ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ.

ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..
ಸಂಗೀತಾ
Follow us
|

Updated on: Nov 21, 2023 | 5:20 PM

ಸಂಗೀತಾ ಶೃಂಗೇರಿ (Sangeetha Sringeri) ಅವರು ಡಾಮಿನೇಟ್ ಮಾಡುತ್ತಿದ್ದಾರೆ ಎನ್ನುವ ಮಾತನ್ನು ಸುದೀಪ್ ಅವರೇ ಹೇಳಿದ್ದಾರೆ. ಅವರು ಈ ಡಾಮಿನೇಷನ್​ನಿಂದ ಕಾರ್ತಿಕ್ ಹಾಗೂ ತನಿಷಾ ಗೇಮ್​ ಮೇಲೆ ಎಫೆಕ್ಟ್ ಆಗುತ್ತಿದೆ. ಕಳೆದ ವಾರ ನಡೆದ ಕಿತ್ತಾಟದಿಂದ ತನಿಷಾ ಹಾಗೂ ಕಾರ್ತಿಕ್ ಗುಂಪಿನಿಂದ ಸಂಗೀತಾ ಹೊರ ನಡೆದಿದ್ದಾರೆ. ಅಲ್ಲದೇ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ವೀಕ್ಷಕರಿಗೆ ಎದ್ದು ಕಾಣುತ್ತಿದೆ. ಅವರು ಈ ಹಂತಕ್ಕೆ ಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ. ಸಂಗೀತಾ ಈಗ ದ್ವೇಷದ ಆಟಕ್ಕೆ ಇಳಿದಿದ್ದಾರೆ. ಕಾರ್ತಿಕ್ ಹಾಗೂ ತನಿಷಾ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ.

ನಾಮಿನೇಷನ್ ವಿಚಾರದಲ್ಲಿ ತನಿಷಾ ಅವರ ಹೆಸರನ್ನು ತೆಗೆದುಕೊಂಡರು ಸಂಗೀತಾ. ಇದು ಯಾರಿಗೂ ಅಚ್ಚರಿ ಎನಿಸಲಿಲ್ಲ. ಟಾಸ್ಕ್ ವೇಳೆ ಕಾರ್ತಿಕ್​ಗೆ ಕೂದಲು ಬೋಳಿಸಿಕೊಳ್ಳುವಂತೆ ಸಂಗೀತಾ ಚಾಲೆಂಜ್ ಮಾಡಿದರು. ಈ ಚಾಲೆಂಜ್​ನ ಸ್ವೀಕರಿಸಿದರು ಕಾರ್ತಿಕ್. ಇನ್ನು, ತನಿಷಾ ಹಾಗೂ ವರ್ತೂರು ಸಂತೋಷ್​ಗೆ 20 ಹಸಿ ಮೆಣಸು ತಿನ್ನುವ ಚಾಲೆಂಜ್ ನೀಡಿದ್ದಾರೆ. ಇದನ್ನು ತನಿಷಾ ಒಪ್ಪಿಕೊಂಡಿದ್ದಾರೆ.

ಸಂಗೀತಾ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಈ ರೀತಿ ಮಾಡಬಾರದು ಎಂದು ಅನೇಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅವರು ಕೂಡ ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಈಗ ಅವರು ನಡೆದುಕೊಳ್ಳುತ್ತಿರುವ ರೀತಿಯಿಂದ ಕಡಿಮೆ ವೋಟ್ ಪಡೆದರೂ ಅಚ್ಚರಿ ಏನಿಲ್ಲ ಎಂಬುದು ಅನೇಕರ ಅಭಿಪ್ರಾಯ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ

ಈ ಬಾರಿ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುತ್ತಿದೆ. ದಿನದ 24 ಗಂಟೆ ಉಚಿತವಾಗಿ ಬಿಗ್ ಬಾಸ್ ನೋಡುವ ಅವಕಾಶವನ್ನು ಜಿಯೋ ಸಿನಿಮಾದಲ್ಲಿ ಒದಗಿಸಲಾಗಿದೆ. ಹೀಗಾಗಿ ಫನ್ ಮತ್ತಷ್ಟು ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ