AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾಗೆ ಫಿನಾಲೆ ಟಿಕೆಟ್ ಜೊತೆ ಮತ್ತೊಂದು ದೊಡ್ಡ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್

ಈ ವಾರ ಎಲ್ಲವೂ ವೈಯಕ್ತಿಕ ಟಾಸ್ಕ್​ಗಳು ಆಗಿದ್ದವು. ಸಂಗೀತಾಗೆ ಹೆಚ್ಚು ಅಂಕ ಸಿಕ್ಕಿದೆ. ಮನೆಯವರ ವೋಟ್ ಪ್ರಕಾರ ಸಂಗೀತಾ ಶೃಂಗೇರಿ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆ ಮತ್ತೊಂದು ಅಡ್ವಾಂಟೇಜ್ ಸಿಕ್ಕಿದೆ.

ಸಂಗೀತಾಗೆ ಫಿನಾಲೆ ಟಿಕೆಟ್ ಜೊತೆ ಮತ್ತೊಂದು ದೊಡ್ಡ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Jan 13, 2024 | 7:42 AM

Share

ಈ ವಾರ ಸಂಗೀತಾ ಶೃಂಗೇರಿ (Sangeetha Sringeri) ಅವರಿಗೆ ಸಾಕಷ್ಟು ಪ್ರಮುಖವಾಗಿತ್ತು. ಅವರು ಎಲ್ಲಾ ಟಾಸ್ಕ್​ನಲ್ಲಿ ಉತ್ತಮವಾಗಿ ಆಡಿದರು. ಇದರ ಜೊತೆ ಮನೆಯವರು ನೀಡಿದ ಬೆಂಬಲದಿಂದ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆಗೆ ಬಿಗ್ ಬಾಸ್ ಮತ್ತೊಂದು ಅಡ್ವಾಂಟೇಜ್ ನೀಡಿದ್ದಾರೆ. ಈ ಅಡ್ವಾಂಟೇಜ್ ಸ್ವೀಕರಿಸಿದ ಬಳಿಕ ಸಂಗೀತಾ ಅವರು ಸಖತ್ ಖುಷಿಪಟ್ಟಿದ್ದಾರೆ. ಮನೆಯವರು ಕೂಡ ಸಂಗೀತಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ.

ಈ ವಾರ ಎಲ್ಲವೂ ವೈಯಕ್ತಿಕ ಟಾಸ್ಕ್​ಗಳು ಆಗಿದ್ದವು. ಸಂಗೀತಾ ಶೃಂಗೇರಿ, ನಮ್ರತಾ ಹಾಗೂ ಪ್ರತಾಪ್ ಅತಿ ಹೆಚ್ಚು ಅಂಕ ಗಳಿಸಿ ಫಿನಾಲೆ ಟಿಕೆಟ್ ಪಡೆಯುವ ರೇಸ್ ತಲುಪಿದರು. ಈ ಪೈಕಿ ಒಬ್ಬರಿಗೆ ಟಿಕೆಟ್​ ಸಿಗಲಿದೆ ಎಂದು ಬಿಗ್ ಬಾಸ್ ತಿಳಿಸಿದರು. ಮನೆಯವರ ವೋಟ್ ಪ್ರಕಾರ ಸಂಗೀತಾ ಶೃಂಗೇರಿ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆ ಮತ್ತೊಂದು ಅಡ್ವಾಂಟೇಜ್ ಸಿಕ್ಕಿದೆ.

ಈ ವಾರ ನಡೆದಿದ್ದು ಕ್ಯಾಪ್ಟನ್ಸಿ ಟಾಸ್ಕ್​ ಕೂಡ ಹೌದಾಗಿತ್ತು. ಈ ಬಗ್ಗೆ ಸ್ಪರ್ಧಿಗಳು ಗಮನ ಹರಿಸಿರಲಿಲ್ಲ. ಫಿನಾಲೆ ಟಿಕೆಟ್ ಜೊತೆ ಕ್ಯಾಪ್ಟನ್ ಪಟ್ಟವೂ ಸಂಗೀತಾಗೆ ಸಿಕ್ಕಿದೆ. ಈ ಮೂಲಕ ಸಂಗೀತಾ ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆಗಿದ್ದಾರೆ. ಇದನ್ನು ಕೇಳಿ ಅವರಿಗೆ ಖುಷಿ ಆಗಿದೆ. ಮತ್ತೊಮ್ಮೆ ಕ್ಯಾಪ್ಟನ್ ಆದ ಖುಷಿಯಲ್ಲಿ ಅವರು ಸಂತೋಷ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಜಗಳಕ್ಕೆ ಬಂದ ಕಾರ್ತಿಕ್​ಗೆ ಸರಿಯಾಗಿ ತಿರುಗೇಟು ಕೊಟ್ಟ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ಕ್ಯಾಪ್ಟನ್ ಆಗಬೇಕು ಎಂದು ಸಾಕಷ್ಟು ಬಾರಿ ಪ್ರಯತ್ನಪಟ್ಟಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಪ್ರಮುಖ ಘಟ್ಟದಲ್ಲಿ ಎರಡು ಬಾರಿ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ