AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಬಿಕೆ ದ್ರೋಹದಿಂದ ನಿಮಗೆ ಬೇಸರ ಬಂದಿದೆ’; ಸಂಗೀತಾ ಹಿಂದಿನ ಕಥೆ ಹೇಳಿದ ಗುರೂಜಿ

ಹೊಸ ವರ್ಷದ ಸಂದರ್ಭದಲ್ಲಿ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರು ಬಿಗ್ ಬಾಸ್​ಗೆ ಆಗಮಿಸಿದರು. ಎಲ್ಲಾ ಸ್ಪರ್ಧಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು. ಆ ಬಳಿಕ ಒಬ್ಬೊಬ್ಬರನ್ನಾಗಿ ಕರೆದು ಮಾತುಕತೆ ನಡೆಸಿದರು.

‘ನಂಬಿಕೆ ದ್ರೋಹದಿಂದ ನಿಮಗೆ ಬೇಸರ ಬಂದಿದೆ’; ಸಂಗೀತಾ ಹಿಂದಿನ ಕಥೆ ಹೇಳಿದ ಗುರೂಜಿ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Jan 03, 2024 | 8:19 AM

Share

ಬಿಗ್ ಬಾಸ್ (Bigg Boss) ಮನೆಗೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರ ಆಗಮನ ಆಗಿದೆ. ಅವರು ಎಲ್ಲಾ ಸ್ಪರ್ಧಿಗಳ ಭವಿಷ್ಯ ನುಡಿದಿದ್ದಾರೆ. ಹಿಂದೇನಾಗಿತ್ತು ಮತ್ತು ಮುಂದೇನಾಗುತ್ತದೆ ಎಂಬುದರ ಬಗ್ಗೆ ನೇರ ಮಾತುಗಳಲ್ಲಿ ಹೇಳಿದ್ದಾರೆ. ಇದನ್ನು ಕೇಳಿ ಒಂದಷ್ಟು ಸ್ಪರ್ಧಿಗಳಿಗೆ ಖುಷಿ ಆಗಿದೆ. ಇನ್ನೊಂದಷ್ಟು ಸ್ಪರ್ಧಿಗಳಿಗೆ ಬೇಸರ ಆಗಿದೆ. ಇನ್ನೂ ಕೆಲವರಿಗೆ ಹುಮ್ಮಸ್ಸು ಬಂದಿದೆ. ಕೆಲವರು ಚೈತನ್ಯ ಕುಗ್ಗಿ ಹೋಗಿದೆ. ಸಂಗೀತಾ ಅವರ ಬಗ್ಗೆಯೂ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರು ಬಿಗ್ ಬಾಸ್​ಗೆ ಆಗಮಿಸಿದರು. ಎಲ್ಲಾ ಸ್ಪರ್ಧಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು. ಆ ಬಳಿಕ ಒಬ್ಬೊಬ್ಬರನ್ನಾಗಿ ಕರೆದು ಮಾತುಕತೆ ನಡೆಸಿದರು. ಈ ವೇಳೆ ಸಂಗೀತಾ ಅವರ ಜೀವನದಲ್ಲಿ ಈ ಮೊದಲು ಏನಾಗಿತ್ತು ಎಂಬ ಬಗ್ಗೆ ಮಾತನಾಡಿದ್ದಾರೆ.

‘ಮನಸ್ಸಿನಲ್ಲಿ ತುಂಬಾ ಹಿಂಸೆ. ಈಗ ಅಂತಲ್ಲ, ಮೊದಲಿನಿಂದಲೂ ಅದು ಇದೆ. ತುಂಬಾ ನಂಬಿದ್ರಿ. ಆದರೆ ಕೈ ಹಿಡಿಯಲಿಲ್ಲ. ಆ ನಂಬಿಕೆ ದ್ರೋಹದಿಂದ ನಿಮಗೆ ಬಹಳ ಬೇಸರ ಆಗಿದೆ. ಎಲ್ಲರ ಬದುಕಲ್ಲೂ ಇದು ಇರುತ್ತದೆ. ಎಲ್ಲವನ್ನೂ ಶಮನ ಮಾಡುವ ವ್ಯಕ್ತಿಯ ಆಗಮನ ನಿಮ್ಮ ಬದುಕಲ್ಲಿ ಆಗುತ್ತದೆ. ಆಗ ನಿಮ್ಮ ಜೀವನದಲ್ಲಿ ಬೆಳಕು ಮೂಡುತ್ತದೆ’ ಎಂದು ಸಂಗೀತಾಗೆ ಹೇಳಿದ್ದಾರೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ.

‘ನಿಮ್ಮ ವೃತ್ತಿ ಜೀವನ ಮೇಲೂ ಹೋಗುತ್ತದೆ, ಕೆಳಕ್ಕೂ ಹೋಗುತ್ತದೆ. 2024ರಲ್ಲಿ ವೃತ್ತಿ ಜೀವನ, ಖಾಸಗಿ ಜೀವನ ಎರಡೂ ಚೆನ್ನಾಗಿರುತ್ತದೆ. 2025ರ ನಂತರ ಮದುವೆ ಆಗ್ತೀರಿ’ ಎಂದರು ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ. ಆದರೆ, ಮದುವೆ ಬಗ್ಗೆ ನಂಬಿಕೆ ಇಲ್ಲ ಎಂದರು ಸಂಗೀತಾ. ‘ಬಿಸಿ ಗಾಯದಿಂದ ಬೆಂಕಿಯೇ ಬೇಡ ಎನ್ನಬಾರದು. ಮದುವೆ ನಂತರ ನಿಮ್ಮ ಜೀವನ ಚೆನ್ನಾಗಿರುತ್ತದೆ. ಬೇಡ ಎಂದಿದ್ದು ಜೀವನದಲ್ಲಿ ಬರುತ್ತಾ ಇರುತ್ತದೆ. ಅಮ್ಮನವರ ಆಶೀರ್ವಾದ ಇದೆ. ಚೆನ್ನಾಗಿ ಇರ್ತೀಯ’ ಎಂದು ಅವರು ಹಾರೈಸಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಅದ್ದೂರಿ ಪಾರ್ಟಿ; ಅವಕಾಶ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ ನಮ್ರತಾ

‘ಈ ಆಟದಲ್ಲಿ ಗೆಲುವು ಸಿಗುತ್ತದೆಯೇ’ ಎಂದು ಸಂಗೀತಾ ಕೇಳಿದರು. ‘ಯಾರಿಗೆ ಅರ್ಹತೆ ಇರುತ್ತದೆಯೋ ಅವರು ಗೆಲ್ಲುತ್ತಾರೆ’ ಎಂದರು ಗುರೂಜಿ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಜನವರಿ 2ರಂದು ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:19 am, Wed, 3 January 24

ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಇಂದು ಈ ರಾಶಿಯವರ ಹಳೆಯ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ