೋ ಸಿನಿಮಾದಲ್ಲಿ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:51 am, Thu, 23 November 23

Follow Us
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಬರೋಬ್ಬರಿ 209 ಎಸೆತಗಳು ಬಾಕಿ... ಹೀನಾಯ ಸೋಲುಂಡ ಪಾಕಿಸ್ತಾನ್
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಎಲ್‌ಪಿಜಿ ಸಿಲಿಂಡರ್​ ಬಿಕ್ಕಟ್ಟು: ಪೆಟ್ರೋಲಿಯಂ ಸಚಿವಾಲಯದಿಂದ ಮಹತ್ವದ ಹೇಳಿಕ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಹತ್ಯೆಗೆ ಯತ್ನ
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಮನೆಯಲ್ಲಿ ಸೂರ್ಯರಶ್ಮಿ ನೇರವಾಗಿ ಬೀಳುವುದರಿಂದ ಎಷ್ಟು ಲಾಭ ಗೊತ್ತಾ?
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ಇಂದು ಈ ರಾಶಿಯವರ ಕೆಲಸ ಕಾರ್ಯದಲ್ಲಿ ಶುಭ!
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ನಿಜವಾದ ಕೇರಳ ಸ್ಟೋರಿ: ಮುಸ್ಲಿಂ ಯುವಕನ ಜತೆ ಮದುವೆ ಆದ ಕುಂಭಮೇಳದ ಹುಡುಗಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಕೊಪ್ಪಳದ ಗ್ರಾಮವೊಂದರಲ್ಲಿ ಹಾಡಹಗಲೇ ಚಿರತೆ ಓಡಾಟ: ವಿಡಿಯೋ ನೋಡಿ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಉದ್ಘಾಟನೆಯಾದ 6 ತಿಂಗಳೊಳಗೆ ಬಂಗಾಳದ ಫ್ಲೈಓವರ್ ಗೋಡೆ ಕುಸಿತ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ
ಮುಜುರಾಯಿ ದೇಗುಲಗಳಲ್ಲಿ ಭಕ್ತರಿಗೆ ಪ್ರಸಾದ ತಯಾರಿಸಲು ಗ್ಯಾಸ್ ಸಮಸ್ಯೆ