AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ; ಮುಂದೇನು?

‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್​​ನ ರಿಮೇಕ್. ಈ ಸೀರಿಯಲ್​​ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ. ಈ ಸೀರಿಯಲ್ ವೀಕ್ಷಕರ ಮನ ಗೆದ್ದಿದೆ. ಒಳ್ಳೆಯ ಟಿಆರ್​​​ಪಿ ಪಡೆಯುತ್ತಲೂ ಇತ್ತು. ಆದರೆ, ಧಾರಾವಾಹಿಯಲ್ಲಿ ಈಗ ನಡೆದ ಹೊಸ ಬೆಳವಣಿಗೆಯಿಂದ ವೀಕ್ಷಕರು ಬೇಸರಗೊಂಡಿದ್ದಾರೆ.

‘ಶ್ರೀ ಗಂಧದ ಗುಡಿ’ ಧಾರಾವಾಹಿಯಿಂದ ಹೊರ ನಡೆದ ಸಂಜನಾ ಬುರ್ಲಿ; ಮುಂದೇನು?
ಸಂಜನಾ
ರಾಜೇಶ್ ದುಗ್ಗುಮನೆ
|

Updated on: Mar 13, 2026 | 2:57 PM

Share

ಸಂಜನಾ ಬುರ್ಲಿ (Sanjana Burli) ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯನ್ನು ಅರ್ಧಕ್ಕೆ ತೊರೆದು ಶಾಕ್ ಕೊಟ್ಟಿದ್ದರು. ಆ ಬಳಿಕ ‘ಶ್ರೀ ಗಂಧದ ಗುಡಿ’ ಧಾರಾವಾಹಿಯ ಭಾಗ ಆಗಿದ್ದರು. ಶಾಕಿಂಗ್ ವಿಷಯ ಏನೆಂದರೆ, ಈಗ ಅವರು ಈ ಸೀರಿಯಲ್​​ನಿಂದಲೂ ಹೊರ ನಡೆದಿದ್ದಾರೆ. ಇದು ಅನೇಕರಿಗೆ ಅಚ್ಚರಿ ಮೂಡಿಸಿದೆ. ಧಾರಾವಾಹಿಯ ಕಥೆ ಏನು ಎಂಬ ಆತಂಕ ಮೂಡಿದ್ದು, ಅದಕ್ಕೆ ಉತ್ತರವೂ ಸಿಕ್ಕಿದೆ.

‘ಶ್ರೀ ಗಂಧದ ಗುಡಿ’ ಧಾರಾವಾಹಿ ತಮಿಳು ಸೀರಿಯಲ್​​ನ ರಿಮೇಕ್. ಈ ಸೀರಿಯಲ್​​ನಲ್ಲಿ ಶಿಶಿರ್, ಸಂಜನಾ ಮೊದಲಾದವರು ನಟಿಸಿದ್ದಾರೆ. ಈ ಸೀರಿಯಲ್ ವೀಕ್ಷಕರ ಮನ ಗೆದ್ದಿದೆ. ಒಳ್ಳೆಯ ಟಿಆರ್​​​ಪಿ ಪಡೆಯುತ್ತಲೂ ಇತ್ತು. ಆದರೆ, ಧಾರಾವಾಹಿಯಲ್ಲಿ ಈಗ ನಡೆದ ಹೊಸ ಬೆಳವಣಿಗೆಯಿಂದ ವೀಕ್ಷಕರು ಬೇಸರಗೊಂಡಿದ್ದಾರೆ.

ಸಂಜನಾ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರ ಮಾಡಿದ್ದರು. ಈ ಪಾತ್ರವನ್ನು ಸಂಜನಾ ಅರ್ಧಕ್ಕೆ ತೊರೆದರು. ಶಿಕ್ಷಣದ ಕಾರಣ ನೀಡಿ ಅವರು ಧಾರಾವಾಹಿ ಬಿಟ್ಟರು. ಈಗ ಸಂಜನಾ ಬುರ್ಲಿ ಅವರು ಮದುವೆ ಕಾರಣ ನೀಡಿ, ‘ಶ್ರೀ ಗಂಧದ ಗುಡಿ’ ಧಾರಾವಾಹಿ ತೊರೆದರು ಎಂದು ವರದಿ ಆಗಿದೆ. ಈ ಜಾಗಕ್ಕೆ ಹೊಸ ಪಾತ್ರಧಾರಿಯ ಆಯ್ಕೆ ಕೂಡ ಆಗಿದೆ.

ಸ್ನೇಹಾ ಮಂಜುನಾಥ್ ಅವರನ್ನು ಈ ಪಾತ್ರಕ್ಕೆ ಆಯ್ಕೆ ಮಾಡಲಾಗಿದೆ ಎಂದು ವರದಿ ಆಗಿದೆ. ಜೀ ಪವರ್​ನಲ್ಲಿ ಪ್ರಸಾರ ಕಾಣುತ್ತಿದ್ದ ‘ಶುಭಸ್ಯ ಶೀಘ್ರಂ’ ಸೀರಿಯಲ್​​ನಲ್ಲಿ ಸ್ನೇಹಾ ನಟಿಸುತ್ತಿದ್ದರು. ಈ ಧಾರಾವಾಹಿಗಳನ್ನು ನಿಲ್ಲಿಸಲಾಗಿದೆ. ಈಗ ಅವರು ಈ ಧಾರಾವಾಹಿ ಆಫರ್ ಪಡೆದು ನಟಿಸೋಕೆ ಆರಂಭಿಸಿದ್ದಾರೆ. ಇಂದಿನ (ಮಾರ್ಚ್ 13) ಎಪಿಸೋಡ್​​ ಅಲ್ಲಿ ಈ ಬಗ್ಗೆ ಅಧಿಕೃತ ಘೋಷಣೆ ಆಗಲಿದೆ.

ಇದನ್ನೂ ಓದಿ: ಬಿಗ್ ಬಾಸ್ ಆಫರ್ ಬಂದ್ರೆ ಸಂಜನಾ ಬುರ್ಲಿ ಏನು ಮಾಡ್ತಾರೆ? ಉತ್ತರಿಸಿದ ನಟಿ

ಸಂಜನಾ ಬುರ್ಲಿ ಅವರು ಈ ರೀತಿ ಮಾಡುತ್ತಿರುವುದು ಇದು ಎರಡನೇ ಬಾರಿ. ಈ ಮೊದಲು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಸಂದರ್ಭದಲ್ಲಿ ಹಾಗೆಯೇ ಮಾಡಿದ್ದರು. ಈಗ  ಮತ್ತೆ ಅದೇ ರೀತಿಯ ಘಟನೆ ರಿಪೀಟ್ ಆಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
ಸಚಿವ ಸ್ಥಾನಕ್ಕಾಗಿ ಹಿರಿಯ ಶಾಸಕರ ಪಟ್ಟು: ಹೈಕಮಾಂಡ್​​ ಭೇಟಿಗೆ ಸಿದ್ಧತೆ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
‘ಆಕಾಶ್’ ಸಿನಿಮಾ ನೋಡಲು ಚಿತ್ರಮಂದಿರಕ್ಕೆ ಬಂದ ರಮ್ಯಾ, ರಾಘಣ್ಣ: ವಿಡಿಯೋ
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
ಬಜೆಟ್​​ ಬಗ್ಗೆ ಶಾಸಕ ಇಕ್ಬಾಲ್​​ ಕಿಡಿ: ಸಚಿವ ರಾಮಲಿಂಗಾರೆಡ್ಡಿ ಏನಂದ್ರು?
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
Video: ಬಾಲಕಿ ಗೇಮ್ ಆಡುತ್ತಿದ್ದಾಗ ಮೊಬೈಲ್ ಸ್ಫೋಟ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಮಗುವನ್ನು ಸ್ಕೂಟಿಯ ಡಿಕ್ಕಿಯಲ್ಲಿ ಮಲಗಿಸಿ ಗಾಡಿ ಓಡಿಸಿದ ಮಹಿಳೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಆಟೋ ಗ್ಯಾಸ್ ಇಲ್ದೆ ಚಾಲಕರ ಪರದಾಟ, ಪ್ರಯಾಣಿಕರಿಗೆ ದರ ಏರಿಕೆ ಬರೆ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಯಾದಗಿರಿ ಹೋಟೆಲ್​ಗಳ ಅಕ್ರಮವಾಗಿ ಇರಿಸಿದ್ದ 45 ಎಲ್​ಪಿಜಿ ಸಿಲಿಂಡರ್ ಜಪ್ತಿ
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಆಪರೇಷನ್ ಕಮಲ ತಡೆಯಲು ಡಿಕೆ ಪ್ಲಾನ್; ವಂಡರ್ ಲಾಗೆ ತಲುಪಿದ ಅಸ್ಸಾಂ ಶಾಸಕರು!
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಲೇಡಿ ಗೆಟಪ್​​​ನಲ್ಲಿ ಗಮನ ಸೆಳೆದ ಚಂದ್ರಪ್ರಭ; ಎಲ್ಲರಿಗೂ ನಗುವೋ ನಗು
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ
ಇರಾಕ್​​ನಲ್ಲಿ ಯುಎಸ್ ವಾಯುಪಡೆಯ ಇಂಧನ ತುಂಬುವ ವಿಮಾನ ಪತನ