‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?

ಈ ಬಾರಿಯ ‘ಸರಿಗಮಪ’ ಫಿನಾಲೆ ಕೊಪ್ಪಳದಲ್ಲಿ ನಡೆದಿದೆ. ಅದ್ದೂರಿ ವೇದಿಕೆ ಮೇಲೆ ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದರು.

‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?
ಪ್ರಗತಿ-ಶಿವಾನಿ
Follow us
|

Updated on: Apr 17, 2023 | 11:12 AM

‘ಸರಿಗಮಪ’ (Sa Re Ga Ma Pa) ರಿಯಾಲಿಟಿ ಶೋ ಹಲವು ಸೀಸನ್​​ಗಳನ್ನು ಯಶಸ್ವಿ ಆಗಿ ಪೂರೈಸಿದೆ. ಏಪ್ರಿಲ್ 15 ಹಾಗೂ 16ರಂದು ‘ಸರಿಗಮಪ ಲಿಟಲ್​ ಚಾಂಪ್ಸ್​ ಸೀಸನ್ 19ರ’ ಫಿನಾಲೆ ಎಪಿಸೋಡ್ ಪ್ರಸಾರ ಕಂಡಿದೆ. ಪ್ರಗತಿ ಬಡಿಗೇರ್ ಅವರು ಈ ಟೈಟಲ್ ಗೆದ್ದಿದ್ದಾರೆ. ಅವರಿಗೆ ಒಂದು ಸೈಟ್ ಹಾಗೂ ನಗದು ಬಹುಮಾನ ಸಿಕ್ಕಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಫಿನಾಲೇ ರೇಸ್​​ನಲ್ಲಿದ್ದ ಶಿವಾನಿ (Shivani) ಅವರು ಮೊದಲ ರನ್ನರ್ ಅಪ್ ಆದರೆ, ಮಂಗಳೂರಿನ ಪ್ರತಿಭೆ ತನುಶ್ರೀ ಎರಡನೇ ರನ್ನರ್ ಅಪ್ ಆಗಿದ್ದಾರೆ. ಅವರೆಲ್ಲರಿಗೂ ಶುಭಾಶಯ ಬರುತ್ತಿದೆ.

‘ಸರಿಗಮಪ’ ಶೋನ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತದೆ. ಆದರೆ, ಫಿನಾಲೆ ಮಾತ್ರ ರಾಜ್ಯದ ವಿವಿಧ ನಗರಗಳಲ್ಲಿ ನಡೆಸಲಾಗುತ್ತದೆ. ಈ ಬಾರಿಯ ‘ಸರಿಗಮಪ’ ಫಿನಾಲೆ ಕೊಪ್ಪಳದಲ್ಲಿ ನಡೆದಿದೆ. ಅದ್ದೂರಿ ವೇದಿಕೆ ಮೇಲೆ ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದರು. ಹಂಸಲೇಖ ಅವರು ಮಹಾಗುರುಗಳಾಗಿ ವೇದಿಕೆ ಮೇಲಿದ್ದರು. ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಮೊದಲಾದವರು ಜಡ್ಜ್​ ಸ್ಥಾನದಲ್ಲಿದ್ದರು. ಅಂತಿಮ ಹಂತದಲ್ಲಿ ಪ್ರಗತಿ, ಶಿವಾನಿ ಹಾಗೂ ತನುಶ್ರೀ ಇದ್ದರು. ಈ ಪೈಕಿ ಪ್ರಗತಿ ಗೆದ್ದು ಬೀಗಿದ್ದಾರೆ.

ವಿನ್ನರ್ ಆದ ಪ್ರಗತಿ ಬಡಿಗೇರ್​ಗೆ ನೆಲಮಂಗಲ ಪ್ರಾಜೆಕ್ಟ್​​ನಲ್ಲಿ 30-40 ಅಡಿಯ ಸೈಟ್ ಸಿಕ್ಕಿದೆ. 21 ಲಕ್ಷ ರೂಪಾಯಿ ಇದರ ಮೌಲ್ಯ. ಇದರ ಜೊತೆ 4 ಲಕ್ಷ ರೂಪಾಯಿ ನಗದು ದೊರೆತಿದೆ. ಮೊದಲ ರನ್ನರ್​ಅಪ್​ ಶಿವಾನಿಗೆ 20 ಲಕ್ಷ ರೂಪಾಯಿ ಕ್ಯಾಶ್ ಸಿಕ್ಕಿದೆ. ಎರಡನೇ ರನ್ನರ್ ಅಪ್​ ತನುಶ್ರೀಗೆ ಐದು ಲಕ್ಷ ರೂಪಾಯಿ ಎಲೆಕ್ಟ್ರಿಕ್ ವಾಹನ ಹಾಗೂ ಐದು ಲಕ್ಷ ರೂಪಾಯಿ ನಗದು ದೊರೆತಿದೆ.

ಇದನ್ನೂ ಓದಿ: Anchor Anushree: ‘ಸರಿಗಮಪ’ ಜಡ್ಜ್​​ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್

ಪ್ರತಿ ರಿಯಾಲಿಟಿ ಶೋನಲ್ಲಿ ಯಾರೇ ವಿನ್ ಆದರೂ ಒಂದು ಚರ್ಚೆ ಹುಟ್ಟಿಕೊಳ್ಳುತ್ತದೆ. ಅದೇ ರೀತಿ, ‘ಸರಿಗಮಪ ಲಿಟಲ್​ ಚಾಂಪ್ಸ್’ 19ನೇ ಸೀಸನ್ ಕೂಡ ಚರ್ಚೆ ಹುಟ್ಟುಹಾಕಿದೆ. ಅನೇಕರು ಶಿವಾನಿ ಅವರು ಗೆಲ್ಲಬೇಕಿತ್ತು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇನ್ನೂ ಕೆಲವರು, ‘ಶಿವಾನಿ ನಮ್ಮ ವಿನ್ನರ್’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ತಾಜಾ ಸುದ್ದಿ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
ಮಂಗಳವಾರದ ಬೆಂಗಳೂರು ಬಂದ್ ಗೆ ಪ್ರಾಯಶಃ ಹೋಟೆಲ್ ಮಾಲೀಕರ ಬೆಂಬಲವಿಲ್ಲ
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
13 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗ್ತಿದ್ದ ಗೋದಾಮು ಅರ್ಧಕ್ಕೆ ನಿಂತಿದೆ!
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಕುಮಾರಸ್ವಾಮಿ ದೇವತಾ ಮನುಷ್ಯ, ನಾವೆಲ್ಲ ಪಾಪಿಗಳು: ಭೈರತಿ ಸುರೇಶ್, ಸಚಿವ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸಹಕಾರ ಸಚಿವ ಕೆಎನ್ ರಾಜಣ್ಣನಿಗೆ ಮೈತುಂಬಾ ದುರಹಂಕಾರ: ಹೆಚ್ ಡಿ ಕುಮಾರಸ್ವಾಮಿ
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಸರ್ಕಾರದ ಬೇಜವಾಬ್ದಾರಿ ಕಾವೇರಿ ನೀರಿನ ಸಮಸ್ಯೆ ಸೃಷ್ಟಿಸಿದೆ: ಕುಮಾರಸ್ವಾಮಿ 
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
ಜೆಡಿಎಸ್-ಬಿಜೆಪಿ ಮೈತ್ರಿಗೆ ಮುಸಲ್ಮಾನರ ವೋಟು ಬೇಕಿಲ್ಲ: ಬಸನಗೌಡ ಯತ್ನಾಳ್
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
91ನೇ ಇಳಿವಯಸ್ಸಿನಲ್ಲಿ ಕನ್ನಡಿಗರನ್ನು ಉಳಿಸಲು ಹೋರಾಡುತ್ತಿದ್ದೇನೆ: ದೇವೇಗೌಡ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
ನ್ಯಾಯಾಲಯದಲ್ಲಿ ಕಾವೇರಿ ವಿವಾದ ನಾಳೆ ಪುನಃ ವಿಚಾರಣೆಗೆ ಬರಲಿದೆ:ಸಿದ್ದರಾಮಯ್ಯ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
‘ಮುಂಡರಗಿ ಬರಪೀಡಿತ’ ಎಂದು ಘೋಷಿಸುವಂತೆ ಆಗ್ರಹಿಸಿ ಬಂದ್ ಗೆ ಕರೆ
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,
ಚಾಮರಾಜನಗರ: ನಿವೇಶನ ಕೊಡಿ, ಇಲ್ಲ ದಯಾಮರಣ ಅನುಮತಿ ನೀಡಿ,