AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?

ಈ ಬಾರಿಯ ‘ಸರಿಗಮಪ’ ಫಿನಾಲೆ ಕೊಪ್ಪಳದಲ್ಲಿ ನಡೆದಿದೆ. ಅದ್ದೂರಿ ವೇದಿಕೆ ಮೇಲೆ ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದರು.

‘ಸರಿಗಮಪ ಲಿಟಲ್​​ ಚಾಂಪ್ಸ್’ ವಿನ್ನರ್​ ಪ್ರಗತಿ ಬಡಿಗೇರ್​ಗೆ 21 ಲಕ್ಷ ಮೌಲ್ಯದ ಸೈಟ್​; ಶಿವಾನಿಗೆ ಏನು?
ಪ್ರಗತಿ-ಶಿವಾನಿ
ರಾಜೇಶ್ ದುಗ್ಗುಮನೆ
|

Updated on: Apr 17, 2023 | 11:12 AM

Share

‘ಸರಿಗಮಪ’ (Sa Re Ga Ma Pa) ರಿಯಾಲಿಟಿ ಶೋ ಹಲವು ಸೀಸನ್​​ಗಳನ್ನು ಯಶಸ್ವಿ ಆಗಿ ಪೂರೈಸಿದೆ. ಏಪ್ರಿಲ್ 15 ಹಾಗೂ 16ರಂದು ‘ಸರಿಗಮಪ ಲಿಟಲ್​ ಚಾಂಪ್ಸ್​ ಸೀಸನ್ 19ರ’ ಫಿನಾಲೆ ಎಪಿಸೋಡ್ ಪ್ರಸಾರ ಕಂಡಿದೆ. ಪ್ರಗತಿ ಬಡಿಗೇರ್ ಅವರು ಈ ಟೈಟಲ್ ಗೆದ್ದಿದ್ದಾರೆ. ಅವರಿಗೆ ಒಂದು ಸೈಟ್ ಹಾಗೂ ನಗದು ಬಹುಮಾನ ಸಿಕ್ಕಿದೆ. ಅವರಿಗೆ ಎಲ್ಲರೂ ಅಭಿನಂದನೆ ತಿಳಿಸುತ್ತಿದ್ದಾರೆ. ಫಿನಾಲೇ ರೇಸ್​​ನಲ್ಲಿದ್ದ ಶಿವಾನಿ (Shivani) ಅವರು ಮೊದಲ ರನ್ನರ್ ಅಪ್ ಆದರೆ, ಮಂಗಳೂರಿನ ಪ್ರತಿಭೆ ತನುಶ್ರೀ ಎರಡನೇ ರನ್ನರ್ ಅಪ್ ಆಗಿದ್ದಾರೆ. ಅವರೆಲ್ಲರಿಗೂ ಶುಭಾಶಯ ಬರುತ್ತಿದೆ.

‘ಸರಿಗಮಪ’ ಶೋನ ಶೂಟಿಂಗ್ ಬೆಂಗಳೂರಿನಲ್ಲಿ ನಡೆಯುತ್ತದೆ. ಆದರೆ, ಫಿನಾಲೆ ಮಾತ್ರ ರಾಜ್ಯದ ವಿವಿಧ ನಗರಗಳಲ್ಲಿ ನಡೆಸಲಾಗುತ್ತದೆ. ಈ ಬಾರಿಯ ‘ಸರಿಗಮಪ’ ಫಿನಾಲೆ ಕೊಪ್ಪಳದಲ್ಲಿ ನಡೆದಿದೆ. ಅದ್ದೂರಿ ವೇದಿಕೆ ಮೇಲೆ ಅನುಶ್ರೀ ಅವರು ಆ್ಯಂಕರಿಂಗ್ ಮಾಡಿದರು. ಹಂಸಲೇಖ ಅವರು ಮಹಾಗುರುಗಳಾಗಿ ವೇದಿಕೆ ಮೇಲಿದ್ದರು. ವಿಜಯ್ ಪ್ರಕಾಶ್, ಅರ್ಜುನ್ ಜನ್ಯ ಮೊದಲಾದವರು ಜಡ್ಜ್​ ಸ್ಥಾನದಲ್ಲಿದ್ದರು. ಅಂತಿಮ ಹಂತದಲ್ಲಿ ಪ್ರಗತಿ, ಶಿವಾನಿ ಹಾಗೂ ತನುಶ್ರೀ ಇದ್ದರು. ಈ ಪೈಕಿ ಪ್ರಗತಿ ಗೆದ್ದು ಬೀಗಿದ್ದಾರೆ.

ವಿನ್ನರ್ ಆದ ಪ್ರಗತಿ ಬಡಿಗೇರ್​ಗೆ ನೆಲಮಂಗಲ ಪ್ರಾಜೆಕ್ಟ್​​ನಲ್ಲಿ 30-40 ಅಡಿಯ ಸೈಟ್ ಸಿಕ್ಕಿದೆ. 21 ಲಕ್ಷ ರೂಪಾಯಿ ಇದರ ಮೌಲ್ಯ. ಇದರ ಜೊತೆ 4 ಲಕ್ಷ ರೂಪಾಯಿ ನಗದು ದೊರೆತಿದೆ. ಮೊದಲ ರನ್ನರ್​ಅಪ್​ ಶಿವಾನಿಗೆ 20 ಲಕ್ಷ ರೂಪಾಯಿ ಕ್ಯಾಶ್ ಸಿಕ್ಕಿದೆ. ಎರಡನೇ ರನ್ನರ್ ಅಪ್​ ತನುಶ್ರೀಗೆ ಐದು ಲಕ್ಷ ರೂಪಾಯಿ ಎಲೆಕ್ಟ್ರಿಕ್ ವಾಹನ ಹಾಗೂ ಐದು ಲಕ್ಷ ರೂಪಾಯಿ ನಗದು ದೊರೆತಿದೆ.

ಇದನ್ನೂ ಓದಿ: Anchor Anushree: ‘ಸರಿಗಮಪ’ ಜಡ್ಜ್​​ಗಳ ಜತೆ ಅನುಶ್ರೀ ಸಂಕ್ರಾಂತಿ ಸಂಭ್ರಮ; ಫೋಟೋ ವೈರಲ್

ಪ್ರತಿ ರಿಯಾಲಿಟಿ ಶೋನಲ್ಲಿ ಯಾರೇ ವಿನ್ ಆದರೂ ಒಂದು ಚರ್ಚೆ ಹುಟ್ಟಿಕೊಳ್ಳುತ್ತದೆ. ಅದೇ ರೀತಿ, ‘ಸರಿಗಮಪ ಲಿಟಲ್​ ಚಾಂಪ್ಸ್’ 19ನೇ ಸೀಸನ್ ಕೂಡ ಚರ್ಚೆ ಹುಟ್ಟುಹಾಕಿದೆ. ಅನೇಕರು ಶಿವಾನಿ ಅವರು ಗೆಲ್ಲಬೇಕಿತ್ತು ಎಂದು ಅಭಿಪ್ರಾಯ ಹಂಚಿಕೊಂಡಿದ್ದಾರೆ. ಇನ್ನೂ ಕೆಲವರು, ‘ಶಿವಾನಿ ನಮ್ಮ ವಿನ್ನರ್’ ಎಂದು ಬರೆದುಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ