AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಬಿಕೆ ದ್ರೋಹದಿಂದ ನಿಮಗೆ ಬೇಸರ ಬಂದಿದೆ’; ಸಂಗೀತಾ ಹಿಂದಿನ ಕಥೆ ಹೇಳಿದ ಗುರೂಜಿ

ಹೊಸ ವರ್ಷದ ಸಂದರ್ಭದಲ್ಲಿ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರು ಬಿಗ್ ಬಾಸ್​ಗೆ ಆಗಮಿಸಿದರು. ಎಲ್ಲಾ ಸ್ಪರ್ಧಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು. ಆ ಬಳಿಕ ಒಬ್ಬೊಬ್ಬರನ್ನಾಗಿ ಕರೆದು ಮಾತುಕತೆ ನಡೆಸಿದರು.

‘ನಂಬಿಕೆ ದ್ರೋಹದಿಂದ ನಿಮಗೆ ಬೇಸರ ಬಂದಿದೆ’; ಸಂಗೀತಾ ಹಿಂದಿನ ಕಥೆ ಹೇಳಿದ ಗುರೂಜಿ
ಸಂಗೀತಾ
Follow us
ರಾಜೇಶ್ ದುಗ್ಗುಮನೆ
|

Updated on:Jan 03, 2024 | 8:19 AM

ಬಿಗ್ ಬಾಸ್ (Bigg Boss) ಮನೆಗೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರ ಆಗಮನ ಆಗಿದೆ. ಅವರು ಎಲ್ಲಾ ಸ್ಪರ್ಧಿಗಳ ಭವಿಷ್ಯ ನುಡಿದಿದ್ದಾರೆ. ಹಿಂದೇನಾಗಿತ್ತು ಮತ್ತು ಮುಂದೇನಾಗುತ್ತದೆ ಎಂಬುದರ ಬಗ್ಗೆ ನೇರ ಮಾತುಗಳಲ್ಲಿ ಹೇಳಿದ್ದಾರೆ. ಇದನ್ನು ಕೇಳಿ ಒಂದಷ್ಟು ಸ್ಪರ್ಧಿಗಳಿಗೆ ಖುಷಿ ಆಗಿದೆ. ಇನ್ನೊಂದಷ್ಟು ಸ್ಪರ್ಧಿಗಳಿಗೆ ಬೇಸರ ಆಗಿದೆ. ಇನ್ನೂ ಕೆಲವರಿಗೆ ಹುಮ್ಮಸ್ಸು ಬಂದಿದೆ. ಕೆಲವರು ಚೈತನ್ಯ ಕುಗ್ಗಿ ಹೋಗಿದೆ. ಸಂಗೀತಾ ಅವರ ಬಗ್ಗೆಯೂ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರು ಬಿಗ್ ಬಾಸ್​ಗೆ ಆಗಮಿಸಿದರು. ಎಲ್ಲಾ ಸ್ಪರ್ಧಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು. ಆ ಬಳಿಕ ಒಬ್ಬೊಬ್ಬರನ್ನಾಗಿ ಕರೆದು ಮಾತುಕತೆ ನಡೆಸಿದರು. ಈ ವೇಳೆ ಸಂಗೀತಾ ಅವರ ಜೀವನದಲ್ಲಿ ಈ ಮೊದಲು ಏನಾಗಿತ್ತು ಎಂಬ ಬಗ್ಗೆ ಮಾತನಾಡಿದ್ದಾರೆ.

‘ಮನಸ್ಸಿನಲ್ಲಿ ತುಂಬಾ ಹಿಂಸೆ. ಈಗ ಅಂತಲ್ಲ, ಮೊದಲಿನಿಂದಲೂ ಅದು ಇದೆ. ತುಂಬಾ ನಂಬಿದ್ರಿ. ಆದರೆ ಕೈ ಹಿಡಿಯಲಿಲ್ಲ. ಆ ನಂಬಿಕೆ ದ್ರೋಹದಿಂದ ನಿಮಗೆ ಬಹಳ ಬೇಸರ ಆಗಿದೆ. ಎಲ್ಲರ ಬದುಕಲ್ಲೂ ಇದು ಇರುತ್ತದೆ. ಎಲ್ಲವನ್ನೂ ಶಮನ ಮಾಡುವ ವ್ಯಕ್ತಿಯ ಆಗಮನ ನಿಮ್ಮ ಬದುಕಲ್ಲಿ ಆಗುತ್ತದೆ. ಆಗ ನಿಮ್ಮ ಜೀವನದಲ್ಲಿ ಬೆಳಕು ಮೂಡುತ್ತದೆ’ ಎಂದು ಸಂಗೀತಾಗೆ ಹೇಳಿದ್ದಾರೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ.

‘ನಿಮ್ಮ ವೃತ್ತಿ ಜೀವನ ಮೇಲೂ ಹೋಗುತ್ತದೆ, ಕೆಳಕ್ಕೂ ಹೋಗುತ್ತದೆ. 2024ರಲ್ಲಿ ವೃತ್ತಿ ಜೀವನ, ಖಾಸಗಿ ಜೀವನ ಎರಡೂ ಚೆನ್ನಾಗಿರುತ್ತದೆ. 2025ರ ನಂತರ ಮದುವೆ ಆಗ್ತೀರಿ’ ಎಂದರು ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ. ಆದರೆ, ಮದುವೆ ಬಗ್ಗೆ ನಂಬಿಕೆ ಇಲ್ಲ ಎಂದರು ಸಂಗೀತಾ. ‘ಬಿಸಿ ಗಾಯದಿಂದ ಬೆಂಕಿಯೇ ಬೇಡ ಎನ್ನಬಾರದು. ಮದುವೆ ನಂತರ ನಿಮ್ಮ ಜೀವನ ಚೆನ್ನಾಗಿರುತ್ತದೆ. ಬೇಡ ಎಂದಿದ್ದು ಜೀವನದಲ್ಲಿ ಬರುತ್ತಾ ಇರುತ್ತದೆ. ಅಮ್ಮನವರ ಆಶೀರ್ವಾದ ಇದೆ. ಚೆನ್ನಾಗಿ ಇರ್ತೀಯ’ ಎಂದು ಅವರು ಹಾರೈಸಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಅದ್ದೂರಿ ಪಾರ್ಟಿ; ಅವಕಾಶ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ ನಮ್ರತಾ

‘ಈ ಆಟದಲ್ಲಿ ಗೆಲುವು ಸಿಗುತ್ತದೆಯೇ’ ಎಂದು ಸಂಗೀತಾ ಕೇಳಿದರು. ‘ಯಾರಿಗೆ ಅರ್ಹತೆ ಇರುತ್ತದೆಯೋ ಅವರು ಗೆಲ್ಲುತ್ತಾರೆ’ ಎಂದರು ಗುರೂಜಿ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಜನವರಿ 2ರಂದು ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:19 am, Wed, 3 January 24

ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಪ್ರಿಯಕರನೊಂದಿಗೆ ಬದುಕಿಕೋ ಎಂದು ಪತ್ನಿಯನ್ನು ಕಳಿಸಿದ್ದ ಪತಿ
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
ಅಪಘಾತದ ನಂತರ ರಸ್ತೆಬದಿ ಹೋಟೆಲ್​​ಗೆ ನುಗ್ಗಿದ ಒಂದು ಟಿಪ್ಪರ್
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Devotional: ಕಷ್ಟಕಾಲದಲ್ಲಿ ಮಾಡಿದ ಸಹಾಯದ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
Daily Horoscope: ಈ ರಾಶಿಯವರಿಗೆ ವಾಹನ ಖರೀದಿಸುವ ಯೋಗವಿದೆ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ