AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SaReGaMaPa Finale: ‘ಸರಿಗಮಪ’ ಫೈನಲಿಸ್ಟ್ ಇವರೇ ನೋಡಿ; ಫಿನಾಲೆ ಮತ್ತಷ್ಟು ಕಠಿಣ

SaReGaMaPa Finalist Name: ಸರಿಗಮಪ ಸಂಗೀತ ಕಾರ್ಯಕ್ರಮದ ಫೈನಲ್ ಹಂತಕ್ಕೆ ಆರು ಸ್ಪರ್ಧಿಗಳು ಆಯ್ಕೆಯಾಗಿದ್ದಾರೆ. ಈ ತಿಂಗಳಲ್ಲಿ ‘ಟಿಕೆಟ್ ಟು ಫಿನಾಲೆ’ ನಡೆದಿತ್ತು. ಈ ಪೈಕಿ 13 ಸ್ಪರ್ಧಿಗಳು ಭಾಗವಹಿಸಿದ್ದರು. ಈ ಪೈಕಿ ಇಬ್ಬರಿಗೆ ಇಬ್ಬರಿ ಟಿಕೆಟ್ ಸಿಕ್ಕಿತ್ತು. ಕಳೆದ ವಾರ ನಡೆದ ಸೆಮಿ ಫೈನಲ್​ನಲ್ಲಿ ನಾಲ್ಕು ಮಂದಿಗೆ ಫಿನಾಲೆ ಟಿಕೆಟ್ ಸಿಕ್ಕಿದೆ.

SaReGaMaPa Finale: ‘ಸರಿಗಮಪ’ ಫೈನಲಿಸ್ಟ್ ಇವರೇ ನೋಡಿ; ಫಿನಾಲೆ ಮತ್ತಷ್ಟು ಕಠಿಣ
ಸರಿಗಮಪ ಫೈನಲಿಸ್ಟ್
ರಾಜೇಶ್ ದುಗ್ಗುಮನೆ
| Edited By: |

Updated on:May 26, 2025 | 8:38 AM

Share

ಹಲವು ತಿಂಗಳ ಕಾಲ ಎಲ್ಲರನ್ನೂ ರಂಜಿಸಿದ ‘ಸರಿಗಮಪ’ ಶೋ (Saregamapa) ಈಗ ಫಿನಾಲೆ ಹಂತ ತಲುಪಿದೆ. ಸ್ಪರ್ಧಿಗಳ ಮಧ್ಯೆ ಒಳ್ಳೆಯ ಕಾಂಪಿಟೇಷನ್ ಇತ್ತು. ಹಲವು ತಿಂಗಳು ನಡೆದ ಈ ಶೋ ಈಗ ಫಿನಾಲೆ ಹಂತಕ್ಕೆ ಬಂದಿದೆ. ಕಳೆದ ವಾರ (ಮೇ 24 ಹಾಗೂ 25) ಅದ್ದೂರಿಯಾಗಿ ಸೆಮಿ ಫೈನಲ್ ನಡೆದಿದೆ. ಈ ಪೈಕಿ ಆರು ಮಂದಿ ಫೈನಲ್​ಗೆ ಆಯ್ಕೆ ಆಗಿದ್ದಾರೆ. ಇವರ ಪೈಕಿ ಫಿನಾಲೆಯಲ್ಲಿ ಯಾರು ಕಪ್ ಗೆಲ್ಲುತ್ತಾರೆ ಎನ್ನುವ ಕುತೂಹಲ ವೀಕ್ಷಕರಿಗೆ ಮೂಡಿದೆ. ಇನ್ನೂ ಕೆಲವರು ತಮ್ಮ ನೆಚ್ಚಿನ ಸ್ಪರ್ಧಿಗಳು ಫಿನಾಲೆಗೆ ಆಯ್ಕೆ ಆಗಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

ಈ ಬಾರಿ ತೀರ್ಪುಗಾರರ ಸ್ಥಾನದಲ್ಲಿ ಮೂವರು ಜಡ್ಜ್​ಗಳು ಇದ್ದರು. ರಾಜೇಶ್ ಕೃಷ್ಣನ್, ಅರ್ಜುನ್ ಜನ್ಯ ಹಾಗೂ ವಿಜಯ್ ಪ್ರಕಾಶ್. ಇವರಲ್ಲದೆ, ಜ್ಯೂರಿ ಸ್ಥಾನದಲ್ಲಿ ಸಂಗೀತ ಕ್ಷೇತ್ರದ ನಿಪುಣರು ಇದ್ದರು.  ಇವರೆಲ್ಲರ ಮಾರ್ಗದರ್ಶನದಲ್ಲಿ ಅನೇಕ ಸ್ಪರ್ಧಿಗಳು ವೇದಿಕೆ ಏರಿದ್ದರು. ಈ ಪೈಕಿ ಆರು ಮಂದಿಗೆ ಫೈನಲ್​ಗೆ ಏರುವ ಭಾಗ್ಯ ಸಿಕ್ಕಿದೆ. ಈ ತಿಂಗಳಲ್ಲಿ ‘ಟಿಕೆಟ್ ಟು ಫಿನಾಲೆ’ ನಡೆದಿತ್ತು. ಈ ಪೈಕಿ 13 ಸ್ಪರ್ಧಿಗಳು ಭಾಗವಹಿಸಿದ್ದರು. ಬಾಳು ಬೆಳಗುಂದಿ, ದ್ಯಾಮೇಶ, ಲಹರಿ, ಭೂಮಿಕಾ, ಮನೋಜ್, ರಶ್ಮಿ ಡಿ, ಕಾರ್ತಿಕ್, ಅಮೋಘ ವರ್ಷ, ಸುಧೀಕ್ಷಾ, ಆಗಮ ಶಾಸ್ತ್ರೀ, ದೀಪಕ್, ಶಿವಾನಿ ಮತ್ತು ಆರಾಧ್ಯ ರಾವ್ ನಡುವೆ ಹಣಾಹಣಿ ಏರ್ಪಟ್ಟಿತ್ತು. ಈ ವೇಳೆ ಆರಾಧ್ಯಾ ಹಾಗೂ ಶಿವಾನಿ ಅವರಿಗೆ ನೇರವಾಗಿ ಫಿನಾಲೆ ಟಿಕೆಟ್ ಸಿಕ್ಕಿತ್ತು.

ಇದನ್ನೂ ಓದಿ
Image
‘ಕಾಂತಾರ: ಚಾಪ್ಟರ್ 1’ ಅಡಚಣೆ; ಅಂದುಕೊಂಡ ದಿನಾಂಕದಲ್ಲೇ ಚಿತ್ರ ರಿಲೀಸ್
Image
ಮಹೇಶ್ ಬಾಬು ಕುಟುಂಬದಲ್ಲಿ ಕೊವಿಡ್; ಅಭಿಮಾನಿಗಳಲ್ಲಿ ಹೆಚ್ಚಿತು ಆತಂಕ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

ಜೀಕನ್ನಡ ಹಂಚಿಕೊಂಡ ಫಿನಾಲೆ ಸ್ಪರ್ಧಿಗಳು

View this post on Instagram

A post shared by Zee Kannada (@zeekannada)

s

ಮೇ 24 ಹಾಗೂ 25ರಂದು ನಡೆದ ಸೆಮಿ ಫೈನಲ್​ನಲ್ಲಿ ರಶ್ಮಿ, ಬಾಳು ಬೆಳಗುಂದಿ, ದ್ಯಾಮೇಶ್ ಹಾಗೂ ಅಮೋಘ ವರ್ಷಗೆ ಫಿನಾಲೆಗೆ ಏರುವ ಅವಕಾಶ ಸಿಕ್ಕಿದೆ. ಈ ಮೂಲಕ ಫಿನಾಲೆಯಲ್ಲಿ ಶಿವಾನಿ, ರಶ್ಮಿ ಡಿ, ಬಾಳು ಬೆಳಗುಂದಿ, ಆರಾಧ್ಯಾ ರಾವ್, ದ್ಯಾಮೇಶ್ ಹಾಗೂ ಅಮೋಘ ವರ್ಷ ಇದ್ದಾರೆ.

ಇದನ್ನೂ ಓದಿ: ‘ಸರಿಗಮಪ’ ಫಿನಾಲೆ ಟಿಕೆಟ್ ಪಡೆದ ಆರಾಧ್ಯಾ ರಾವ್ ಧ್ವನಿ ಅದೆಷ್ಟು ಸುಮಧುರ ಕೇಳಿ

ಇನ್ನು ವೀಕ್ಷಕರಿಗೆ ನೆಚ್ಚಿನ ಶೋನಲ್ಲಿ ನೆಚ್ಚಿನ ಸ್ಪರ್ಧಿ ಇರುತ್ತಾರೆ. ಅವರು ಆಯ್ಕೆ ಆಗಿಲ್ಲ ಎಂದಾಗ ಬೇಸರ ಆಗೋದು ಸಾಮಾನ್ಯ. ಈ ರೀತಿ ಈ ಮೊದಲು ಕೂಡ ಆಗಿತ್ತು. ಅದೇ ರೀತಿ ಲಹರಿ ಉತ್ತಮವಾಗಿ ಹಾಡಿದ್ದು, ಅವರಿಗೆ ಟಿಕೆಟ್ ಸಿಗಬೇಕು ಎಂದು ಅನೇಕರು ಅಭಿಪ್ರಾಯ ಹೊರಹಾಕಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:07 am, Mon, 26 May 25

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು