AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಮದುವೆ ಸಂಭ್ರಮ; ಅದ್ದೂರಿ ಆರತಕ್ಷತೆ

Sanjana Burli Wedding: ಕಿರುತೆರೆ ನಟಿ ಸಂಜನಾ ಬುರ್ಲಿ ಮತ್ತು ಸಮರ್ಥ್ ಚೆನ್ನಗಿರಿ ಮದುವೆ ಸಂಭ್ರಮ ಜೋರಾಗಿದೆ. ಅದ್ದೂರಿಯಾಗಿ ನಡೆದ ಆರತಕ್ಷತೆ ಕಾರ್ಯಕ್ರಮದ ವಿಡಿಯೋಗಳು ವೈರಲ್ ಆಗಿವೆ. 'ಪುಟ್ಟಕ್ಕನ ಮಕ್ಕಳು', 'ಶ್ರೀ ಗಂಧದಗುಡಿ' ಧಾರಾವಾಹಿಗಳಿಂದ ಖ್ಯಾತಿ ಪಡೆದಿರುವ ಸಂಜನಾ, ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಮದುವೆ ಸಂಭ್ರಮ; ಅದ್ದೂರಿ ಆರತಕ್ಷತೆ
ಸಂಜನಾ-ಸಮರ್ಥ್
ರಾಜೇಶ್ ದುಗ್ಗುಮನೆ
|

Updated on: Mar 25, 2026 | 8:54 AM

Share

ಕಿರುತೆರೆ ನಟಿ ಸಂಜನಾ ಬುರ್ಲಿ (Sanjana Burli) ಮನೆಯಲ್ಲಿ ಈಗ ಮದುವೆ ಸಂಭ್ರಮ ಜೋರಾಗಿದೆ. ಸಮರ್ಥ್ ಚನ್ನಗಿರಿ ಜೊತೆ ಅವರ ವಿವಾಹ ಶಾಸ್ತ್ರ ನಡೆಯುತ್ತಿದೆ. ಅದಕ್ಕೂ ಮೊದಲ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ಇದರ ವಿಡಿಯೋಗಳನ್ನು ಸಂಜನಾ ಬುರ್ಲಿ ಅವರ ಅಭಿಮಾನಿ ಬಳಗದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿಯನ್ನು ಅವರು ಅರ್ಧಕ್ಕೆ ತೊರೆದರು. ಅವರು ಓದುವ ಉದ್ದೇಶದಿಂದ ಈ ಧಾರಾವಾಹಿ ತೊರೆದರು ಎನ್ನಲಾಗಿತ್ತು. ಆ ಬಳಿಕ ಸಂಜನಾ ಅವರು ಕಾಣಿಸಿಕೊಂಡಿದ್ದು, ಕಲರ್ಸ್ ಕನ್ನಡದ ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ. ಈ ಸೀರಿಯಲ್ ಗಮನ ಸೆಳೆಯಿತು. ಈ ಧಾರಾವಾಹಿಯನ್ನು ಸಂಜನಾ ಅರ್ಧಕ್ಕೆ ಬಿಟ್ಟಿದ್ದಾರೆ. ಇದಕ್ಕೆ ಕಾರಣ ವಿವಾಹ.

ಇದನ್ನೂ ಓದಿ: ‘ಶ್ರೀ ಗಂಧದ ಗುಡಿ’ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ ಬುರ್ಲಿ

ಸಮರ್ಥ ಚೆನ್ನಗಿರಿ ಎಂಬುವವರ ಜೊತೆ ಸಂಜನಾ ಬುರ್ಲಿ ಮದುವೆ ಆಗುತ್ತಿದ್ದಾರೆ. ಇಂದು (ಮಾರ್ಚ್ 26) ಅವರ ವಿವಾಹ ನೆರವೇರಬಹುದು ಎಂದು ಊಹಿಸಲಾಗಿದೆ. ಅದಕ್ಕೂ ಮೊದಲು ಅಂದರೆ, ಮಾರ್ಚ್ 24ರಂದು ಸಂಜನಾ ಬುರ್ಲಿ ಅವರ ವಿವಾಹ ಆರತಕ್ಷತೆ ನೆರವೇರಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಂಜನಾ ಅವರು ವಿವಾಹದ ಬಳಿಕ ಮತ್ತೆ ಕಿರುತೆರೆಗೆ ಮರಳಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಈ ಫ್ಯಾನ್ಸ್ ಕೋರಿಕೆಯನ್ನು ಅವರು ಈಡೇರಿಸುತ್ತಾರಾ ಎಂಬ ಕುತೂಹಲ ಮೂಡಿದೆ. ಅವರ ವಿವಾಹ ಫೋಟೋಗಳನ್ನು ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ಇತ್ತೀಚೆಗೆ ನಿಶ್ಚಿತಾರ್ಥದ ಫೋಟೋಗಳನ್ನು ಸಂಜನಾ ಅವರು ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಧರ್ಮ ಮತ್ತು ಅಧರ್ಮ ಯಾವುದಕ್ಕೆ ಹೆಚ್ಚು ಪ್ರಾಶಸ್ತ್ಯ?
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಇಂದು ಈ ರಾಶಿಯವರು ಇಂದು ತಾಳ್ಮೆ ಕಳೆದುಕೊಳ್ಳಬೇಡಿ!
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಬೆಳಗಾವಿ, ಹಾವೇರಿಯಲ್ಲಿ ಭಾರಿ ಮಳೆ: ನದಿಯಂತಾದ ರಸ್ತೆ, ಬೈಕ್​ಗಳು ಮುಳುಗಡೆ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
ಕಾಂಗ್ರೆಸ್ಸಿಗನಾಗಿ ಹುಟ್ಟಿದ್ದೇನೆ, ಕಾಂಗ್ರೆಸ್ಸಿಗನಾಗೇ ಸಾಯ್ತೇನೆ: ಡಿಕೆಶಿ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
‘ಲವ್ ಮಾಕ್ಟೇಲ್ 3’ ಸಿನಿಮಾ ಕಥೆ ಕಾಪಿ? ಎಲ್ಲವನ್ನೂ ವಿವರಿಸಿದ ರಾಘವೇಂದ್ರ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
ಡಾ. ಸಮೀಕ್ಷಾ ರೆಡ್ಡಿ ಸಾವಿನ ಬಗ್ಗೆ ಸ್ಫೋಟಕ ಮಾಹಿತಿ
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
‘ಡಾರ್ಲಿಂಗ್ ಕೃಷ್ಣಗೆ ಕತೆ ಹೇಳಿದ್ದೆ, ಈಗ ಮರ್ತೋಗಿದೆ ಅಂತಿದ್ದಾರೆ’
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಾರ್​​, ರೆಸ್ಟೋರೆಂಟ್​ಗಳಿಗೂ ತಟ್ಟಿದ್ದ ಗ್ಯಾಸ್ ಅಭಾವದ ಎಫೆಕ್ಟ್
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಉಡಿ ತುಂಬಿದ ಮುಸ್ಲಿಂ ಮಹಿಳೆಯರು
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ
ಕಾಲ್ತುಳಿತದಲ್ಲಿ ಮೃತಪಟ್ಟ ಅಭಿಮಾನಿಗಳಿಗೆ ಆರ್​ಸಿಬಿಯಿಂದ ವಿಶೇಷ ನಮನ