ಸಂಗೀತಾಗೆ ಫಿನಾಲೆ ಟಿಕೆಟ್ ಜೊತೆ ಮತ್ತೊಂದು ದೊಡ್ಡ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್

ಈ ವಾರ ಎಲ್ಲವೂ ವೈಯಕ್ತಿಕ ಟಾಸ್ಕ್​ಗಳು ಆಗಿದ್ದವು. ಸಂಗೀತಾಗೆ ಹೆಚ್ಚು ಅಂಕ ಸಿಕ್ಕಿದೆ. ಮನೆಯವರ ವೋಟ್ ಪ್ರಕಾರ ಸಂಗೀತಾ ಶೃಂಗೇರಿ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆ ಮತ್ತೊಂದು ಅಡ್ವಾಂಟೇಜ್ ಸಿಕ್ಕಿದೆ.

ಸಂಗೀತಾಗೆ ಫಿನಾಲೆ ಟಿಕೆಟ್ ಜೊತೆ ಮತ್ತೊಂದು ದೊಡ್ಡ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್
ಸಂಗೀತಾ
Follow us
|

Updated on: Jan 13, 2024 | 7:42 AM

ಈ ವಾರ ಸಂಗೀತಾ ಶೃಂಗೇರಿ (Sangeetha Sringeri) ಅವರಿಗೆ ಸಾಕಷ್ಟು ಪ್ರಮುಖವಾಗಿತ್ತು. ಅವರು ಎಲ್ಲಾ ಟಾಸ್ಕ್​ನಲ್ಲಿ ಉತ್ತಮವಾಗಿ ಆಡಿದರು. ಇದರ ಜೊತೆ ಮನೆಯವರು ನೀಡಿದ ಬೆಂಬಲದಿಂದ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆಗೆ ಬಿಗ್ ಬಾಸ್ ಮತ್ತೊಂದು ಅಡ್ವಾಂಟೇಜ್ ನೀಡಿದ್ದಾರೆ. ಈ ಅಡ್ವಾಂಟೇಜ್ ಸ್ವೀಕರಿಸಿದ ಬಳಿಕ ಸಂಗೀತಾ ಅವರು ಸಖತ್ ಖುಷಿಪಟ್ಟಿದ್ದಾರೆ. ಮನೆಯವರು ಕೂಡ ಸಂಗೀತಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ.

ಈ ವಾರ ಎಲ್ಲವೂ ವೈಯಕ್ತಿಕ ಟಾಸ್ಕ್​ಗಳು ಆಗಿದ್ದವು. ಸಂಗೀತಾ ಶೃಂಗೇರಿ, ನಮ್ರತಾ ಹಾಗೂ ಪ್ರತಾಪ್ ಅತಿ ಹೆಚ್ಚು ಅಂಕ ಗಳಿಸಿ ಫಿನಾಲೆ ಟಿಕೆಟ್ ಪಡೆಯುವ ರೇಸ್ ತಲುಪಿದರು. ಈ ಪೈಕಿ ಒಬ್ಬರಿಗೆ ಟಿಕೆಟ್​ ಸಿಗಲಿದೆ ಎಂದು ಬಿಗ್ ಬಾಸ್ ತಿಳಿಸಿದರು. ಮನೆಯವರ ವೋಟ್ ಪ್ರಕಾರ ಸಂಗೀತಾ ಶೃಂಗೇರಿ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆ ಮತ್ತೊಂದು ಅಡ್ವಾಂಟೇಜ್ ಸಿಕ್ಕಿದೆ.

ಈ ವಾರ ನಡೆದಿದ್ದು ಕ್ಯಾಪ್ಟನ್ಸಿ ಟಾಸ್ಕ್​ ಕೂಡ ಹೌದಾಗಿತ್ತು. ಈ ಬಗ್ಗೆ ಸ್ಪರ್ಧಿಗಳು ಗಮನ ಹರಿಸಿರಲಿಲ್ಲ. ಫಿನಾಲೆ ಟಿಕೆಟ್ ಜೊತೆ ಕ್ಯಾಪ್ಟನ್ ಪಟ್ಟವೂ ಸಂಗೀತಾಗೆ ಸಿಕ್ಕಿದೆ. ಈ ಮೂಲಕ ಸಂಗೀತಾ ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆಗಿದ್ದಾರೆ. ಇದನ್ನು ಕೇಳಿ ಅವರಿಗೆ ಖುಷಿ ಆಗಿದೆ. ಮತ್ತೊಮ್ಮೆ ಕ್ಯಾಪ್ಟನ್ ಆದ ಖುಷಿಯಲ್ಲಿ ಅವರು ಸಂತೋಷ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಜಗಳಕ್ಕೆ ಬಂದ ಕಾರ್ತಿಕ್​ಗೆ ಸರಿಯಾಗಿ ತಿರುಗೇಟು ಕೊಟ್ಟ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ಕ್ಯಾಪ್ಟನ್ ಆಗಬೇಕು ಎಂದು ಸಾಕಷ್ಟು ಬಾರಿ ಪ್ರಯತ್ನಪಟ್ಟಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಪ್ರಮುಖ ಘಟ್ಟದಲ್ಲಿ ಎರಡು ಬಾರಿ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
ಅಕ್ಟೋಬರ್ 07 ರಿಂದ 13 ರವರೆಗಿನ ವಾರ ಭವಿಷ್ಯ ತಿಳಿಯಿರಿ
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Navratri 2024 4th Day: ನವರಾತ್ರಿ 4ನೇ ದಿನ ಕುಷ್ಮಾಂಡ ದೇವಿಯ ಮಹತ್ವವೇನು?
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ನಾಲ್ಕನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು