AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ.

ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Nov 21, 2023 | 5:20 PM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ಡಾಮಿನೇಟ್ ಮಾಡುತ್ತಿದ್ದಾರೆ ಎನ್ನುವ ಮಾತನ್ನು ಸುದೀಪ್ ಅವರೇ ಹೇಳಿದ್ದಾರೆ. ಅವರು ಈ ಡಾಮಿನೇಷನ್​ನಿಂದ ಕಾರ್ತಿಕ್ ಹಾಗೂ ತನಿಷಾ ಗೇಮ್​ ಮೇಲೆ ಎಫೆಕ್ಟ್ ಆಗುತ್ತಿದೆ. ಕಳೆದ ವಾರ ನಡೆದ ಕಿತ್ತಾಟದಿಂದ ತನಿಷಾ ಹಾಗೂ ಕಾರ್ತಿಕ್ ಗುಂಪಿನಿಂದ ಸಂಗೀತಾ ಹೊರ ನಡೆದಿದ್ದಾರೆ. ಅಲ್ಲದೇ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ವೀಕ್ಷಕರಿಗೆ ಎದ್ದು ಕಾಣುತ್ತಿದೆ. ಅವರು ಈ ಹಂತಕ್ಕೆ ಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ. ಸಂಗೀತಾ ಈಗ ದ್ವೇಷದ ಆಟಕ್ಕೆ ಇಳಿದಿದ್ದಾರೆ. ಕಾರ್ತಿಕ್ ಹಾಗೂ ತನಿಷಾ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ.

ನಾಮಿನೇಷನ್ ವಿಚಾರದಲ್ಲಿ ತನಿಷಾ ಅವರ ಹೆಸರನ್ನು ತೆಗೆದುಕೊಂಡರು ಸಂಗೀತಾ. ಇದು ಯಾರಿಗೂ ಅಚ್ಚರಿ ಎನಿಸಲಿಲ್ಲ. ಟಾಸ್ಕ್ ವೇಳೆ ಕಾರ್ತಿಕ್​ಗೆ ಕೂದಲು ಬೋಳಿಸಿಕೊಳ್ಳುವಂತೆ ಸಂಗೀತಾ ಚಾಲೆಂಜ್ ಮಾಡಿದರು. ಈ ಚಾಲೆಂಜ್​ನ ಸ್ವೀಕರಿಸಿದರು ಕಾರ್ತಿಕ್. ಇನ್ನು, ತನಿಷಾ ಹಾಗೂ ವರ್ತೂರು ಸಂತೋಷ್​ಗೆ 20 ಹಸಿ ಮೆಣಸು ತಿನ್ನುವ ಚಾಲೆಂಜ್ ನೀಡಿದ್ದಾರೆ. ಇದನ್ನು ತನಿಷಾ ಒಪ್ಪಿಕೊಂಡಿದ್ದಾರೆ.

ಸಂಗೀತಾ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಈ ರೀತಿ ಮಾಡಬಾರದು ಎಂದು ಅನೇಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅವರು ಕೂಡ ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಈಗ ಅವರು ನಡೆದುಕೊಳ್ಳುತ್ತಿರುವ ರೀತಿಯಿಂದ ಕಡಿಮೆ ವೋಟ್ ಪಡೆದರೂ ಅಚ್ಚರಿ ಏನಿಲ್ಲ ಎಂಬುದು ಅನೇಕರ ಅಭಿಪ್ರಾಯ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ

ಈ ಬಾರಿ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುತ್ತಿದೆ. ದಿನದ 24 ಗಂಟೆ ಉಚಿತವಾಗಿ ಬಿಗ್ ಬಾಸ್ ನೋಡುವ ಅವಕಾಶವನ್ನು ಜಿಯೋ ಸಿನಿಮಾದಲ್ಲಿ ಒದಗಿಸಲಾಗಿದೆ. ಹೀಗಾಗಿ ಫನ್ ಮತ್ತಷ್ಟು ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಶಾಹೀನ್ ಅಫ್ರಿದಿ ಬ್ಯಾಟಿಂಗ್ ಶ್ಲಾಘಿಸಿದ ಕುಲ್ದೀಪ್ ಯಾದವ್
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬುರುಡೆ ಜತೆ ಸಿಕ್ಕ ID ಕಾರ್ಡ್,ವಾಕಿಂಗ್ ಸ್ಟಿಕ್ ಬಗ್ಗೆ ಸತ್ಯ ಬಿಚ್ಚಿಟ ಮಗ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಬೆಂಗಳೂರಿನಲ್ಲಿ ಮಳೆ ರುದ್ರನರ್ತನ: ವಾಹನ ಸವಾರರಿಗೆ ನರಕ ದರ್ಶನ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಸಂಪುಟ ಸಭೆಯಲ್ಲಿ ಜಾತಿ ಜ್ವಾಲೆ:ಏರು ಧ್ವನಿಯಲ್ಲೇ ಸಚಿವರಿಂದ ಆಕ್ಷೇಪ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಧರ್ಮಸ್ಥಳ ಕೇಸ್: ಇಂದು ಇನ್ನಷ್ಟು ತಲೆಬುರುಡೆ, ಅಸ್ಥಿಪಂಜರಗಳು ಪತ್ತೆ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಒಳನುಸುಳುಕೋರರನ್ನು ರಕ್ಷಿಸಲು ರಾಹುಲ್ ಗಾಂಧಿ ಯಾತ್ರೆ; ಅಮಿತ್ ಶಾ ವಾಗ್ದಾಳಿ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಆಳಂದ ಮತಗಳ್ಳತನ:ಮತ್ತಷ್ಟು ಸ್ಫೋಟಕ ಅಂಶ ಬಿಚ್ಚಿಟ್ಟ ಪ್ರಿಯಾಂಕ್ ಖರ್ಗೆ
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ಇನ್ಮುಂದೆ ಕಿಚ್ಚ ಸುದೀಪ್ ಅವರೇ ವಿಷ್ಣುವರ್ಧನ್​ ಮಗ: ಅಭಿಮಾನದ ಮಾತು
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ವಿಷ್ಣುವರ್ಧನ್ ಎಂದಿಗೂ ನಮ್ಮ ಜೊತೆಗೇ ಇರುತ್ತಾರೆ: ಶಿವರಾಜ್ ಕುಮಾರ್
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ
ಸುಮ್ಮನೆ ನಿಂತಿದ್ದ ಅಂಪೈರ್​ ತಲೆಗೆ ಗಾಯ ಮಾಡಿದ ಪಾಕ್ ಆಟಗಾರ; ವಿಡಿಯೋ