AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?

ಈ ಬಾರಿಯ ‘ಸರಿಗಮಪ’ ಫಿನಾಲೆ ಕೊಪ್ಪಳದಲ್ಲಿ ನಡೆದಿದೆ. ಅದ್ದೂರಿ ವೇದಿಕೆ ಮೇಲೆ ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದರು.

‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?
ಪ್ರಗತಿ-ಶಿವಾನಿ
ರಾಜೇಶ್ ದುಗ್ಗುಮನೆ
|

Updated on: Apr 17, 2023 | 11:12 AM

Share

‘ಸರಿಗಮಪ’ (Sa Re Ga Ma Pa) ರಿಯಾಲಿಟಿ ಶೋ ಹಲವು ಸೀಸನ್​​ಗಳನ್ನು ಯಶಸ್ವಿ ಆಗಿ ಪೂರೈಸಿದೆ. ಏಪ್ರಿಲ್ 15 ಹಾಗೂ 16ರಂದು ‘ಸರಿಗಮಪ ಲಿಟಲ್​ ಚಾಂಪ್ಸ್​ ಸೀಸನ್ 19ರ’ ಫಿನಾಲೆ ಎಪಿಸೋಡ್ ಪ್ರಸಾರ ಕಂಡಿದೆ. ಪ್ರಗತಿ ಬಡಿಗೇರ್ ಅವರು ಈ ಟೈಟಲ್ ಗೆದ್ದಿದ್ದಾರೆ. ಅವರಿಗೆ ಒಂದು ಸೈಟ್ ಹಾಗೂ ನಗದು ಬಹುಮಾನ ಸಿಕ್ಕಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಫಿನಾಲೇ ರೇಸ್​​ನಲ್ಲಿದ್ದ ಶಿವಾನಿ (Shivani) ಅವರು ಮೊದಲ ರನ್ನರ್ ಅಪ್ ಆದರೆ, ಮಂಗಳೂರಿನ ಪ್ರತಿಭೆ ತನುಶ್ರೀ ಎರಡನೇ ರನ್ನರ್ ಅಪ್ ಆಗಿದ್ದಾರೆ. ಅವರೆಲ್ಲರಿಗೂ ಶುಭಾಶಯ ಬರುತ್ತಿದೆ.

‘ಸರಿಗಮಪ’ ಶೋನ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತದೆ. ಆದರೆ, ಫಿನಾಲೆ ಮಾತ್ರ ರಾಜ್ಯದ ವಿವಿಧ ನಗರಗಳಲ್ಲಿ ನಡೆಸಲಾಗುತ್ತದೆ. ಈ ಬಾರಿಯ ‘ಸರಿಗಮಪ’ ಫಿನಾಲೆ ಕೊಪ್ಪಳದಲ್ಲಿ ನಡೆದಿದೆ. ಅದ್ದೂರಿ ವೇದಿಕೆ ಮೇಲೆ ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದರು. ಹಂಸಲೇಖ ಅವರು ಮಹಾಗುರುಗಳಾಗಿ ವೇದಿಕೆ ಮೇಲಿದ್ದರು. ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಮೊದಲಾದವರು ಜಡ್ಜ್​ ಸ್ಥಾನದಲ್ಲಿದ್ದರು. ಅಂತಿಮ ಹಂತದಲ್ಲಿ ಪ್ರಗತಿ, ಶಿವಾನಿ ಹಾಗೂ ತನುಶ್ರೀ ಇದ್ದರು. ಈ ಪೈಕಿ ಪ್ರಗತಿ ಗೆದ್ದು ಬೀಗಿದ್ದಾರೆ.

ವಿನ್ನರ್ ಆದ ಪ್ರಗತಿ ಬಡಿಗೇರ್​ಗೆ ನೆಲಮಂಗಲ ಪ್ರಾಜೆಕ್ಟ್​​ನಲ್ಲಿ 30-40 ಅಡಿಯ ಸೈಟ್ ಸಿಕ್ಕಿದೆ. 21 ಲಕ್ಷ ರೂಪಾಯಿ ಇದರ ಮೌಲ್ಯ. ಇದರ ಜೊತೆ 4 ಲಕ್ಷ ರೂಪಾಯಿ ನಗದು ದೊರೆತಿದೆ. ಮೊದಲ ರನ್ನರ್​ಅಪ್​ ಶಿವಾನಿಗೆ 20 ಲಕ್ಷ ರೂಪಾಯಿ ಕ್ಯಾಶ್ ಸಿಕ್ಕಿದೆ. ಎರಡನೇ ರನ್ನರ್ ಅಪ್​ ತನುಶ್ರೀಗೆ ಐದು ಲಕ್ಷ ರೂಪಾಯಿ ಎಲೆಕ್ಟ್ರಿಕ್ ವಾಹನ ಹಾಗೂ ಐದು ಲಕ್ಷ ರೂಪಾಯಿ ನಗದು ದೊರೆತಿದೆ.

ಇದನ್ನೂ ಓದಿ: Anchor Anushree: ‘ಸರಿಗಮಪ’ ಜಡ್ಜ್​​ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್

ಪ್ರತಿ ರಿಯಾಲಿಟಿ ಶೋನಲ್ಲಿ ಯಾರೇ ವಿನ್ ಆದರೂ ಒಂದು ಚರ್ಚೆ ಹುಟ್ಟಿಕೊಳ್ಳುತ್ತದೆ. ಅದೇ ರೀತಿ, ‘ಸರಿಗಮಪ ಲಿಟಲ್​ ಚಾಂಪ್ಸ್’ 19ನೇ ಸೀಸನ್ ಕೂಡ ಚರ್ಚೆ ಹುಟ್ಟುಹಾಕಿದೆ. ಅನೇಕರು ಶಿವಾನಿ ಅವರು ಗೆಲ್ಲಬೇಕಿತ್ತು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇನ್ನೂ ಕೆಲವರು, ‘ಶಿವಾನಿ ನಮ್ಮ ವಿನ್ನರ್’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಮನೆಯಿಂದ ಹೊರಡುವಾಗ ಹೊಸ್ತಿಲಿಗೆ ನಮಸ್ಕರಿಸಿ ಹೊರಡಬೇಕು, ಯಾಕೆ ಗೊತ್ತಾ?
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಇಂದು ಈ ರಾಶಿಯವರ ಬಳಿ ಬರಲಿವೆ ಹೊಸ ಹೊಸ ಅವಕಾಶಗಳು!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನ ಬುಡಕಟ್ಟು ಮಹಿಳೆಯ ಪಾದ ಮುಟ್ಟಿ ನಮಸ್ಕರಿಸಿದ ಪ್ರಧಾನಿ ಮೋದಿ!
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಅಸ್ಸಾಂನಲ್ಲಿ 19,480 ಕೋಟಿ ರೂ. ಮೌಲ್ಯದ ಯೋಜನೆಗಳನ್ನು ಉದ್ಘಾಟಿಸಿದ ಮೋದಿ
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ಸಿದ್ದರಾಮಯ್ಯ ಆಪ್ತ ಶಾಸಕನ ಕೈಯಲ್ಲಿ ಮಿಂಚಿದ 18 ಲಕ್ಷ ರೂ. ವಾಚ್‌
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ನೌಕಾ ಡ್ರೋನ್​ಗಳು, ಕ್ಷಿಪಣಿಗಳ ಭೂಗತ ಸುರಂಗದ ವಿಡಿಯೋ ಬಿಡುಗಡೆ ಮಾಡಿದ ಇರಾನ್
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
ಪುನೀತ್ ಇಲ್ಲದೇ ‘ಆಕಾಶ್’ ಸಿನಿಮಾ ನೋಡೋಕೆ ಕಷ್ಟ ಆಗುತ್ತದೆ: ರಾಘಣ್ಣ ಭಾವುಕ
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
13 ವರ್ಷ ನಂತರ ಜೈಲಿನಿಂದ ರಿಲೀಸ್ ಆಗುತ್ತಿದ್ದಂತೆಯೇ ಕೈದಿ ಫುಲ್ ಖುಷ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಬೌಲರ್​ಗೆ ಬಾಲ್ ನೀಡಿ ರನೌಟ್ ಆದ ಪಾಕ್ ಬ್ಯಾಟರ್
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?
ಯುವಕ ಸ್ಟೇಜ್​​​​ ಮೇಲೇರಿ ಸಿದ್ದರಾಮಯ್ಯಗೆ ಹೇಳಿದ್ದೇನು ಗೊತ್ತಾ?