AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?

ಸಾರಾ ಅಲಿ ಖಾನ್ ಹಾಗೂ ಸಲ್ಮಾನ್​ ಖಾನ್ ಇತ್ತೀಚೆಗೆ ಐಐಎಫ್​ಎ ಅವಾರ್ಡ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಅಬುಧಾಬಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ.

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?
ಸಲ್ಮಾನ್​-ಸಾರಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jun 24, 2022 | 10:07 PM

ಸಲ್ಮಾನ್ ಖಾನ್​ಗೆ (Salman Khan) 56 ವರ್ಷ ಆಗಿದೆ. ಈ ವಯಸ್ಸಿನಲ್ಲೂ ಅವರು ಯುವಕರನ್ನು ನಾಚಿಸುವಂತಿದ್ದಾರೆ. ನಿತ್ಯ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಇಷ್ಟು ವಯಸ್ಸಾಗಿದ್ದರೂ ಅವರಿಗೆ ಯಾರೊಬ್ಬರೂ ಅಂಕಲ್ ಎಂದು ಕರೆಯುವ ಸಾಹಸ ಮಾಡಿಲ್ಲ. ಆದರೆ, ಈಗ ಸಲ್ಮಾನ್ ಖಾನ್​ಗೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan)​ ಅಂಕಲ್ ಎಂದು ಕರೆದಿದ್ದಾರೆ. ಸಲ್ಮಾನ್ ಖಾನ್ ಅವರು ಸಾರಾಗೆ ಫನ್ನಿ ಆಗಿಯೇ ಉತ್ತರ ನೀಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಸಾರಾ ಅಲಿ ಖಾನ್ ಹಾಗೂ ಸಲ್ಮಾನ್​ ಖಾನ್ ಇತ್ತೀಚೆಗೆ ಐಐಎಫ್​ಎ ಅವಾರ್ಡ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಅಬುಧಾಬಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ. ಕಲರ್ಸ್ ವಾಹಿನಿ ಹಲವು ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಅದರಲ್ಲಿ ಸಲ್ಮಾನ್ ಹಾಗೂ ಸಾರಾ ನಡುವಿನ ಫನ್ನಿ ಸಂಭಾಷಣೆ ಕೂಡ ಒಂದು.

ಸಲ್ಮಾನ್ ಖಾನ್​  ಎದುರು ನಿಂತ ಸಾರಾ ‘ನಾನು ಒಂದು ಬ್ರ್ಯಾಂಡ್ ಆರಂಭಿಸುತ್ತಿದ್ದೇನೆ’ ಎಂದಿದ್ದಾರೆ. ಈ ವೇಳೆ ಸಲ್ಮಾನ್ ಅಂಕಲ್ ಎಂದು ಕರೆದಿದ್ದಾರೆ. ಇದಕ್ಕೆ ಉತ್ತರಿಸಿರುವ ಸಲ್ಮಾನ್ ಖಾನ್ ‘ನನ್ನ ಜತೆ ಹೀರೋಯಿನ್ ಆಗಿ ನಟಿಸುವ ಅವಕಾಶವನ್ನು ನೀವು ಕಳೆದುಕೊಂಡಿರಿ’ ಎಂದರು. ಈ ವೇಳೆ ಎಲ್ಲರೂ ನಕ್ಕಿದ್ದಾರೆ.

‘ಐಐಎಫ್​ಎ ಅವಾರ್ಡ್ಸ್​ 2022 ಕಾರ್ಯಕ್ರಮ’ ಅಬುಧಾಬಿಯಲ್ಲಿ ನಡೆಯಿತು. ಜೂನ್​ 25ರಂದು ಕಾರ್ಯಕ್ರಮ ಕಲರ್ಸ್​ನಲ್ಲಿ ಪ್ರಸಾರವಾಗಲಿದೆ. ಸಾರಾ ಈ ಬಾರಿಯ ಐಐಎಫ್​​ಎ ಕಾರ್ಯಕ್ರಮದಲ್ಲಿ ಪರ್ಫಾರ್ಮ್ ಮಾಡಿದ್ದಾರೆ. ಈ ಮೊದಲು ಅವರು ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

View this post on Instagram

A post shared by ColorsTV (@colorstv)

ಸಲ್ಮಾನ್ ಖಾನ್ ಸದ್ಯ, ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಮುಂದಿನ ಶೆಡ್ಯೂಲ್ ಮುಂಬೈನಲ್ಲಿ ನಡೆಯಲಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಸಾಕಷ್ಟು ಟಾಲಿವುಡ್ ಸ್ಟಾರ್​ಗಳನ್ನು ಭೇಟಿ ಆಗುತ್ತಿದ್ದಾರೆ. ರಾಮ್​ ಚರಣ್​ ಅವರು ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾ ಸೆಟ್​ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸಿನಿಮಾ ಆಫರ್ ನೀಡಲಾಗಿತ್ತು ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಸಲ್ಮಾನ್ ಖಾನ್​ ಅವರು ವೈಯಕ್ತಿಕ ವಿಚಾರದಲ್ಲೂ ಇತ್ತೀಚೆಗೆ ಸುದ್ದಿ ಆಗಿದ್ದರು. ಅವರಿಗೆ ಕೊಲೆ ಬೆದರಿಕೆ ಬಂದಿತ್ತು. ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ ಲಾರೆನ್ಸ್ ಬಿಷ್ಣೋಯ್ ಗುಂಪಿನವರು ಸಲ್ಲುಗೆ ಕೊಲೆ ಬೆದರಿಕೆ ವೊಡ್ಡಿದ್ದರು. ನಂತರ ಅವರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಇದನ್ನೂ ಓದಿ: ಬಾಲಿವುಡ್ ನಟ ಸಲ್ಮಾನ್ ಖಾನ್​​​ಗೆ ಜೀವ ಬೆದರಿಕೆ ಪ್ರಕರಣ: ಗ್ಯಾಂಗ್​​ಸ್ಟರ್​​​ ಲಾರೆನ್ಸ್​​​​ ಬಿಷ್ಣೋಯ್​​​ ವಿಚಾರಣೆಗಾಗಿ ದೆಹಲಿಗೆ ಬಂದ ಮುಂಬೈ ಪೊಲೀಸ್

‘ವಿಕ್ರಮ್​’ ಸಿನಿಮಾ ಸಕ್ಸಸ್​ ಪಾರ್ಟಿ ಆಯೋಜಿಸಿದ ಚಿರಂಜೀವಿ; ಗಮನ ಸೆಳೆದ ಸಲ್ಮಾನ್ ಖಾನ್

ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಕೊಪ್ಪಳದ 96 ವರ್ಷದ ಭೀಮವ್ವ ಶಿಳ್ಳೆಕ್ಯಾತರ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಸ್ಪಿನ್ ಲೆಜೆಂಡ್ ಆರ್​. ಅಶ್ವಿನ್​ಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
ಕಪ್ಪು ಬಾವುಟ ಪ್ರದರ್ಶಿಶಿದ ಮಹಿಳೆಯರ ವಿರುದ್ಧ ಕೇಸ್ ದಾಖಲಾಗಿದೆ: ಐಜಿಪಿ
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
Pahalgam Attack: ಪ್ರವಾಸಿಗರೊಬ್ಬರ ಕ್ಯಾಮರಾದಲ್ಲಿ ದಾಳಿ ಭೀಕರ ದೃಶ್ಯ!
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಸಿಎಂ ವರ್ತನೆಯಿಂದ ಅಧಿಕಾರಿ ಮಾನಸಿಕ ಕ್ಷೋಭೆಗೊಳಗಾಗಿರುತ್ತಾರೆ: ಶೆಟ್ಟರ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಪ್ರಧಾನಿ ಹೇಳಿದಂತೆ ಪಾಕ್​ ಅನ್ನು ನುಗ್ಗಿ ವೈರಿಗಳನ್ನು ಸದೆಬಡಿಯಬೇಕು: ಅರುಣ್
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಇದು ಮನವಿ ಅಲ್ಲ ಎಚ್ಚರಿಕೆ ಮತ್ತು ಕಾಂಗ್ರೆಸ್ ಪಕ್ಷದ ಪ್ರತಿಜ್ಞೆ ಎಂದ ಡಿಕೆಶಿ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಪ್ರವಾದಿ, ಬಸವಣ್ಣ ಬಗ್ಗೆ ಯತ್ನಾಳ್​ಗೇನು ಗೊತ್ತು: ಕಾಶಪ್ಪನವರ್, ಶಾಸಕ
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಸಿಎಂ ಸಿದ್ದರಾಮಯ್ಯ ಪಾಕಿಸ್ತಾನಕ್ಕೆ ನಿಜವಾದ ರಾಯಭಾರಿ!: ಆರ್ ಅಶೋಕ್
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ
ಮುಸ್ಲಿಮರ ಓಟಿಗೆ ಮಾರಿಕೊಂಡ ಕಾಂಗ್ರೆಸ್ ಸರ್ಕಾರ: ತೇಜಸ್ವಿ ಸೂರ್ಯ ವಾಗ್ದಾಳಿ