AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ.

ಸಂಗೀತಾ ಶೃಂಗೇರಿ ಮಾಡುತ್ತಿರುವ ಈ ತಪ್ಪನ್ನು ವೀಕ್ಷಕರು ಎಂದಿಗೂ ಕ್ಷಮಿಸಲ್ಲ..
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Nov 21, 2023 | 5:20 PM

Share

ಸಂಗೀತಾ ಶೃಂಗೇರಿ (Sangeetha Sringeri) ಅವರು ಡಾಮಿನೇಟ್ ಮಾಡುತ್ತಿದ್ದಾರೆ ಎನ್ನುವ ಮಾತನ್ನು ಸುದೀಪ್ ಅವರೇ ಹೇಳಿದ್ದಾರೆ. ಅವರು ಈ ಡಾಮಿನೇಷನ್​ನಿಂದ ಕಾರ್ತಿಕ್ ಹಾಗೂ ತನಿಷಾ ಗೇಮ್​ ಮೇಲೆ ಎಫೆಕ್ಟ್ ಆಗುತ್ತಿದೆ. ಕಳೆದ ವಾರ ನಡೆದ ಕಿತ್ತಾಟದಿಂದ ತನಿಷಾ ಹಾಗೂ ಕಾರ್ತಿಕ್ ಗುಂಪಿನಿಂದ ಸಂಗೀತಾ ಹೊರ ನಡೆದಿದ್ದಾರೆ. ಅಲ್ಲದೇ ಸೇಡು ತೀರಿಸಿಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಇದು ವೀಕ್ಷಕರಿಗೆ ಎದ್ದು ಕಾಣುತ್ತಿದೆ. ಅವರು ಈ ಹಂತಕ್ಕೆ ಹೋಗುತ್ತಾರೆ ಎಂದು ಯಾರೂ ಊಹಿಸಿರಲಿಲ್ಲ.

ತನಿಷಾ ಹಾಗೂ ಕಾರ್ತಿಕ್​ನಿಂದ ತಮಗೆ ಅನ್ಯಾಯ ಆಗಿದೆ ಎಂದು ಸಂಗೀತಾ ಆರೋಪಿಸಿದ್ದರು. ಈ ಆರೋಪ ತಪ್ಪು ಎಂದು ಸ್ವತಃ ಸುದೀಪ್ ಅವರೇ ಹೇಳಿದ್ದಾರೆ. ಇದಾದ ಬಳಿಕ ಸಂಗೀತಾ ಆಟವನ್ನು ಬದಲಿಸಿಕೊಂಡಂತೆ ಕಾಣುತ್ತಿದೆ. ಸಂಗೀತಾ ಈಗ ದ್ವೇಷದ ಆಟಕ್ಕೆ ಇಳಿದಿದ್ದಾರೆ. ಕಾರ್ತಿಕ್ ಹಾಗೂ ತನಿಷಾ ವಿರುದ್ಧ ಸೇಡು ತೀರಿಸಿಕೊಳ್ಳುತ್ತಿದ್ದಾರೆ.

ನಾಮಿನೇಷನ್ ವಿಚಾರದಲ್ಲಿ ತನಿಷಾ ಅವರ ಹೆಸರನ್ನು ತೆಗೆದುಕೊಂಡರು ಸಂಗೀತಾ. ಇದು ಯಾರಿಗೂ ಅಚ್ಚರಿ ಎನಿಸಲಿಲ್ಲ. ಟಾಸ್ಕ್ ವೇಳೆ ಕಾರ್ತಿಕ್​ಗೆ ಕೂದಲು ಬೋಳಿಸಿಕೊಳ್ಳುವಂತೆ ಸಂಗೀತಾ ಚಾಲೆಂಜ್ ಮಾಡಿದರು. ಈ ಚಾಲೆಂಜ್​ನ ಸ್ವೀಕರಿಸಿದರು ಕಾರ್ತಿಕ್. ಇನ್ನು, ತನಿಷಾ ಹಾಗೂ ವರ್ತೂರು ಸಂತೋಷ್​ಗೆ 20 ಹಸಿ ಮೆಣಸು ತಿನ್ನುವ ಚಾಲೆಂಜ್ ನೀಡಿದ್ದಾರೆ. ಇದನ್ನು ತನಿಷಾ ಒಪ್ಪಿಕೊಂಡಿದ್ದಾರೆ.

ಸಂಗೀತಾ ನಡೆದುಕೊಳ್ಳುತ್ತಿರುವ ರೀತಿ ಅನೇಕರಿಗೆ ಇಷ್ಟ ಆಗುತ್ತಿಲ್ಲ. ಅವರು ಈ ರೀತಿ ಮಾಡಬಾರದು ಎಂದು ಅನೇಕರು ಅಭಿಪ್ರಾಯವ್ಯಕ್ತಪಡಿಸಿದ್ದಾರೆ. ಅವರು ಕೂಡ ಈ ವಾರದ ನಾಮಿನೇಷನ್​ ಲಿಸ್ಟ್​ನಲ್ಲಿದ್ದಾರೆ. ಈಗ ಅವರು ನಡೆದುಕೊಳ್ಳುತ್ತಿರುವ ರೀತಿಯಿಂದ ಕಡಿಮೆ ವೋಟ್ ಪಡೆದರೂ ಅಚ್ಚರಿ ಏನಿಲ್ಲ ಎಂಬುದು ಅನೇಕರ ಅಭಿಪ್ರಾಯ.

ಇದನ್ನೂ ಓದಿ: ಬಿಗ್ ಬಾಸ್​ನಲ್ಲಿರುವ ಗುಂಪುಗಾರಿಕೆ ವಿರುದ್ಧ ಮತ್ತೆ ಸಿಡಿದೆದ್ದ ಕಿಚ್ಚ ಸುದೀಪ್; ಖಡಕ್ ಎಚ್ಚರಿಕೆ

ಈ ಬಾರಿ ಬಿಗ್ ಬಾಸ್ ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಪ್ರಸಾರ ಆಗುತ್ತಿದೆ. ದಿನದ 24 ಗಂಟೆ ಉಚಿತವಾಗಿ ಬಿಗ್ ಬಾಸ್ ನೋಡುವ ಅವಕಾಶವನ್ನು ಜಿಯೋ ಸಿನಿಮಾದಲ್ಲಿ ಒದಗಿಸಲಾಗಿದೆ. ಹೀಗಾಗಿ ಫನ್ ಮತ್ತಷ್ಟು ಹೆಚ್ಚಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು