AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಿಡಲು ನಿಜವಾದ ಕಾರಣ ಹೇಳಿದ ಸಂಜನಾ ಬುರ್ಲಿ

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಿಂದ ಹೊರಬಂದಿದ್ದರು ಸಂಜನಾ ಬುರ್ಲಿ. ಈಗ ತಮ್ಮ ನಿರ್ಧಾರದ ಹಿಂದಿನ ನಿಜವಾದ ಕಾರಣವನ್ನು ಬಹಿರಂಗಪಡಿಸಿದ್ದಾರೆ. ಶಿಕ್ಷಣ ಮುಂದುವರೆಸಲು ಮತ್ತು ಅನಿವಾರ್ಯ ಪರಿಸ್ಥಿತಿಗಳಿಂದ ಧಾರಾವಾಹಿ ತೊರೆದಿದ್ದೆ ಎಂದು ಅವರು ಹೇಳಿದ್ದಾರೆ. ಇದೀಗ ಸಂಜನಾ ‘ಶ್ರೀ ಗಂಧದಗುಡಿ’ ಧಾರಾವಾಹಿ ಮೂಲಕ ಮತ್ತೆ ಪ್ರೇಕ್ಷಕರ ಎದುರು ಬರುತ್ತಿದ್ದಾರೆ.

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಿಡಲು ನಿಜವಾದ ಕಾರಣ ಹೇಳಿದ ಸಂಜನಾ ಬುರ್ಲಿ
ಸಂಜನಾ
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 01, 2025 | 8:02 AM

Share

‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರವನ್ನು ಮಾಡುತ್ತಿದ್ದ ಸಂಜನಾ ಬುರ್ಲಿ (Sanjana Burli) ಅವರು ಅರ್ಧಕ್ಕೆ ಧಾರಾವಾಹಿಯಿಂದ ಹೊರ ನಡೆದಿದ್ದು ಸಾಕಷ್ಟು ಚರ್ಚೆಗಳನ್ನು ಹುಟ್ಟುಹಾಕಿತ್ತು. ಈ ಚರ್ಚೆಯ ಬಳಿಕ ಅವರು ಎಲ್ಲಿಯೂ ಸ್ಪಷ್ಟನೆ ಕೊಡಲೇ ಇಲ್ಲ. ಸಂಜನಾ ಅವರು ಈ ಬಗ್ಗೆ ಮೌನವಹಿಸಿದ್ದರು. ಈಗ ಅವರು ‘ಶ್ರೀ ಗಂಧದಗುಡಿ’ ಧಾರಾವಾಹಿ ಮೂಲಕ ಪ್ರೇಕ್ಷಕರ ಎದುರು ಬರುತ್ತಿದ್ದಾರೆ ಮತ್ತು  ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ ಬಿಟ್ಟಿದ್ದರ ಹಿಂದಿನ ಕಾರಣ ಹೇಳಿದ್ದಾರೆ.

‘ಪುಟ್ಟಕ್ಕನ್ನ ಮಕ್ಕಳು’ ಧಾರಾವಾಹಿಯಲ್ಲಿ ಸಂಜನಾ ಅವರು ಪುಟ್ಟಕ್ಕನ ಮಗಳು ಸ್ನೇಹಾ ಆಗಿ ಕಾಣಿಸಿಕೊಂಡಿದ್ದರು. ಅವರು ಧಾರಾವಾಹಿಯಿಂದ ಹೊರ ನಡೆದಿದ್ದರಿಂದ ಅವರ ಪಾತ್ರ ಅರ್ಧಕ್ಕೆ ಕೊನೆ ಆಯಿತು. ಅವರು ಸತ್ತಂತೆ ತೋರಿಸಲಾಯಿತು. ಆದರೆ, ಇದು ಅವರು ಏಕಾಏಕಿ ತೆಗೆದುಕೊಂಡು ನಿರ್ಧಾರ ಅಲ್ಲ ಎಂದು ಸಂಜನಾ ಅವರು ಹೇಳಿದರು.

‘ಶ್ರೀ ಗಂಧದಗುಡಿ’ ಹೆಸರಿನ ಧಾರಾವಾಹಿ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಅಕ್ಟೋಬರ್ 6ರಿಂದ ಧಾರಾವಾಹಿಯು ರಾತ್ರಿ 8 ಗಂಟೆಗೆ ಕಲರ್ಸ್​ನಲ್ಲಿ ಪ್ರಸಾರ ಕಾಣಲಿದೆ. ಈ ಧಾರಾವಾಹಿ ಸುದ್ದಿಗೋಷ್ಠಿ ವೇಳೆ ಅವರು ‘ಟಿವಿ9 ಕನ್ನಡ’ಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿದರು.

ಇದನ್ನೂ ಓದಿ
Image
ಅಡುಗೆ ಮಾಡುತ್ತಾ ರಿಷಬ್, ಮೇಘನಾ, ಸುದೀಪ್ ಹರಟೆ; ಅಪರೂಪದ ವಿಡಿಯೋ ಇಲ್ಲಿದೆ
Image
ಸ್ತನ ಕ್ಯಾನ್ಸರ್​ನಿಂದ ಕಿರುತೆರೆ ನಟಿ ಕಮಲಶ್ರೀ ನಿಧನ
Image
‘ನಾನೇನು ಸುಮ್ಮನೆ ಬಿಡಲಿಲ್ಲ’; ಮಾಜಿ ಪತಿ ಮಾಡಿದ ಕೆಟ್ಟ ಕೆಲಸ ಹೇಳಿದ ಜಾನ್ವಿ
Image
ರಕ್ಷಿತ್ ಶೆಟ್ಟಿ ಹಾಗೂ ರುಕ್ಮಿಣಿ ವಸಂತ್ ಮಧ್ಯೆ ಎಷ್ಟು ಸಾಮ್ಯತೆ ಇದೆ ನೋಡಿ

‘ಧಾರಾವಾಹಿ ಬಿಟ್ಟಿರೋ ಕಾರಣವನ್ನು ನಾನು ಎಲ್ಲಿಯೂ ಹೇಳಿಕೊಂಡಿಲ್ಲ. ಒಬ್ಬೊಬ್ಬರು ಒಂದೊಂದು ಕಾರಣ ಹೇಳಿದ್ದಾರೆ. ನನಗೆ ಹೇಳಬೇಕು ಎಂದು ಎನಿಸಿಲ್ಲ. ಒಂದು ಕಾರಣ ನನ್ನ ಎಜ್ಯುಕೇಶನ್ ಆಗಿತ್ತು. ಇದರ ಜೊತೆಗೆ ಇನ್ನೂ ಕೆಲವು ಪರಿಸ್ಥಿತಿಗಳು ಇದ್ದವು. ಒಂದು ವರ್ಷ ಯೋಚನೆ ಮಾಡಿ ತೆಗೆದುಕೊಂಡ ನಿರ್ಧಾರ’ ಎಂದರು ಸಂಜನಾ ಬುರ್ಲಿ.

ಇದನ್ನೂ ಓದಿ: ಸಂಜನಾ ಬುರ್ಲಿ ಬಿಗ್ ಬಾಸ್​ಗೆ ಬರೋದು ಅನುಮಾನ? 

‘ನಾನು ನೋಟಿಸ್ ಪೀರಿಯಡ್ ಕೂಡ ಮಾಡಿದ್ದೆ. ಮೂರು ತಿಂಗಳು ಮೊದಲೇ ಹೇಳಿ, ಶೂಟಿಂಗ್​ ಎಲ್ಲವನ್ನೂ ನೀಟ್ ಆಗಿ ಮುಗಿಸಿಕೊಟ್ಟು ಬಂದಿದ್ದೇನೆ. ನಾನು ಓದೋಕೆ ದೆಹಲಿಗೆ ಹೋಗಿದ್ದೆ. ಅಲ್ಲಿ ಪರಿಸ್ಥಿತಿ ಸರಿ ಇಲ್ಲ ಅಂತ ಎರಡು ತಿಂಗಳು ಬಿಟ್ಟು ಬಂದೆ. ಈಗ ಆನ್​ಲೈನ್​ನಲ್ಲಿ ಓದುತ್ತಿದ್ದೇನೆ. ಮಾಸ್ಟರ್ಸ್ ಮಾಡುತ್ತಿದ್ದೇನೆ. ಬಿಟ್ಟಮೇಲೆ ಕೊಟ್ಟ ರಿಯಾಕ್ಷನ್ ನೋಡಿ ಜನರು ನನ್ನ ಎಷ್ಟು ಇಷ್ಟಪಡ್ತಿದಾರೆ ಅನ್ನೋದು ಗೊತ್ತಾಯಿತು. ಈಗ ನಟನೆಗೆ ಕಂಬ್ಯಾಕ್ ಮಾಡುತ್ತಿದ್ದೇನೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ಆ ಮಾತಿಗೆ ರೊಚ್ಚಿಗೆದ್ದು ವಿಪಕ್ಷ ಶಾಸಕರಿಗೆ ಏಕವಚನದಲ್ಲಿ ಬೈದ ಕೈ ಶಾಸಕ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ತಮ್ಮ‌ ರಕ್ಷಣೆಗೆ ಬೋಟ್ ಆಂಬ್ಯುಲೆನ್ಸ್ ನಿರ್ಮಾಣ, ಮೀನುಗಾರರ ಮಾದರಿ ಹೆಜ್ಜೆ
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಸಿಖ್ಖರನ್ನು ಕೊಂದ ಕುಟುಂಬದ ಕುಡಿಯೊಂದಿಗೆ ಕೈಕುಲುಕುವುದಿಲ್ಲ;ರವನೀತ್ ಬಿಟ್ಟು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಮನಸೋ ಇಚ್ಛೆ ಲೈಸೆನ್ಸ್: ಅಬಕಾರಿ ಇಲಾಖೆಯ ಮತ್ತಷ್ಟು ಕಳ್ಳಾಟ ಬಯಲು
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಬೆಳಗಾವಿ: ಸಿಗರೇಟ್ ಹಣ ಕೇಳಿದ್ದಕ್ಕೆ ಬಿತ್ತು ಪಾನ್ ಶಾಪ್ ಮಾಲೀಕನ ಹೆಣ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಲವ್​​ ಹೆಸರಲ್ಲಿ ಮೋಸ ಮಾಡಿದವನ ಕಾಮುಕತೆ ಬಿಚ್ಚಿಟ್ಟ ಸಂತ್ರಸ್ತೆ
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಬಿಎಂಟಿಸಿ ಬಸ್ ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲೂ UPI ಸ್ಕ್ಯಾನರ್ ಸ್ಕ್ಯಾಮ್
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಲಕ್ಕುಂಡಿಯ ಜೈನ ಬಸದಿಗಳಲ್ಲೂ ನಿಧಿ ಇದ್ಯಾ? ಸರ್ಪಗಳು ಕಾವಲು ಕಾಯ್ತಿದ್ಯಾ?
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
ಸದನದಲ್ಲಿ ವೈಯಕ್ತಿಕವಾಗಿ ಬೈದಾಡಿಕೊಂಡ ಶಾಸಕ ಶರಣು ಸಲಗಾರ್- ಶಿವಲಿಂಗೇಗೌಡ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ
Video: ಬಾಲಕಿಯನ್ನು ಗೂಳಿಯ ದಾಳಿಯಿಂದ ಕಾಪಾಡಿದ ಜನ