AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಟಿಆರ್​ಪಿಯಲ್ಲಿ ಬಿಗ್ ಬಾಸ್​ನೂ ಹಿಂದಿಕ್ಕಿದ ‘ಸರಿಗಮಪ’; ಹೊಸ ದಾಖಲೆ ಸೃಷ್ಟಿ

ಇತ್ತೀಚಿನ ಟಿಆರ್​ಪಿ ವರದಿಯ ಪ್ರಕಾರ, ಜೀ ಕನ್ನಡದ ‘ಸರಿಗಮಪ’ ಸಂಗೀತ ಕಾರ್ಯಕ್ರಮವು ಬಿಗ್ ಬಾಸ್ ಟಿಆರ್​ಪಿ ಅನ್ನು ಹಿಂದಿಕ್ಕಿದೆ. ಬಿಗ್ ಬಾಸ್ ವಾರಾಂತ್ಯದ ಎಪಿಸೋಡ್‌ಗಳಿಗೆ ಉತ್ತಮ ಪ್ರತಿಕ್ರಿಯೆ ದೊರೆತಿದ್ದರೂ, ಸರಿಗಮಪ ಒಟ್ಟಾರೆ ಟಿಆರ್​ಪಿಯಲ್ಲಿ ಮುಂಚೂಣಿಯಲ್ಲಿದೆ. ಯಾವ ಶೋನ ಟಿಆರ್​ಪಿ ಎಷ್ಟು ಎಂಬ ಬಗ್ಗೆ ಇಲ್ಲಿದೆ ವಿವರ.

ಟಿಆರ್​ಪಿಯಲ್ಲಿ ಬಿಗ್ ಬಾಸ್​ನೂ ಹಿಂದಿಕ್ಕಿದ ‘ಸರಿಗಮಪ’; ಹೊಸ ದಾಖಲೆ ಸೃಷ್ಟಿ
ಬಿಗ್ ಬಾಸ್
ರಾಜೇಶ್ ದುಗ್ಗುಮನೆ
|

Updated on:Jan 03, 2025 | 2:32 PM

Share

ಇಷ್ಟು ದಿನಗಳ ಕಾಲ ಟಿಆರ್​ಪಿಯಲ್ಲಿ ಬಿಗ್ ಬಾಸ್ ಪಾರುಪತ್ಯ ಸಾಧಿಸುತ್ತಾ ಬರುತ್ತಿತ್ತು. ಎಲ್ಲಾ ಧಾರಾವಾಹಿಗಳ ಟಿಆರ್​ಪಿಯನ್ನು ಬೀಟ್ ಮಾಡಿ ಬಿಗ್ ಬಾಸ್ ಮೊದಲ ಸ್ಥಾನದಲ್ಲಿ ಇರುತ್ತಿತ್ತು. ಆದರೆ, ಬೇಟೆಗಾರನನ್ನು ಬೇಟೆ ಆಡುವ ರಣ ಬೇಟೆಗಾರ ಬಂದ ಎಂಬ ಡೈಲಾಗ್​​ಬಂತೆ ‘ಬಿಗ್ ಬಾಸ್’ ದಾಖಲೆಯನ್ನು ‘ಸರಿಗಮಪ’ ಹಿಂದಿಕ್ಕಿದೆ. ಭರ್ಜರಿ ಟಿಆರ್​ಪಿ ಪಡೆಯುವ ಮೂಲಕ ಈ ಶೋ ಮೊದಲ ಸ್ಥಾನ ಪಡೆದಿದೆ.

52ನೇ ವಾರದ ಟಿಆರ್​ಪಿ ಪ್ರಕಾರ, ಬಿಗ್ ಬಾಸ್​ಗೆ ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ವಾರದ ದಿನ 8 ಟಿವಿಆರ್, ಶನಿವಾರ 9.1 ಟಿವಿಆರ್ ಹಾಗೂ ಭಾನುವಾರ 10 ಟಿವಿಆರ್​ ಸ್ಕಿದೆ. ವಾರಾಂತ್ಯದಲ್ಲಿ ಸುದೀಪ್ ಅವರು ಇರುವ ಕಾರಣ ಶೋಗೆ ಭರ್ಜರಿ ಟಿಆರ್​ಪಿ ದೊರೆಯುತ್ತಿದೆ. ಅಚ್ಚರಿ ಎಂಬಂತೆ ಬಿಗ್ ಬಾಸ್ ಟಿಆರ್​ಪಿಯನ್ನು ಸರಿಗಮಪ ಹಿಂದಿಕ್ಕಿದೆ.

ಇದನ್ನೂ ಓದಿ: ಸರಿಗಮಪ ಶೋನಿಂದ ರಾಜೇಶ್ ಕೃಷ್ಣನ್ ಹೊರಹೋಗಲು ಅನುಶ್ರೀ ಕಾರಣ’; ಅಚ್ಚರಿ ವಿಚಾರ ಹೇಳಿದ ವಿಜಯ್ ಪ್ರಕಾಶ್

‘ಸರಿಗಮಪ’ ಆಡಿಷನ್ ಇತ್ತೀಚೆಗೆ ಪೂರ್ಣಗೊಂಡಿದೆ. ಶನಿವಾರ ಹಾಗೂ ಭಾನುವಾರ ಸಂಜೆ 7.30ರಿಂದ 9 ಗಂಟೆವರೆಗೆ ಈ ಶೋ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ಆಡಿಷನ್ ಎಪಿಸೋಡ್ ಉತ್ತಮ ಟಿಆರ್​ಪಿ ಪಡೆದುಕೊಂಡಿದೆ. ನಗರ ಹಾಗೂ ಗ್ರಾಮಾಂತರ ಭಾಗದಲ್ಲಿ 11.1 ಟಿವಿಆರ್ ಹಾಗೂ ಗ್ರಾಮೀಣ ಭಾಗದಲ್ಲಿ 13.1 ಟಿವಿಆರ್ ಈ ಶೋಗೆ ಸಿಕ್ಕಿದೆ. ಈ ಮೂಲಕ ಬಿಗ್ ಬಾಸ್​ನ ಶೋ ಹಿಂದಿಕ್ಕಿದೆ. ‘ಸರಿಗಮಪ’ ಶೋನಲ್ಲಿ ಅನುಶ್ರೀ ಅವರು ಆ್ಯಂಕರಿಂಗ್ ಮಾಡುತ್ತಿದ್ದಾರೆ. ರಾಜೇಶ್ ಕೃಷ್ಣನ್, ವಿಜಯ್ ಪ್ರಕಾಶ್ ಹಾಗೂ ಅರ್ಜುನ್ ಜನ್ಯ ಜಡ್ಜ್ ಸ್ಥಾನದಲ್ಲಿ ಇದ್ದಾರೆ.

ಧಾರಾವಾಹಿಗಳ ಟಿಆರ್​ಪಿ

ಧಾರಾವಾಹಿಗಳ ಟಿಆರ್​ಪಿ ವಿಚಾರಕ್ಕೆ ಬರೋದಾದರೆ, ‘ಲಕ್ಷ್ಮೀ ನಿವಾಸ’ ಧಾರಾವಾಹಿ ಮೊದಲ ಸ್ಥಾನದಲ್ಲಿ ಇದೆ. ಎರಡನೇ ಸ್ಥಾನದಲ್ಲಿ ‘ಅಮೃತಧಾರೆ’ ಹಾಗೂ ‘ಅಣ್ಣಯ್ಯ’ ಧಾರಾವಾಹಿಗಳು ಇವೆ. ಮೂರನೇ ಸ್ಥಾನದಲ್ಲಿ ‘ಪುಟ್ಟಕ್ಕನ ಮಕ್ಕಳು’, ನಾಲ್ಕನೇ ಸ್ಥಾನದಲ್ಲಿ ‘ಶ್ರಾವಣಿ ಸುಬ್ರಮಣ್ಯ’ ಹಾಗೂ ಐದನೇ ಸ್ಥಾನದಲ್ಲಿ ‘ಭಾಗ್ಯ ಲಕ್ಷ್ಮೀ’ ಧಾರಾವಾಹಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 2:30 pm, Fri, 3 January 25

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್