AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಮದುವೆ ಸಂಭ್ರಮ; ಅದ್ದೂರಿ ಆರತಕ್ಷತೆ

Sanjana Burli Wedding: ಕಿರುತೆರೆ ನಟಿ ಸಂಜನಾ ಬುರ್ಲಿ ಮತ್ತು ಸಮರ್ಥ್ ಚೆನ್ನಗಿರಿ ಮದುವೆ ಸಂಭ್ರಮ ಜೋರಾಗಿದೆ. ಅದ್ದೂರಿಯಾಗಿ ನಡೆದ ಆರತಕ್ಷತೆ ಕಾರ್ಯಕ್ರಮದ ವಿಡಿಯೋಗಳು ವೈರಲ್ ಆಗಿವೆ. 'ಪುಟ್ಟಕ್ಕನ ಮಕ್ಕಳು', 'ಶ್ರೀ ಗಂಧದಗುಡಿ' ಧಾರಾವಾಹಿಗಳಿಂದ ಖ್ಯಾತಿ ಪಡೆದಿರುವ ಸಂಜನಾ, ಈಗ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ.

ಕಿರುತೆರೆ ನಟಿ ಸಂಜನಾ ಬುರ್ಲಿ ಮನೆಯಲ್ಲಿ ಮದುವೆ ಸಂಭ್ರಮ; ಅದ್ದೂರಿ ಆರತಕ್ಷತೆ
ಸಂಜನಾ-ಸಮರ್ಥ್
ರಾಜೇಶ್ ದುಗ್ಗುಮನೆ
|

Updated on: Mar 25, 2026 | 8:54 AM

Share

ಕಿರುತೆರೆ ನಟಿ ಸಂಜನಾ ಬುರ್ಲಿ (Sanjana Burli) ಮನೆಯಲ್ಲಿ ಈಗ ಮದುವೆ ಸಂಭ್ರಮ ಜೋರಾಗಿದೆ. ಸಮರ್ಥ್ ಚನ್ನಗಿರಿ ಜೊತೆ ಅವರ ವಿವಾಹ ಶಾಸ್ತ್ರ ನಡೆಯುತ್ತಿದೆ. ಅದಕ್ಕೂ ಮೊದಲ ಅದ್ದೂರಿಯಾಗಿ ಆರತಕ್ಷತೆ ಕಾರ್ಯಕ್ರಮ ನಡೆದಿದೆ ಎನ್ನಲಾಗಿದೆ. ಇದರ ವಿಡಿಯೋಗಳನ್ನು ಸಂಜನಾ ಬುರ್ಲಿ ಅವರ ಅಭಿಮಾನಿ ಬಳಗದಲ್ಲಿ ಹಂಚಿಕೊಳ್ಳಲಾಗಿದೆ. ಈ ವಿಡಿಯೋಗ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

ಸಂಜನಾ ಬುರ್ಲಿ ಅವರು ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿಯಲ್ಲಿ ಸ್ನೇಹಾ ಹೆಸರಿನ ಪಾತ್ರ ಮಾಡಿ ಗಮನ ಸೆಳೆದರು. ಈ ಧಾರಾವಾಹಿಯನ್ನು ಅವರು ಅರ್ಧಕ್ಕೆ ತೊರೆದರು. ಅವರು ಓದುವ ಉದ್ದೇಶದಿಂದ ಈ ಧಾರಾವಾಹಿ ತೊರೆದರು ಎನ್ನಲಾಗಿತ್ತು. ಆ ಬಳಿಕ ಸಂಜನಾ ಅವರು ಕಾಣಿಸಿಕೊಂಡಿದ್ದು, ಕಲರ್ಸ್ ಕನ್ನಡದ ‘ಶ್ರೀ ಗಂಧದಗುಡಿ’ ಧಾರಾವಾಹಿಯಲ್ಲಿ. ಈ ಸೀರಿಯಲ್ ಗಮನ ಸೆಳೆಯಿತು. ಈ ಧಾರಾವಾಹಿಯನ್ನು ಸಂಜನಾ ಅರ್ಧಕ್ಕೆ ಬಿಟ್ಟಿದ್ದಾರೆ. ಇದಕ್ಕೆ ಕಾರಣ ವಿವಾಹ.

ಇದನ್ನೂ ಓದಿ: ‘ಶ್ರೀ ಗಂಧದ ಗುಡಿ’ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ ಬುರ್ಲಿ

ಸಮರ್ಥ ಚೆನ್ನಗಿರಿ ಎಂಬುವವರ ಜೊತೆ ಸಂಜನಾ ಬುರ್ಲಿ ಮದುವೆ ಆಗುತ್ತಿದ್ದಾರೆ. ಇಂದು (ಮಾರ್ಚ್ 26) ಅವರ ವಿವಾಹ ನೆರವೇರಬಹುದು ಎಂದು ಊಹಿಸಲಾಗಿದೆ. ಅದಕ್ಕೂ ಮೊದಲು ಅಂದರೆ, ಮಾರ್ಚ್ 24ರಂದು ಸಂಜನಾ ಬುರ್ಲಿ ಅವರ ವಿವಾಹ ಆರತಕ್ಷತೆ ನೆರವೇರಿದೆ. ಇದಕ್ಕೆ ಫ್ಯಾನ್ಸ್ ನಾನಾ ರೀತಿಯಲ್ಲಿ ಕಮೆಂಟ್ ಮಾಡುತ್ತಿದ್ದಾರೆ.

ಸಂಜನಾ ಅವರು ವಿವಾಹದ ಬಳಿಕ ಮತ್ತೆ ಕಿರುತೆರೆಗೆ ಮರಳಬೇಕು ಎಂಬುದು ಅಭಿಮಾನಿಗಳ ಕೋರಿಕೆ. ಈ ಫ್ಯಾನ್ಸ್ ಕೋರಿಕೆಯನ್ನು ಅವರು ಈಡೇರಿಸುತ್ತಾರಾ ಎಂಬ ಕುತೂಹಲ ಮೂಡಿದೆ. ಅವರ ವಿವಾಹ ಫೋಟೋಗಳನ್ನು ನೋಡಲು ಫ್ಯಾನ್ಸ್ ಕೂಡ ಕಾದಿದ್ದಾರೆ. ಇತ್ತೀಚೆಗೆ ನಿಶ್ಚಿತಾರ್ಥದ ಫೋಟೋಗಳನ್ನು ಸಂಜನಾ ಅವರು ಹಂಚಿಕೊಂಡಿದ್ದರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಬೋಳು ತಲೆಯಿದ್ದವರಿಗೆ ಅದೃಷ್ಟವೋ ಅದೃಷ್ಟ! ಯಾಕೆ ಗೊತ್ತಾ?
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ಇಂದು ಈ ರಾಶಿಯವರು ಸ್ನೇಹಿತರೊಂದಿಗೆ ಹಣಕಾಸು ವ್ಯವಹಾರ ಮಾಡಬೇಡಿ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ತಮಿಳುನಾಡಿನಲ್ಲಿ ಸರ್ಕಾರ ರಚಿಸಲು ಎಐಎಡಿಎಂಕೆಗೆ ಬೆಂಬಲ ಘೋಷಿಸಿದ ಎಎಂಎಂಕೆ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?