ಕಾರ್ತಿಕ್​ ಮೇಲೆ ಸಂಗೀತಾ, ನಮ್ರತಾ ಮಾತಿನ ದಾಳಿ; ಜೊತೆ ಇದ್ರೂ ಕಷ್ಟ, ಒಬ್ಬರೇ ಇದ್ರೂ ಕಷ್ಟ

ತಮ್ಮ ನಿಲುವು ಏನು ಎಂಬುದನ್ನು ಕಾರ್ತಿಕ್​ ಮಹೇಶ್​ ತಿಳಿಸಿದ್ದಾರೆ. ‘ನಾನು ಕುಗ್ಗಿದ್ದು ಹೌದು. ಆದರೆ ದೈಹಿಕವಾಗಿ ಅಲ್ಲ. ಮಾನಸಿಕವಾಗಿ ಲೋ ಆಗಿದ್ದೆ. ಆಟದಿಂದ ನಾನು ಡೈವರ್ಟ್​ ಆಗಿಲ್ಲ. ಸ್ನೇಹಿತರಾಗಿ ಇರುವುದು ಸಹಜ. ಆದರೆ ಅವರ ಆಟ ಕುಗ್ಗಿದಾಗ ನಾನು ನಾಮಿನೇಟ್​ ಮಾಡೋದು ಕೂಡ ಸಹಜ’ ಎಂದು ಕಾರ್ತಿಕ್​ ಮಹೇಶ್​ ಹೇಳಿದ್ದಾರೆ.

ಕಾರ್ತಿಕ್​ ಮೇಲೆ ಸಂಗೀತಾ, ನಮ್ರತಾ ಮಾತಿನ ದಾಳಿ; ಜೊತೆ ಇದ್ರೂ ಕಷ್ಟ, ಒಬ್ಬರೇ ಇದ್ರೂ ಕಷ್ಟ
ಸಂಗೀತಾ ಶೃಂಗೇರಿ, ನಮ್ರತಾ ಗೌಡ, ಕಾರ್ತಿಕ್​ ಮಹೇಶ್​
Follow us
|

Updated on:Jan 21, 2024 | 8:36 AM

ನಟ ಕಾರ್ತಿಕ್​ ಮಹೇಶ್​ ಅವರು ಬಿಗ್​ ಬಾಸ್ (Bigg Boss Kannada) ಮನೆಯಲ್ಲಿ ಸ್ಟ್ರಾಂಗ್​ ಸ್ಪರ್ಧಿ ಆಗಿ ಗುರುತಿಸಿಕೊಂಡಿದ್ದಾರೆ. ಕೊನೆಯ ಹಂತದ ತನಕ ಅವರು ಸಾಗಿ ಬಂದಿದ್ದಾರೆ. ಫಿನಾಲೆ ಹತ್ತಿರ ಇರುವಾಗ ಅವರು ಕುಗ್ಗಿದ್ದಾರಾ ಎಂಬ ಪ್ರಶ್ನೆ ಮೂಡಿದೆ. ವಾರದ ಪಂಚಾಯ್ತಿಯಲ್ಲಿ ಸುದೀಪ್​ ಅವರು ಈ ಪ್ರಶ್ನೆ ಕೇಳಿದ್ದಾರೆ. ಹೌದು ಎಂದು ಸಂಗೀತಾ ಶೃಂಗೇರಿ (Sangeetha Sringeri) ಮತ್ತು ನಮ್ರತಾ ಗೌಡ ಹೇಳಿದ್ದಾರೆ. ಅದಕ್ಕೆ ಕಾರಣ ಏನು ಎಂಬುದನ್ನು ಕೂಡ ಅವರು ವಿವರಿಸಿದ್ದಾರೆ. ಆದರೆ ಅದನ್ನು ಕಾರ್ತಿಕ್​ ಮಹೇಶ್​ (Karthik Mahesh) ಅವರು ಒಪ್ಪಿಕೊಂಡಿಲ್ಲ. ಆರಂಭದಿಂದ ಈವರೆಗೆ ಕಾರ್ತಿಕ್​ ಅವರಲ್ಲಿ ಆದ ಬದಲಾವಣೆಗಳನ್ನು ಗಮನದಲ್ಲಿ ಇಟ್ಟುಕೊಂಡು ನಮ್ರತಾ ಮತ್ತು ಸಂಗೀತಾ ಅವರು ಮಾತಿನ ದಾಳಿ ಮಾಡಿದ್ದಾರೆ.

ಆರಂಭದಲ್ಲಿ ಸಂಗೀತಾ ಶೃಂಗೇರಿ ಜೊತೆ ಕಾರ್ತಿಕ್​ ಮಹೇಶ್​ ಅವರು ಆಪ್ತವಾಗಿದ್ದರು. ಅನೇಕ ಟಾಸ್ಕ್​ಗಳಲ್ಲಿ ಸಂಗೀತಾಗೆ ಅವರು ಸಪೋರ್ಟ್​ ಮಾಡಿದ್ದರು. ಅದೇ ರೀತಿ ಸಂಗೀತಾ ಕೂಡ ಕಾರ್ತಿಕ್​ಗೆ ಬೆಂಬಲ ನೀಡಿದ್ದರು. ಬಳಿಕ ಅವರ ನಡುವೆ ವೈಮನಸ್ಸು ಉಂಟಾಯಿತು. ಆಗ ಅವರು ನಮ್ರತಾ ಗೌಡ ಜೊತೆ ಸ್ನೇಹ ಬೆಳೆಸಿದರು. ಈಗ ಆ ಸ್ನೇಹ ಕೂಡ ಅಂತ್ಯವಾಗಿದೆ. ಈ ವಿಚಾರದಲ್ಲಿ ಕಾರ್ತಿಕ್​ ಅವರನ್ನು ಸಂಗೀತಾ ಮತ್ತು ನಮ್ರತಾ ಟೀಕಿಸಿದ್ದಾರೆ.

ಇದನ್ನೂ ಓದಿ: ‘ನನ್ನ ಗೆಳೆತನವನ್ನು ಬಳಸಿಕೊಂಡ್ರಿ’; ಕಾರ್ತಿಕ್ ಹಾಗೂ ನಮ್ರತಾ ಮಧ್ಯೆ ಮೂಡಿತು ಮತ್ತಷ್ಟು ಅಂತರ

ಬಿಗ್​ ಬಾಸ್​ ಮನೆಯಲ್ಲಿ ಒಬ್ಬರ ಜೊತೆ ಸ್ನೇಹ ಮೂಡುವುದು, ಬಳಿಕ ಆ ಸ್ನೇಹ ಅಂತ್ಯವಾಗುವುದು ಸಹಜ. ಒಬ್ಬರ ಜೊತೆ ಫ್ರೆಂಡ್​ಶಿಪ್​ ಮುಗಿದ ಬಳಿಕ ಇನ್ನೊಬ್ಬರ ಜೊತೆ ಆಪ್ತತೆ ಹೆಚ್ಚುವುದು ಕೂಡ ಅಷ್ಟೇ ಸಹಜ. ಕಾರ್ತಿಕ್ ಮಹೇಶ್​ ಕೂಡ ಅದನ್ನೇ ಮಾಡಿದ್ದಾರೆ. ಹಾಗಿದ್ದರೂ ಕೂಡ ಅವರ ವರ್ತನೆಯನ್ನು ಸಂಗೀತಾ, ನಮ್ರತಾ ಟೀಕಿಸಿದ್ದಾರೆ. ‘ಕಾರ್ತಿಕ್​ಗೆ ಒಂಟಿಯಾಗಿ ಇರಲು ಸಾಧ್ಯವಿಲ್ಲ’ ಎಂದು ಅವರಿಬ್ಬರು ಹೇಳಿದ್ದಾರೆ. ಒಂದು ವೇಳೆ ಒಂಟಿಯಾಗಿದ್ದರೆ ‘ಯಾರ ಜೊತೆಯೂ ಸೇರುವುದಿಲ್ಲ’ ಎಂಬ ಕಾರಣ ನೀಡಿ ನಾಮಿನೇಟ್​ ಮಾಡುವ ಸಾಧ್ಯತೆಯೂ ಇರುತ್ತದೆ. ಹಾಗಾಗಿ ‘ಜೊತೆಗೆ ಇದ್ದರೂ ಕಷ್ಟ, ಒಬ್ಬರೇ ಇದ್ದರೂ ಕಷ್ಟ’ ಎಂಬ ಪರಿಸ್ಥಿತಿ ಕಾರ್ತಿಕ್​ ಮಹೇಶ್​ ಅವರದ್ದಾಗಿದೆ.

ತಮ್ಮ ನಿಲುವು ಏನು ಎಂಬುದನ್ನು ಕಾರ್ತಿಕ್​ ಮಹೇಶ್​ ತಿಳಿಸಿದ್ದಾರೆ. ‘ನಾನು ಕುಗ್ಗಿದ್ದು ನಿಜ. ಆದರೆ ದೈಹಿಕವಾಗಿ ಅಲ್ಲ. ಮಾನಸಿಕವಾಗಿ ಲೋ ಆಗಿದ್ದೆ. ಆಟದಿಂದ ನಾನು ಡೈವರ್ಟ್​ ಆಗಿಲ್ಲ. ಸ್ನೇಹಿತರಾಗಿರುವುದು ಸಹಜ. ಆದರೆ ಅವರ ಆಟ ಕುಗ್ಗಿದಾಗ ನಾನು ನಾಮಿನೇಟ್​ ಮಾಡೋದು ಸಹಜ’ ಎಂದು ಕಾರ್ತಿಕ್​ ಮಹೇಶ್​ ಹೇಳಿದ್ದಾರೆ. ಸಂಗೀತಾ, ನಮ್ರತಾ, ತನಿಷಾ ಜೊತೆಗಿನ ಸ್ನೇಹ ಅಂತ್ಯವಾದ ಬಳಿಕ ಕಾರ್ತಿಕ್​ ಮಹೇಶ್​ ಅವರು ತುಕಾಲಿ ಸಂತೋಷ್​ ಹಾಗೂ ವರ್ತೂರು ಸಂತೋಷ್​ ಜೊತೆ ಹೆಚ್ಚು ಕಾಲ ಕಳೆಯಲು ಆರಂಭಿಸಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 6:58 am, Sun, 21 January 24

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ