AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?

ಸಾರಾ ಅಲಿ ಖಾನ್ ಹಾಗೂ ಸಲ್ಮಾನ್​ ಖಾನ್ ಇತ್ತೀಚೆಗೆ ಐಐಎಫ್​ಎ ಅವಾರ್ಡ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಅಬುಧಾಬಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ.

ಸಲ್ಮಾನ್ ಖಾನ್​ಗೆ ಅಂಕಲ್​ ಎಂದು ಕರೆದ ಸಾರಾ ಅಲಿ ಖಾನ್​; ನಟನ ರಿಯಾಕ್ಷನ್ ಹೇಗಿತ್ತು?
ಸಲ್ಮಾನ್​-ಸಾರಾ
TV9 Web
| Edited By: |

Updated on: Jun 24, 2022 | 10:07 PM

Share

ಸಲ್ಮಾನ್ ಖಾನ್​ಗೆ (Salman Khan) 56 ವರ್ಷ ಆಗಿದೆ. ಈ ವಯಸ್ಸಿನಲ್ಲೂ ಅವರು ಯುವಕರನ್ನು ನಾಚಿಸುವಂತಿದ್ದಾರೆ. ನಿತ್ಯ ಜಿಮ್​ನಲ್ಲಿ ವರ್ಕೌಟ್ ಮಾಡುತ್ತಾರೆ. ಇಷ್ಟು ವಯಸ್ಸಾಗಿದ್ದರೂ ಅವರಿಗೆ ಯಾರೊಬ್ಬರೂ ಅಂಕಲ್ ಎಂದು ಕರೆಯುವ ಸಾಹಸ ಮಾಡಿಲ್ಲ. ಆದರೆ, ಈಗ ಸಲ್ಮಾನ್ ಖಾನ್​ಗೆ ಬಾಲಿವುಡ್ ನಟಿ ಸಾರಾ ಅಲಿ ಖಾನ್ (Sara Ali Khan)​ ಅಂಕಲ್ ಎಂದು ಕರೆದಿದ್ದಾರೆ. ಸಲ್ಮಾನ್ ಖಾನ್ ಅವರು ಸಾರಾಗೆ ಫನ್ನಿ ಆಗಿಯೇ ಉತ್ತರ ನೀಡಿದ್ದಾರೆ. ಈ ವಿಡಿಯೋ ಸಖತ್ ವೈರಲ್ ಆಗುತ್ತಿದೆ.

ಸಾರಾ ಅಲಿ ಖಾನ್ ಹಾಗೂ ಸಲ್ಮಾನ್​ ಖಾನ್ ಇತ್ತೀಚೆಗೆ ಐಐಎಫ್​ಎ ಅವಾರ್ಡ್​ ಕಾರ್ಯಕ್ರಮದಲ್ಲಿ ಭಾಗಿ ಆಗಿದ್ದರು. ಇದು ಅಬುಧಾಬಿಯಲ್ಲಿ ನಡೆದಿತ್ತು. ಈ ಕಾರ್ಯಕ್ರಮ ಕಲರ್ಸ್ ವಾಹಿನಿಯಲ್ಲಿ ಪ್ರಸಾರ ಆಗುತ್ತಿದೆ. ಕಲರ್ಸ್ ವಾಹಿನಿ ಹಲವು ಪ್ರೋಮೋಗಳನ್ನು ಹಂಚಿಕೊಳ್ಳುತ್ತಿದೆ. ಅದರಲ್ಲಿ ಸಲ್ಮಾನ್ ಹಾಗೂ ಸಾರಾ ನಡುವಿನ ಫನ್ನಿ ಸಂಭಾಷಣೆ ಕೂಡ ಒಂದು.

ಸಲ್ಮಾನ್ ಖಾನ್​  ಎದುರು ನಿಂತ ಸಾರಾ ‘ನಾನು ಒಂದು ಬ್ರ್ಯಾಂಡ್ ಆರಂಭಿಸುತ್ತಿದ್ದೇನೆ’ ಎಂದಿದ್ದಾರೆ. ಈ ವೇಳೆ ಸಲ್ಮಾನ್ ಅಂಕಲ್ ಎಂದು ಕರೆದಿದ್ದಾರೆ. ಇದಕ್ಕೆ ಉತ್ತರಿಸಿರುವ ಸಲ್ಮಾನ್ ಖಾನ್ ‘ನನ್ನ ಜತೆ ಹೀರೋಯಿನ್ ಆಗಿ ನಟಿಸುವ ಅವಕಾಶವನ್ನು ನೀವು ಕಳೆದುಕೊಂಡಿರಿ’ ಎಂದರು. ಈ ವೇಳೆ ಎಲ್ಲರೂ ನಕ್ಕಿದ್ದಾರೆ.

‘ಐಐಎಫ್​ಎ ಅವಾರ್ಡ್ಸ್​ 2022 ಕಾರ್ಯಕ್ರಮ’ ಅಬುಧಾಬಿಯಲ್ಲಿ ನಡೆಯಿತು. ಜೂನ್​ 25ರಂದು ಕಾರ್ಯಕ್ರಮ ಕಲರ್ಸ್​ನಲ್ಲಿ ಪ್ರಸಾರವಾಗಲಿದೆ. ಸಾರಾ ಈ ಬಾರಿಯ ಐಐಎಫ್​​ಎ ಕಾರ್ಯಕ್ರಮದಲ್ಲಿ ಪರ್ಫಾರ್ಮ್ ಮಾಡಿದ್ದಾರೆ. ಈ ಮೊದಲು ಅವರು ಹಲವು ಫೋಟೋಗಳನ್ನು ಹಂಚಿಕೊಂಡಿದ್ದರು.

View this post on Instagram

A post shared by ColorsTV (@colorstv)

ಸಲ್ಮಾನ್ ಖಾನ್ ಸದ್ಯ, ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಈ ಚಿತ್ರದ ಶೂಟಿಂಗ್ ಹೈದರಾಬಾದ್​ನಲ್ಲಿ ನಡೆಯುತ್ತಿದೆ. ಮುಂದಿನ ಶೆಡ್ಯೂಲ್ ಮುಂಬೈನಲ್ಲಿ ನಡೆಯಲಿದೆ. ಇತ್ತೀಚೆಗೆ ಸಲ್ಮಾನ್ ಖಾನ್ ಅವರು ಸಾಕಷ್ಟು ಟಾಲಿವುಡ್ ಸ್ಟಾರ್​ಗಳನ್ನು ಭೇಟಿ ಆಗುತ್ತಿದ್ದಾರೆ. ರಾಮ್​ ಚರಣ್​ ಅವರು ‘ಕಭಿ ಈದ್​ ಕಭಿ ದಿವಾಲಿ’ ಸಿನಿಮಾ ಸೆಟ್​ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರಿಗೆ ಸಿನಿಮಾ ಆಫರ್ ನೀಡಲಾಗಿತ್ತು ಎನ್ನುವ ಸುದ್ದಿ ಹರಿದಾಡಿತ್ತು. ಆದರೆ, ಈ ಬಗ್ಗೆ ಚಿತ್ರತಂಡ ಅಧಿಕೃತವಾಗಿ ಮಾಹಿತಿ ನೀಡಿಲ್ಲ.

ಸಲ್ಮಾನ್ ಖಾನ್​ ಅವರು ವೈಯಕ್ತಿಕ ವಿಚಾರದಲ್ಲೂ ಇತ್ತೀಚೆಗೆ ಸುದ್ದಿ ಆಗಿದ್ದರು. ಅವರಿಗೆ ಕೊಲೆ ಬೆದರಿಕೆ ಬಂದಿತ್ತು. ಸಿಧು ಮೂಸೆವಾಲಾ ಅವರನ್ನು ಹತ್ಯೆ ಮಾಡಿದ ಲಾರೆನ್ಸ್ ಬಿಷ್ಣೋಯ್ ಗುಂಪಿನವರು ಸಲ್ಲುಗೆ ಕೊಲೆ ಬೆದರಿಕೆ ವೊಡ್ಡಿದ್ದರು. ನಂತರ ಅವರು ಪೊಲೀಸ್​ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು.

ಇದನ್ನೂ ಓದಿ: ಬಾಲಿವುಡ್ ನಟ ಸಲ್ಮಾನ್ ಖಾನ್​​​ಗೆ ಜೀವ ಬೆದರಿಕೆ ಪ್ರಕರಣ: ಗ್ಯಾಂಗ್​​ಸ್ಟರ್​​​ ಲಾರೆನ್ಸ್​​​​ ಬಿಷ್ಣೋಯ್​​​ ವಿಚಾರಣೆಗಾಗಿ ದೆಹಲಿಗೆ ಬಂದ ಮುಂಬೈ ಪೊಲೀಸ್

‘ವಿಕ್ರಮ್​’ ಸಿನಿಮಾ ಸಕ್ಸಸ್​ ಪಾರ್ಟಿ ಆಯೋಜಿಸಿದ ಚಿರಂಜೀವಿ; ಗಮನ ಸೆಳೆದ ಸಲ್ಮಾನ್ ಖಾನ್

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ