AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಗೀತಾಗೆ ಫಿನಾಲೆ ಟಿಕೆಟ್ ಜೊತೆ ಮತ್ತೊಂದು ದೊಡ್ಡ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್

ಈ ವಾರ ಎಲ್ಲವೂ ವೈಯಕ್ತಿಕ ಟಾಸ್ಕ್​ಗಳು ಆಗಿದ್ದವು. ಸಂಗೀತಾಗೆ ಹೆಚ್ಚು ಅಂಕ ಸಿಕ್ಕಿದೆ. ಮನೆಯವರ ವೋಟ್ ಪ್ರಕಾರ ಸಂಗೀತಾ ಶೃಂಗೇರಿ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆ ಮತ್ತೊಂದು ಅಡ್ವಾಂಟೇಜ್ ಸಿಕ್ಕಿದೆ.

ಸಂಗೀತಾಗೆ ಫಿನಾಲೆ ಟಿಕೆಟ್ ಜೊತೆ ಮತ್ತೊಂದು ದೊಡ್ಡ ಅಡ್ವಾಂಟೇಜ್ ಕೊಟ್ಟ ಬಿಗ್ ಬಾಸ್
ಸಂಗೀತಾ
ರಾಜೇಶ್ ದುಗ್ಗುಮನೆ
|

Updated on: Jan 13, 2024 | 7:42 AM

Share

ಈ ವಾರ ಸಂಗೀತಾ ಶೃಂಗೇರಿ (Sangeetha Sringeri) ಅವರಿಗೆ ಸಾಕಷ್ಟು ಪ್ರಮುಖವಾಗಿತ್ತು. ಅವರು ಎಲ್ಲಾ ಟಾಸ್ಕ್​ನಲ್ಲಿ ಉತ್ತಮವಾಗಿ ಆಡಿದರು. ಇದರ ಜೊತೆ ಮನೆಯವರು ನೀಡಿದ ಬೆಂಬಲದಿಂದ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆಗೆ ಬಿಗ್ ಬಾಸ್ ಮತ್ತೊಂದು ಅಡ್ವಾಂಟೇಜ್ ನೀಡಿದ್ದಾರೆ. ಈ ಅಡ್ವಾಂಟೇಜ್ ಸ್ವೀಕರಿಸಿದ ಬಳಿಕ ಸಂಗೀತಾ ಅವರು ಸಖತ್ ಖುಷಿಪಟ್ಟಿದ್ದಾರೆ. ಮನೆಯವರು ಕೂಡ ಸಂಗೀತಾ ಬಗ್ಗೆ ಮೆಚ್ಚುಗೆ ಸೂಚಿಸಿದ್ದಾರೆ. ಅವರ ಅಭಿಮಾನಿ ಬಳಗ ಹಿರಿದಾಗುತ್ತಿದೆ.

ಈ ವಾರ ಎಲ್ಲವೂ ವೈಯಕ್ತಿಕ ಟಾಸ್ಕ್​ಗಳು ಆಗಿದ್ದವು. ಸಂಗೀತಾ ಶೃಂಗೇರಿ, ನಮ್ರತಾ ಹಾಗೂ ಪ್ರತಾಪ್ ಅತಿ ಹೆಚ್ಚು ಅಂಕ ಗಳಿಸಿ ಫಿನಾಲೆ ಟಿಕೆಟ್ ಪಡೆಯುವ ರೇಸ್ ತಲುಪಿದರು. ಈ ಪೈಕಿ ಒಬ್ಬರಿಗೆ ಟಿಕೆಟ್​ ಸಿಗಲಿದೆ ಎಂದು ಬಿಗ್ ಬಾಸ್ ತಿಳಿಸಿದರು. ಮನೆಯವರ ವೋಟ್ ಪ್ರಕಾರ ಸಂಗೀತಾ ಶೃಂಗೇರಿ ಅವರು ಫಿನಾಲೆ ಟಿಕೆಟ್ ಪಡೆದರು. ಇದರ ಜೊತೆ ಮತ್ತೊಂದು ಅಡ್ವಾಂಟೇಜ್ ಸಿಕ್ಕಿದೆ.

ಈ ವಾರ ನಡೆದಿದ್ದು ಕ್ಯಾಪ್ಟನ್ಸಿ ಟಾಸ್ಕ್​ ಕೂಡ ಹೌದಾಗಿತ್ತು. ಈ ಬಗ್ಗೆ ಸ್ಪರ್ಧಿಗಳು ಗಮನ ಹರಿಸಿರಲಿಲ್ಲ. ಫಿನಾಲೆ ಟಿಕೆಟ್ ಜೊತೆ ಕ್ಯಾಪ್ಟನ್ ಪಟ್ಟವೂ ಸಂಗೀತಾಗೆ ಸಿಕ್ಕಿದೆ. ಈ ಮೂಲಕ ಸಂಗೀತಾ ಬ್ಯಾಕ್ ಟು ಬ್ಯಾಕ್ ಎರಡು ಬಾರಿ ಕ್ಯಾಪ್ಟನ್ ಆಗಿದ್ದಾರೆ. ಇದನ್ನು ಕೇಳಿ ಅವರಿಗೆ ಖುಷಿ ಆಗಿದೆ. ಮತ್ತೊಮ್ಮೆ ಕ್ಯಾಪ್ಟನ್ ಆದ ಖುಷಿಯಲ್ಲಿ ಅವರು ಸಂತೋಷ ಹೊರ ಹಾಕಿದ್ದಾರೆ.

ಇದನ್ನೂ ಓದಿ: ಜಗಳಕ್ಕೆ ಬಂದ ಕಾರ್ತಿಕ್​ಗೆ ಸರಿಯಾಗಿ ತಿರುಗೇಟು ಕೊಟ್ಟ ಸಂಗೀತಾ ಶೃಂಗೇರಿ

ಸಂಗೀತಾ ಶೃಂಗೇರಿ ಅವರು ಕ್ಯಾಪ್ಟನ್ ಆಗಬೇಕು ಎಂದು ಸಾಕಷ್ಟು ಬಾರಿ ಪ್ರಯತ್ನಪಟ್ಟಿದ್ದರು. ಆದರೆ, ಅದು ಸಾಧ್ಯವಾಗಿರಲಿಲ್ಲ. ಈಗ ಪ್ರಮುಖ ಘಟ್ಟದಲ್ಲಿ ಎರಡು ಬಾರಿ ಕ್ಯಾಪ್ಟನ್ ಆಗಿ ಗಮನ ಸೆಳೆದಿದ್ದಾರೆ. ಅವರಿಗೆ ಎಲ್ಲರೂ ಶುಭಾಶಯ ಕೋರುತ್ತಿದ್ದಾರೆ. ಕಲರ್ಸ್ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಎಪಿಸೋಡ್ ಪ್ರಸಾರ ಕಾಣುತ್ತಿದೆ. ಜಿಯೋ ಸಿನಿಮಾದಲ್ಲಿ ಎಪಿಸೋಡ್ ಜೊತೆ 24 ಗಂಟೆ ಲೈವ್ ವೀಕ್ಷಿಸಬಹುದು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು