AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?

ಸಾರಾ ಅಲಿ ಖಾನ್ ಹಾಗೂ ಸಲ್ಮಾನ್​ ಖಾನ್ ಇತ್ತೀಚೆಗೆ ಐಐಎಫ್​ಎ ಅವಾರ್ಡ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಅಬುಧಾಬಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ.

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?
ಸಲ್ಮಾನ್​-ಸಾರಾ
TV9 Web
| Edited By: |

Updated on: Jun 24, 2022 | 10:07 PM

Share

ಸಲ್ಮಾನ್ ಖಾನ್​ಗೆ (Salman Khan) 56 ವರ್ಷ ಆಗಿದೆ. ಈ ವಯಸ್ಸಿನಲ್ಲೂ ಅವರು ಯುವಕರನ್ನು ನಾಚಿಸುವಂತಿದ್ದಾರೆ. ನಿತ್ಯ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಇಷ್ಟು ವಯಸ್ಸಾಗಿದ್ದರೂ ಅವರಿಗೆ ಯಾರೊಬ್ಬರೂ ಅಂಕಲ್ ಎಂದು ಕರೆಯುವ ಸಾಹಸ ಮಾಡಿಲ್ಲ. ಆದರೆ, ಈಗ ಸಲ್ಮಾನ್ ಖಾನ್​ಗೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan)​ ಅಂಕಲ್ ಎಂದು ಕರೆದಿದ್ದಾರೆ. ಸಲ್ಮಾನ್ ಖಾನ್ ಅವರು ಸಾರಾಗೆ ಫನ್ನಿ ಆಗಿಯೇ ಉತ್ತರ ನೀಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಸಾರಾ ಅಲಿ ಖಾನ್ ಹಾಗೂ ಸಲ್ಮಾನ್​ ಖಾನ್ ಇತ್ತೀಚೆಗೆ ಐಐಎಫ್​ಎ ಅವಾರ್ಡ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಅಬುಧಾಬಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ. ಕಲರ್ಸ್ ವಾಹಿನಿ ಹಲವು ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಅದರಲ್ಲಿ ಸಲ್ಮಾನ್ ಹಾಗೂ ಸಾರಾ ನಡುವಿನ ಫನ್ನಿ ಸಂಭಾಷಣೆ ಕೂಡ ಒಂದು.

ಸಲ್ಮಾನ್ ಖಾನ್​  ಎದುರು ನಿಂತ ಸಾರಾ ‘ನಾನು ಒಂದು ಬ್ರ್ಯಾಂಡ್ ಆರಂಭಿಸುತ್ತಿದ್ದೇನೆ’ ಎಂದಿದ್ದಾರೆ. ಈ ವೇಳೆ ಸಲ್ಮಾನ್ ಅಂಕಲ್ ಎಂದು ಕರೆದಿದ್ದಾರೆ. ಇದಕ್ಕೆ ಉತ್ತರಿಸಿರುವ ಸಲ್ಮಾನ್ ಖಾನ್ ‘ನನ್ನ ಜತೆ ಹೀರೋಯಿನ್ ಆಗಿ ನಟಿಸುವ ಅವಕಾಶವನ್ನು ನೀವು ಕಳೆದುಕೊಂಡಿರಿ’ ಎಂದರು. ಈ ವೇಳೆ ಎಲ್ಲರೂ ನಕ್ಕಿದ್ದಾರೆ.

‘ಐಐಎಫ್​ಎ ಅವಾರ್ಡ್ಸ್​ 2022 ಕಾರ್ಯಕ್ರಮ’ ಅಬುಧಾಬಿಯಲ್ಲಿ ನಡೆಯಿತು. ಜೂನ್​ 25ರಂದು ಕಾರ್ಯಕ್ರಮ ಕಲರ್ಸ್​ನಲ್ಲಿ ಪ್ರಸಾರವಾಗಲಿದೆ. ಸಾರಾ ಈ ಬಾರಿಯ ಐಐಎಫ್​​ಎ ಕಾರ್ಯಕ್ರಮದಲ್ಲಿ ಪರ್ಫಾರ್ಮ್ ಮಾಡಿದ್ದಾರೆ. ಈ ಮೊದಲು ಅವರು ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

View this post on Instagram

A post shared by ColorsTV (@colorstv)

ಸಲ್ಮಾನ್ ಖಾನ್ ಸದ್ಯ, ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಮುಂದಿನ ಶೆಡ್ಯೂಲ್ ಮುಂಬೈನಲ್ಲಿ ನಡೆಯಲಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಸಾಕಷ್ಟು ಟಾಲಿವುಡ್ ಸ್ಟಾರ್​ಗಳನ್ನು ಭೇಟಿ ಆಗುತ್ತಿದ್ದಾರೆ. ರಾಮ್​ ಚರಣ್​ ಅವರು ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾ ಸೆಟ್​ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸಿನಿಮಾ ಆಫರ್ ನೀಡಲಾಗಿತ್ತು ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಸಲ್ಮಾನ್ ಖಾನ್​ ಅವರು ವೈಯಕ್ತಿಕ ವಿಚಾರದಲ್ಲೂ ಇತ್ತೀಚೆಗೆ ಸುದ್ದಿ ಆಗಿದ್ದರು. ಅವರಿಗೆ ಕೊಲೆ ಬೆದರಿಕೆ ಬಂದಿತ್ತು. ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ ಲಾರೆನ್ಸ್ ಬಿಷ್ಣೋಯ್ ಗುಂಪಿನವರು ಸಲ್ಲುಗೆ ಕೊಲೆ ಬೆದರಿಕೆ ವೊಡ್ಡಿದ್ದರು. ನಂತರ ಅವರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಇದನ್ನೂ ಓದಿ: ಬಾಲಿವುಡ್ ನಟ ಸಲ್ಮಾನ್ ಖಾನ್​​​ಗೆ ಜೀವ ಬೆದರಿಕೆ ಪ್ರಕರಣ: ಗ್ಯಾಂಗ್​​ಸ್ಟರ್​​​ ಲಾರೆನ್ಸ್​​​​ ಬಿಷ್ಣೋಯ್​​​ ವಿಚಾರಣೆಗಾಗಿ ದೆಹಲಿಗೆ ಬಂದ ಮುಂಬೈ ಪೊಲೀಸ್

‘ವಿಕ್ರಮ್​’ ಸಿನಿಮಾ ಸಕ್ಸಸ್​ ಪಾರ್ಟಿ ಆಯೋಜಿಸಿದ ಚಿರಂಜೀವಿ; ಗಮನ ಸೆಳೆದ ಸಲ್ಮಾನ್ ಖಾನ್

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ