AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಗ್​ಬಾಸ್ ಮನೆಯಲ್ಲಿ ಮಹಿಳೆಯರಿಗೆ ಅವಕಾಶವಿಲ್ಲವೇ? ಚರ್ಚೆ ಹುಟ್ಟುಹಾಕಿದ ಸಂಗೀತಾ

Bigg Boss: ಕಳೆದ 9 ಬಿಗ್​ಬಾಸ್​ ಸೀಸನ್​ನಲ್ಲಿ ಒಮ್ಮೆ ಮಾತ್ರ ಮಹಿಳೆ ಗೆದ್ದಿದ್ದಾರೆ. ಇದಕ್ಕೆ ಅವಕಾಶದ ಕೊರತೆ ಕಾರಣವೇ? ಪುರುಷ ಸ್ಪರ್ಧಿಗಳು ಮಹಿಳೆಯರ ಅವಕಾಶವನ್ನು ಕಸಿದುಕೊಳ್ಳುತ್ತಿದ್ದಾರೆಯೇ?

ಬಿಗ್​ಬಾಸ್ ಮನೆಯಲ್ಲಿ ಮಹಿಳೆಯರಿಗೆ ಅವಕಾಶವಿಲ್ಲವೇ? ಚರ್ಚೆ ಹುಟ್ಟುಹಾಕಿದ ಸಂಗೀತಾ
ಮಂಜುನಾಥ ಸಿ.
|

Updated on:Jan 03, 2024 | 11:19 PM

Share

ಈಗ ಬಿಗ್​ಬಾಸ್​ನ ಹತ್ತನೇ ಸೀಸನ್ (Bigg Boss Kannada season 10) ನಡೆಯುತ್ತಿದೆ. ಈ ವೆರಗೆ ನಡೆದಿರುವ ಒಂಬತ್ತು ಸೀಸನ್​ಗಳಲ್ಲಿ ಒಂದು ಬಾರಿ ಮಾತ್ರವೇ ಮಹಿಳೆ ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ ಅದುವೇ ನಟಿ ಶ್ರುತಿ. ಈ ಸೀಸನ್​ನಲ್ಲಿ ಕೆಲ ಗಟ್ಟಿ ಆಟಗಾರ್ತಿಯರು ಮನೆಯಲ್ಲಿದ್ದಾರೆ. ಆದರೆ ಅವರನ್ನು ಗೆಲ್ಲಲು ಪುರುಷ ಸ್ಪರ್ಧಿಗಳು ಬಿಡುತ್ತಿಲ್ಲವೇ, ಬಿಗ್​ಬಾಸ್​ ನಲ್ಲಿ ಮಹಿಳೆಯರು ಗೆಲ್ಲದಿರಲು ಅವಕಾಶಗಳ ಕೊರತೆಯೇ ಕಾರಣವೇ? ಈ ಬಗ್ಗೆ ಚರ್ಚೆಯೊಂದನ್ನು ಸಂಗೀತಾ ಶೃಂಗೇರಿ ಶುರು ಮಾಡಿದ್ದಾರೆ. ಈ ಬಗ್ಗೆ ಜೋರು ಚರ್ಚೆ ಮನೆಯಲ್ಲಿ ನಡೆದಿದೆ.

ಬಿಗ್​ಬಾಸ್ ಮನೆಯಲ್ಲಿ ಕಳೆದೆರಡು ವಾರ ಹೆಚ್ಚು ಜಗಳಿಗೆ ಅವಕಾಶ ಇಲ್ಲದ ಮಾದರಿಯ ಟಾಸ್ಕ್​ಗಳಿದ್ದವು. ಕಳೆದ ವಾರವಂತೂ ಸ್ಪರ್ಧಿಗಳ ಕುಟುಂಬದವರು ಮನೆಗೆ ಬಂದಿದ್ದರಿಂದ ಯಾವುದೇ ಟಾಸ್ಕ್ ನಡೆದಿರಲಿಲ್ಲ. ಸ್ಪರ್ಧಿಗಳ ಕುಟುಂಬದ ಸದಸ್ಯರ ಕೋರಿಕೆಯನ್ನು ಪರಿಗಣಿಸಿ ತನಿಷಾ ಮನೆಯ ಕ್ಯಾಪ್ಟನ್ ಆದರು. ಆದರೆ ಈ ವಾರ ಮನೆಯ ಸದಸ್ಯರ ನಡುವೆ ಭಿನ್ನಾಭಿಪ್ರಾಯ ತಲೆದೂರುವ ರೀತಿಯ ಟಾಸ್ಕ್​ಗಳೇ ಹೆಚ್ಚಿಗೆ ಬರುತ್ತಿವೆ.

ಹತ್ತು ಲಕ್ಷ ಗೆಲ್ಲಲು ಬಿಗ್​ಬಾಸ್ ಟಾಸ್ಕ್ ಒಂದನ್ನು ನೀಡಿದ್ದರು. ನೀರಿನಲ್ಲಿ ಇಳಿದು, ಉಸಿರು ಬಿಗಿ ಹಿಡಿದು ಹಾಗೂ ಗುರಿ ಇಡುವ ಕುಶಲತೆ ಬಯಸುವ ಟಾಸ್ಕ್ ಇದಾಗಿರಲಿದೆ ಎಂದು ಬಿಗ್​ಬಾಸ್ ಮೊದಲೇ ಹೇಳಿದ್ದರು. ಹಾಗಾಗಿ ಮನೆಯ ಹಲವು ಸ್ಪರ್ಧಿಗಳು ಸಂಗೀತಾರನ್ನು ಹೊರಗಿಟ್ಟು ವಿನಯ್, ಕಾರ್ತಿಕ್, ಮೈಖಲ್ ಹಾಗೂ ತುಕಾಲಿಯನ್ನು ಆರಿಸಿದರು. ಅಂತಿಮವಾಗಿ ಕ್ಯಾಪ್ಟನ್ ತನಿಷಾ ಸಹ ಅದೇ ಆಯ್ಕೆ ಮಾಡಿದರು. ಇದು ಸಂಗೀತಾಗೆ ತುಸುವೂ ಇಷ್ಟವಾಗಲಿಲ್ಲ.

ಇದನ್ನೂ ಓದಿ:ಬಿಗ್​ಬಾಸ್: ಯಾವ ಸ್ಪರ್ಧಿಗಳಿಗೆ ಬಿತ್ತು ಕಿಚ್ಚ ಸುದೀಪ್​ರ ಮಾತಿನ ಚಾಟಿ ಏಟು

ಬಾತ್​ರೂಂನಲ್ಲಿ ಅಳುತ್ತಾ ಕೂತಿದ್ದ ಸಂಗೀತಾ, ಹಾಲ್​ಗೆ ಬಂದ ಬಳಿಕ ವಿನಯ್ ಏನಾಯ್ತೆಂದು ಕೇಳಿದರು. ಆಗ ಸಂಗೀತಾ ನೀವು ನನಗೆ ಅವಕಾಶ ನೀಡಲಿಲ್ಲ, ಹೀಗೆ ಮಾಡುವುದರಿಂದಲೇ ಈ ಮನೆಯಲ್ಲಿ ಮಹಿಳೆಯರು ಗೆಲ್ಲುವುದಿಲ್ಲ ಎಂದರು. ಪುರುಷ ಸ್ಪರ್ಧಿಗಳು ಮಹಿಳೆಯರನ್ನು ವೀಕೆ ಎಂದು ಪರಿಗಣಿಸುತ್ತಾರೆ, ಆಡಲು ಸಮಾನ ಅವಕಾಶ ನೀಡುವುದಿಲ್ಲ ಎಂಬ ಚರ್ಚೆ ಆರಂಭಿಸಿದರು.

ಅಪರೂಪಕ್ಕೆ ತಾಳ್ಮೆ ಕಳೆದುಕೊಳ್ಳದೆ ಮಾತನಾಡಿದ ವಿನಯ್, ಮಹಿಳೆ-ಪುರುಷ ಎಂಬ ವಿಷಯವನ್ನು ತರಬೇಡ, ಇದು ಕೌಶಲ್ಯ ಆಧರಿತ ಟಾಸ್ಕ್ ಎಂದರು. ಮೈಖಲ್ ಇನ್ನೂ ವಿವರವಾಗಿ, ನಿನಗೆ ಆಡಲು ಅವಕಾಶ ಸಿಗಲಿಲ್ಲ ಅದಕ್ಕೆ ನಿನಗೆ ಈ ಟಾಸ್ಕ್​ಗೆ ಬೇಕಾದ ಕೌಶಲ್ಯ ಇಲ್ಲದಿರುವುದು ಕಾರಣ, ಅದನ್ನು ಹೇಳುವ ಬದಲಿಗೆ ಮಹಿಳೆಯರಿಗೆ ಅವಕಾಶ ನೀಡಲಾಗಿಲ್ಲ ಎಂದು ಹೇಳುವುದು ತಪ್ಪು ಎಂದರು. ಅಲ್ಲದೆ, ಅದಕ್ಕೆ ಮುಂಚಿನ ಟಾಸ್ಕ್​ನಲ್ಲಿ ತನಿಷಾ ಮೊದಲಿಗೆ ಸಂಗೀತಾ ಹೆಸರನ್ನೇ ತೆಗೆದುಕೊಂಡು ಅವಕಾಶ ಕೊಟ್ಟಿದ್ದನ್ನು ಸಹ ಮೈಖಲ್ ಹೇಳಿದರು. ಬಳಿಕ ಸಂಗೀತಾ ತಮ್ಮ ಹೇಳಿಕೆಯನ್ನು ಬದಲಾಯಿಸಿಕೊಂಡರು.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 11:18 pm, Wed, 3 January 24

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್