AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಂಬಿಕೆ ದ್ರೋಹದಿಂದ ನಿಮಗೆ ಬೇಸರ ಬಂದಿದೆ’; ಸಂಗೀತಾ ಹಿಂದಿನ ಕಥೆ ಹೇಳಿದ ಗುರೂಜಿ

ಹೊಸ ವರ್ಷದ ಸಂದರ್ಭದಲ್ಲಿ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರು ಬಿಗ್ ಬಾಸ್​ಗೆ ಆಗಮಿಸಿದರು. ಎಲ್ಲಾ ಸ್ಪರ್ಧಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು. ಆ ಬಳಿಕ ಒಬ್ಬೊಬ್ಬರನ್ನಾಗಿ ಕರೆದು ಮಾತುಕತೆ ನಡೆಸಿದರು.

‘ನಂಬಿಕೆ ದ್ರೋಹದಿಂದ ನಿಮಗೆ ಬೇಸರ ಬಂದಿದೆ’; ಸಂಗೀತಾ ಹಿಂದಿನ ಕಥೆ ಹೇಳಿದ ಗುರೂಜಿ
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on:Jan 03, 2024 | 8:19 AM

Share

ಬಿಗ್ ಬಾಸ್ (Bigg Boss) ಮನೆಗೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರ ಆಗಮನ ಆಗಿದೆ. ಅವರು ಎಲ್ಲಾ ಸ್ಪರ್ಧಿಗಳ ಭವಿಷ್ಯ ನುಡಿದಿದ್ದಾರೆ. ಹಿಂದೇನಾಗಿತ್ತು ಮತ್ತು ಮುಂದೇನಾಗುತ್ತದೆ ಎಂಬುದರ ಬಗ್ಗೆ ನೇರ ಮಾತುಗಳಲ್ಲಿ ಹೇಳಿದ್ದಾರೆ. ಇದನ್ನು ಕೇಳಿ ಒಂದಷ್ಟು ಸ್ಪರ್ಧಿಗಳಿಗೆ ಖುಷಿ ಆಗಿದೆ. ಇನ್ನೊಂದಷ್ಟು ಸ್ಪರ್ಧಿಗಳಿಗೆ ಬೇಸರ ಆಗಿದೆ. ಇನ್ನೂ ಕೆಲವರಿಗೆ ಹುಮ್ಮಸ್ಸು ಬಂದಿದೆ. ಕೆಲವರು ಚೈತನ್ಯ ಕುಗ್ಗಿ ಹೋಗಿದೆ. ಸಂಗೀತಾ ಅವರ ಬಗ್ಗೆಯೂ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಭವಿಷ್ಯ ನುಡಿದಿದ್ದಾರೆ.

ಹೊಸ ವರ್ಷದ ಸಂದರ್ಭದಲ್ಲಿ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಅವರು ಬಿಗ್ ಬಾಸ್​ಗೆ ಆಗಮಿಸಿದರು. ಎಲ್ಲಾ ಸ್ಪರ್ಧಿಗಳಿಗೆ ಸ್ಫೂರ್ತಿದಾಯಕ ಮಾತುಗಳನ್ನು ಆಡಿದರು. ಆ ಬಳಿಕ ಒಬ್ಬೊಬ್ಬರನ್ನಾಗಿ ಕರೆದು ಮಾತುಕತೆ ನಡೆಸಿದರು. ಈ ವೇಳೆ ಸಂಗೀತಾ ಅವರ ಜೀವನದಲ್ಲಿ ಈ ಮೊದಲು ಏನಾಗಿತ್ತು ಎಂಬ ಬಗ್ಗೆ ಮಾತನಾಡಿದ್ದಾರೆ.

‘ಮನಸ್ಸಿನಲ್ಲಿ ತುಂಬಾ ಹಿಂಸೆ. ಈಗ ಅಂತಲ್ಲ, ಮೊದಲಿನಿಂದಲೂ ಅದು ಇದೆ. ತುಂಬಾ ನಂಬಿದ್ರಿ. ಆದರೆ ಕೈ ಹಿಡಿಯಲಿಲ್ಲ. ಆ ನಂಬಿಕೆ ದ್ರೋಹದಿಂದ ನಿಮಗೆ ಬಹಳ ಬೇಸರ ಆಗಿದೆ. ಎಲ್ಲರ ಬದುಕಲ್ಲೂ ಇದು ಇರುತ್ತದೆ. ಎಲ್ಲವನ್ನೂ ಶಮನ ಮಾಡುವ ವ್ಯಕ್ತಿಯ ಆಗಮನ ನಿಮ್ಮ ಬದುಕಲ್ಲಿ ಆಗುತ್ತದೆ. ಆಗ ನಿಮ್ಮ ಜೀವನದಲ್ಲಿ ಬೆಳಕು ಮೂಡುತ್ತದೆ’ ಎಂದು ಸಂಗೀತಾಗೆ ಹೇಳಿದ್ದಾರೆ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ.

‘ನಿಮ್ಮ ವೃತ್ತಿ ಜೀವನ ಮೇಲೂ ಹೋಗುತ್ತದೆ, ಕೆಳಕ್ಕೂ ಹೋಗುತ್ತದೆ. 2024ರಲ್ಲಿ ವೃತ್ತಿ ಜೀವನ, ಖಾಸಗಿ ಜೀವನ ಎರಡೂ ಚೆನ್ನಾಗಿರುತ್ತದೆ. 2025ರ ನಂತರ ಮದುವೆ ಆಗ್ತೀರಿ’ ಎಂದರು ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ. ಆದರೆ, ಮದುವೆ ಬಗ್ಗೆ ನಂಬಿಕೆ ಇಲ್ಲ ಎಂದರು ಸಂಗೀತಾ. ‘ಬಿಸಿ ಗಾಯದಿಂದ ಬೆಂಕಿಯೇ ಬೇಡ ಎನ್ನಬಾರದು. ಮದುವೆ ನಂತರ ನಿಮ್ಮ ಜೀವನ ಚೆನ್ನಾಗಿರುತ್ತದೆ. ಬೇಡ ಎಂದಿದ್ದು ಜೀವನದಲ್ಲಿ ಬರುತ್ತಾ ಇರುತ್ತದೆ. ಅಮ್ಮನವರ ಆಶೀರ್ವಾದ ಇದೆ. ಚೆನ್ನಾಗಿ ಇರ್ತೀಯ’ ಎಂದು ಅವರು ಹಾರೈಸಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಲ್ಲಿ ಅದ್ದೂರಿ ಪಾರ್ಟಿ; ಅವಕಾಶ ತಪ್ಪಿದ್ದಕ್ಕೆ ಕಣ್ಣೀರು ಹಾಕಿದ ನಮ್ರತಾ

‘ಈ ಆಟದಲ್ಲಿ ಗೆಲುವು ಸಿಗುತ್ತದೆಯೇ’ ಎಂದು ಸಂಗೀತಾ ಕೇಳಿದರು. ‘ಯಾರಿಗೆ ಅರ್ಹತೆ ಇರುತ್ತದೆಯೋ ಅವರು ಗೆಲ್ಲುತ್ತಾರೆ’ ಎಂದರು ಗುರೂಜಿ. ಕಲರ್ಸ್ ಕನ್ನಡ ಹಾಗೂ ಜಿಯೋ ಸಿನಿಮಾದಲ್ಲಿ ಜನವರಿ 2ರಂದು ಈ ಎಪಿಸೋಡ್ ಪ್ರಸಾರ ಕಂಡಿದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ನೋಡಲು ಅವಕಾಶ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:19 am, Wed, 3 January 24

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್