‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​

ಸಾರಾ ಖಾನ್​ ಹಾಗೂ ಅಲಿ ಮರ್ಚಂಟ್​ ಅವರು 2010ರಲ್ಲಿ ಹಿಂದಿ ಬಿಗ್​ ಬಾಸ್​ 4ಕ್ಕೆ ಎಂಟ್ರಿ ಪಡೆದಿದ್ದರು. ಇಬ್ಬರೂ ಬಿಗ್ ಬಾಸ್ ಮನೆಯಲ್ಲೇ ಮದುವೆ ಆದರು. ವಿ

‘ಬಿಗ್​ ಬಾಸ್​’ನಲ್ಲಿ ಮದುವೆ ಆದ ಜೋಡಿಗೆ ಚಾನೆಲ್​ನವರಿಂದ ಸಿಕ್ಕಿತ್ತು 50 ಲಕ್ಷ ರೂ.; ಎರಡೇ ತಿಂಗಳಿಗೆ ಡಿವೋರ್ಸ್​
ಬಿಬ್​ ಬಾಸ್​
Follow us
| Updated By: ರಾಜೇಶ್ ದುಗ್ಗುಮನೆ

Updated on: Mar 19, 2022 | 6:00 AM

‘ಬಿಗ್​ ಬಾಸ್​’ ಮನೆಯಲ್ಲಿ (Bigg Boss House) ಪ್ರೀತಿ ಹುಟ್ಟಿಕೊಳ್ಳೋದು ಸರ್ವೇ ಸಾಮಾನ್ಯ. ಬಿಗ್​ ಬಾಸ್​ ಮನೆಯಲ್ಲಿ ಹುಟ್ಟಿದ ಪ್ರೀತಿಯಲ್ಲಿ ಕೆಲವು ಹಸೆಮಣೆವರೆಗೆ (Marriage) ಹೋಗಿದೆ. ಇನ್ನೂ ಕೆಲವು ಬ್ರೇಕಪ್​ನಲ್ಲಿ ಅಂತ್ಯವಾಗಿದೆ. ಆದರೆ, ಬಿಗ್​ ಬಾಸ್​ನಲ್ಲೇ ಮದುವೆ ಆದ ಜೋಡಿ ಬಗ್ಗೆ ನಿಮಗೆ ಗೊತ್ತಾ? ಹೀಗೊಂದು ಘಟನೆ 2010ರಲ್ಲಿ ನಡೆದಿತ್ತು. ಅಚ್ಚರಿ ಎಂದರೆ, ‘ನಾವು ಬಿಗ್​ ಬಾಸ್​ ಮನೆಯಲ್ಲಿ ಮದುವೆ ಆಗೋಕೆ 50 ಲಕ್ಷ ರೂಪಾಯಿ ಹಣವನ್ನು (Money) ​ ಚಾನೆಲ್​ನವರು ನೀಡಿದ್ದರು’ ಎಂದು ಈ ಜೋಡಿ ಹೇಳಿಕೊಂಡಿತ್ತು. ಆದರೆ, ವಾಹಿನಿಯವರು ಇದನ್ನು ಅಲ್ಲಗಳೆದಿದ್ದರು. ಹಾಗಾದರೆ, ಯಾರು ಇವರು? ಆ ಪ್ರಶ್ನೆಗೆ ಇಲ್ಲಿದೆ ಉತ್ತರ.

ಸಾರಾ ಖಾನ್​ ಹಾಗೂ ಅಲಿ ಮರ್ಚಂಟ್​ ಅವರು 2010ರಲ್ಲಿ ಹಿಂದಿ ಬಿಗ್​ ಬಾಸ್​ 4ಕ್ಕೆ ಎಂಟ್ರಿ ಪಡೆದಿದ್ದರು. ಇಬ್ಬರೂ ಬಿಗ್ ಬಾಸ್ ಮನೆಯಲ್ಲೇ ಮದುವೆ ಆದರು. ವಿಚಿತ್ರ ಎಂದರೆ, ಮದುವೆ ಆದ ಎರಡೇ ತಿಂಗಳಿಗೆ ಈ ಸಂಬಂಧ ಮುರಿದು ಬಿದ್ದಿತ್ತು. ಪತಿಯಿಂದ ಪದೇಪದೇ ಮೋಸ ಹೋಗಿದ್ದರಿಂದ ಈ ರೀತಿಯ ನಿರ್ಧಾರಕ್ಕೆ ಬಂದಿದ್ದೆ ಎಂದು ಸಾರಾ ಈಗ ಹೇಳಿಕೊಂಡಿದ್ದಾರೆ.

ಸಾರಾ ಹಾಗೂ ಅಲಿ ಇಬ್ಬರೂ ಒಟ್ಟಿಗೆ ಬಿಗ್ ಬಾಸ್ ಮನೆಗೆ ಬಂದರು. ಅಲಿ ಅವರು ಬಿಗ್ ಬಾಸ್​ ಮನೆಯಲ್ಲಿ ಸಾರಾಗೆ ಪ್ರಪೋಸ್​ ಮಾಡಿದರು. ಬಿಗ್​ ಬಾಸ್​ ಮನೆಯಲ್ಲೇ ಇವರ ವಿವಾಹ ನೆರವೇರಿತು. ಈ ಗಿಮಿಕ್​ ಮಾಡೋಕೆ ಚಾನೆಲ್​ನವರು ನಮಗೆ 50 ಲಕ್ಷ ರೂಪಾಯಿ ನೀಡಿದ್ದಾಗಿ ಈ ಜೋಡಿ ಹೇಳಿಕೊಂಡಿತ್ತು. ಆದರೆ, ಚಾನೆಲ್​ನವರು ಇದನ್ನು ಅಲ್ಲಗಳೆದಿದ್ದರು. ಮದುವೆ ಆಗಿ ಎರಡೇ ತಿಂಗಳಿಗೆ ಇಬ್ಬರೂ ಬೇರೆ ಆದರು.

ನಡೆದಿತ್ತು ನಿರಂತರ ಮೋಸ

ಆಲ್ಟ್​ಬಾಲಾಜಿ ಹಾಗೂ ಎಂಎಕ್ಸ್​ ಪ್ಲೇಯರ್​ನಲ್ಲಿ ಪ್ರಸಾರವಾಗುವ ‘ಲಾಕಪ್​’ ಶೋಗೆ ಸಾರಾ ಸ್ಪರ್ಧಿಯಾಗಿ ಬಂದಿದ್ದಾರೆ. ಈ ವೇಳೆ ಅವರು ತಮಗಾದ ಮೋಸದ ಬಗ್ಗೆ ಹೇಳಿಕೊಂಡಿದ್ದಾರೆ. ‘ಅಲಿ ಯಾವಾಗಲೂ ನನಗೆ ಮೋಸ ಮಾಡಲು ಪ್ರಯತ್ನಿಸುತ್ತಲೇ ಇದ್ದ. ಅದು ನನಗೆ ಕಿರಿಕಿರಿ ಉಂಟು ಮಾಡಿತ್ತು. ನಾನು ಅವರಿಗೆ ಸಾಕಷ್ಟು ಅವಕಾಶಗಳನ್ನು ನೀಡಿದ್ದೇನೆ. ಅವಕಾಶ ಕೊಟ್ಟಾಗಲೆಲ್ಲ ಅವರು ಸಿಕ್ಕಿ ಬಿದ್ದಿದ್ದರು. ಅಲಿ ಹೇಳುತ್ತಿದ್ದ ಪ್ರತಿಯೊಂದು ಸುಳ್ಳನ್ನೂ ನಾನು ಕಂಡು ಹಿಡಿದಿದ್ದೇನೆ. ನಾನು ಅವರಿಗೆ ಕನಿಷ್ಠ 350 ಅವಕಾಶಗಳನ್ನು ನೀಡಿದ್ದೆ. ಏಕೆಂದರೆ ಅವರು ನನಗೆ ಮುಖ್ಯವಾದ ವ್ಯಕ್ತಿ ಆಗಿದ್ದರು. ಆದರೆ, ಮತ್ತೆ ಮೋಸ ಹೋದೆ. ಅದರಿಂದ ಹೊರಬರಲು, ಎಲ್ಲವನ್ನೂ ಬಿಟ್ಟು ನನ್ನ ಜೀವನದಲ್ಲಿ ಮುಂದೆ ಸಾಗಲು ನಾನು ನಾಲ್ಕೂವರೆ ವರ್ಷಗಳನ್ನು ತೆಗೆದುಕೊಂಡೆ’ ಎಂದಿದ್ದಾರೆ ಸಾರಾ.

ಇದನ್ನೂ ಓದಿ: ಜಾನ್ವಿ ಕಪೂರ್​ ನಟಿ ಆಗೋದು ತಾಯಿ ಶ್ರೀದೇವಿಗೆ ಇಷ್ಟ ಇರಲಿಲ್ಲ; ಕಾರಣ ಏನು?

Janhvi Kapoor: ಮಾದಕ ಲುಕ್​ನಿಂದ ಪಡ್ಡೆಗಳ ನಿದ್ದೆ ಕದ್ದ ಜಾನ್ವಿ ಕಪೂರ್​

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ