AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕರುಳು ತೆಗೆದುಕೊಟ್ಟರೂ ಹಗ್ಗ ಅಂತಾನೆ’; ಪ್ರತಾಪ್ ಬಗ್ಗೆ ಸಂಗೀತಾ ಅಸಮಾಧಾನ

ಪ್ರತಾಪ್ ವಿರುದ್ಧ ಸಂಗೀತಾ ರೆಬೆಲ್ ಆಗಿದ್ದಾರೆ. ಈ ವಾರ ಸಂಗೀತಾ ಅವರು ಪ್ರತಾಪ್​ನ ನಾಮಿನೇಟ್ ಮಾಡಿದ್ದಾರೆ. ಈ ಮೂಲಕ ಪ್ರತಾಪ್ ಮೇಲೆ ಎಷ್ಟು ಕೋಪ ಇದೆ ಎಂಬುದನ್ನು ಅವರು ತೋರಿಸಿದ್ದಾರೆ.

‘ಕರುಳು ತೆಗೆದುಕೊಟ್ಟರೂ ಹಗ್ಗ ಅಂತಾನೆ’; ಪ್ರತಾಪ್ ಬಗ್ಗೆ ಸಂಗೀತಾ ಅಸಮಾಧಾನ
ಪ್ರತಾಪ್-ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Jan 17, 2024 | 7:55 AM

Share

‘ಬಿಗ್ ಬಾಸ್’ ಮನೆಯಲ್ಲಿ ಸಂಗೀತಾ ಶೃಂಗೇರಿ (Sangeetha Sringeri) ಹಾಗೂ ಪ್ರತಾಪ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಆದರೆ, ಇತ್ತೀಚೆಗೆ ಅದು ಹಾಳಾಗುತ್ತಿದೆ. ಪ್ರತಾಪ್ ಮಾಡುತ್ತಿರುವ ಕೆಲವು ತಪ್ಪುಗಳಿಂದ ಸಂಗೀತಾ ಶೃಂಗೇರಿ ಅಸಮಾಧಾನಗೊಂಡಿದ್ದಾರೆ. ಹಾಗಂತ ಅವರು ಇದನ್ನು ಮುಚ್ಚಿಟ್ಟುಕೊಂಡಿಲ್ಲ. ಸಮಯ ಸಿಕ್ಕಾಗಲೆಲ್ಲ ಪ್ರತಾಪ್​ಗೆ ಈ ಬಗ್ಗೆ ತಿದ್ದಿ ಹೇಳುವ ಪ್ರಯತ್ನ ಮಾಡಿದ್ದಾರೆ. ಆದರೆ, ಪ್ರತಾಪ್ ಇದನ್ನು ಕೇಳಿಸಿಕೊಳ್ಳಲೇ ಇಲ್ಲ. ಇದರಿಂದ ಸಂಗೀತಾ ಶೃಂಗೇರಿ ಅವರು ಅಸಮಾಧಾನಗೊಂಡಿದ್ದಾರೆ. ಮುಖಕ್ಕೆ ಹೊಡೆದಂತೆ ಅವರು ಮಾತನಾಡಿದ್ದಾರೆ.

ಪ್ರತಾಪ್ ಬಗ್ಗೆ ಸಂಗೀತಾಗೆ ಒಳ್ಳೆಯ ಅಭಿಪ್ರಾಯ ಇತ್ತು. ಈ ಕಾರಣಕ್ಕೆ ಕಳೆದ ವಾರ ಪ್ರತಾಪ್​ನ ನಾಮಿನೇಷನ್​ನಿಂದ ಅವರು ಬಚಾವ್ ಮಾಡಿದ್ದರು. ಇದಕ್ಕೆ ಸಂತೋಷ ವ್ಯಕ್ತಪಡಿಸುವ ಬದಲು ಪ್ರತಾಪ್ ಅವರು ಹಳೆಯ ಘಟನೆ ಇಟ್ಟುಕೊಂಡು ಸಂಗೀತಾನ ಪ್ರಶ್ನೆ ಮಾಡೋಕೆ ಶುರು ಮಾಡಿದರು. ಇದು ಸಂಗೀತಾ ಕೋಪಕ್ಕೆ ಕಾರಣವಾಯ್ತು. ಆ ಬಳಿಕ ಸಂಗೀತಾ ರೆಬೆಲ್ ಆದರು. ಈ ವಾರ ಸಂಗೀತಾ ಅವರು ಪ್ರತಾಪ್​ನ ನಾಮಿನೇಟ್ ಮಾಡಿದ್ದಾರೆ. ಈ ಮೂಲಕ ಪ್ರತಾಪ್ ಮೇಲೆ ಎಷ್ಟು ಕೋಪ ಇದೆ ಎಂಬುದನ್ನು ತೋರಿಸಿದ್ದಾರೆ.

ಬಿಗ್ ಬಾಸ್ ಮನೆಯಲ್ಲಿ ರೀಯೂನಿಯನ್ ನಡೆದಿದೆ. ನೀತು ವನಜಾಕ್ಷಿ ಕೂಡ ದೊಡ್ಮನೆಗೆ ಬಂದಿದ್ದಾರೆ. ನೀತು ಹಾಗೂ ಪ್ರತಾಪ್ ಮಧ್ಯೆ ಒಳ್ಳೆಯ ಬಾಂಧವ್ಯ ಇತ್ತು. ಈ ಕಾರಣಕ್ಕೆ ಪ್ರತಾಪ್ ಹಾಗೂ ಸಂಗೀತಾನ ಒಟ್ಟಿಗೆ ಕರೆದು ಬುದ್ಧಿವಾದ ಹೇಳಿದರು. ‘ನಿನಗೆ ಗ್ರ್ಯಾಟಿಟ್ಯೂಡ್ ಇರಬೇಕು. ನಿನಗೋಸ್ಕರ ಅವರು ಇಷ್ಟೆಲ್ಲ ಮಾಡಿದಾರೆ. ಅವರನ್ನು ದೂರ ಮಾಡಿದರೆ ನೀನು ಏಕಾಂಗಿ ಆಗ್ತೀಯಾ’ ಎಂದು ಪ್ರತಾಪ್​ಗೆ ಹೇಳಿದರು ನೀತು.

ಇದನ್ನೂ ಓದಿ: ಕಾರ್ತಿಕ್​ ಮಹೇಶ್​-ಸಂಗೀತಾ ಶೃಂಗೇರಿ ಒಟ್ಟಾಗಿ ತನಿಷಾ ಕುಪ್ಪಂಡ ವಿರುದ್ಧ ತಿರುಗಿ ಬಿದ್ದಿದ್ದು ಯಾಕೆ?

ಸಂಗೀತಾ ಈ ವಿಚಾರ ಮಾತನಾಡೋಕೆ ಸಿದ್ಧವಿರಲಿಲ್ಲ. ‘ಈ ಖುಷಿಯ ಸಂದರ್ಭದಲ್ಲಿ ಈ ಬಗ್ಗೆ ಮಾತಾಡೋಕೆ ಇಷ್ಟ ಇಲ್ಲ. ಪ್ರತಾಪ್ ತುಂಬಾನೇ ಬದಲಾಗಿದ್ದಾರೆ. ಅವನ ವಿರುದ್ಧ ಏನಾದರೂ ಹೇಳಿದರೆ ಸಿಟ್ಟು ಬರುತ್ತದೆ. ಕರುಳು ತೆಗೆದುಕೊಟ್ಟರೂ ಹಗ್ಗ ಅಂತಾನೆ. ಅಷ್ಟು ಬದಲಾಗಿದ್ದಾನೆ’ ಎಂದು ಅಸಮಾಧಾನ ಹೊರಹಾಕಿದರು ಸಂಗೀತಾ. ಬಿಗ್ ಬಾಸ್ ಫಿನಾಲೆ ಹಂತ ತಲುಪಿದೆ. 24 ಗಂಟೆ ಜಿಯೋ ಸಿನಿಮಾದಲ್ಲಿ ಲೈವ್ ನೋಡಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:53 am, Wed, 17 January 24

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು