AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

36 ಸ್ಪರ್ಧಿಗಳ ಜತೆ ಬರುತ್ತಿದೆ ಸರಿಗಮಪ; ಅದ್ದೂರಿ ಪ್ರೋಮೋಗೆ ಪ್ರೇಕ್ಷಕರು ಫಿದಾ

ಈ ಬಾರಿ ಬರೋಬ್ಬರಿ 36 ಸ್ಪರ್ಧಿಗಳೊಂದಿಗೆ ‘ಸರಿಗಮಪ’ ಚಾಂಪಿಯನ್​ಶಿಪ್​ ಆರಂಭಗೊಳ್ಳುತ್ತಿದೆ. ಅಂದರೆ, ಈ ಬಾರಿಯ ಶೋ ಕೊಂಚ ದೀರ್ಘವಾಗಿರಲಿದೆ ಎಂಬುದಕ್ಕೆ ಈ ಶೋನ ಸ್ಪರ್ಧಿಗಳ ಸಂಖ್ಯೆಯೇ ಕಾರಣ. ಪ್ರ

36 ಸ್ಪರ್ಧಿಗಳ ಜತೆ ಬರುತ್ತಿದೆ ಸರಿಗಮಪ; ಅದ್ದೂರಿ ಪ್ರೋಮೋಗೆ ಪ್ರೇಕ್ಷಕರು ಫಿದಾ
36 ಸ್ಪರ್ಧಿಗಳ ಜತೆ ಬರುತ್ತಿದೆ ಸರಿಗಮಪ; ಅದ್ದೂರಿ ಪ್ರೋಮೋಗೆ ಪ್ರೇಕ್ಷಕರು ಫಿದಾ
TV9 Web
| Edited By: |

Updated on:Sep 15, 2021 | 12:31 PM

Share

‘ಸರಿಗಮಪ’ ಸಂಗೀತ ರಿಯಾಲಿಟಿ ಶೋಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಾಕಷ್ಟು ಮಂದಿ ಈ ವೇದಿಕೆ ಮೂಲಕ ಗುರುತಿಸಿಕೊಂಡಿದ್ದಾರೆ. ಇನ್ನು, ಈ ಕಾರ್ಯಕ್ರಮವನ್ನು ನೆಚ್ಚಿಕೊಂಡ ವೀಕ್ಷಕರ ಸಂಖ್ಯೆ ದೊಡ್ಡದಿದೆ. ಈಗ ಈ ಕಾರ್ಯಕ್ರಮ ಜೀ ಕನ್ನಡದಲ್ಲಿ ಸೆಪ್ಟೆಂಬರ್​ 18ರಿಂದ ಮತ್ತೆ ಪ್ರಸಾರವಾಗುತ್ತಿದೆ. ಈ ಬಗ್ಗೆ ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಈ ಸುದ್ದಿ ಕೇಳಿ ಸಂಗೀತ ಪ್ರಿಯರು ಖುಷಿಯಾಗಿದ್ದಾರೆ.

ಈ ಬಾರಿ ಬರೋಬ್ಬರಿ 36 ಸ್ಪರ್ಧಿಗಳೊಂದಿಗೆ ‘ಸರಿಗಮಪ’ ಚಾಂಪಿಯನ್​ಶಿಪ್​ ಆರಂಭಗೊಳ್ಳುತ್ತಿದೆ. ಅಂದರೆ, ಈ ಬಾರಿಯ ಶೋ ಕೊಂಚ ದೀರ್ಘವಾಗಿರಲಿದೆ ಎಂಬುದಕ್ಕೆ ಈ ಶೋನ ಸ್ಪರ್ಧಿಗಳ ಸಂಖ್ಯೆಯೇ ಕಾರಣ. ಪ್ರತಿ ವರ್ಷದಂತೆ ಈ ಬಾರಿಯೂ ನಾದಬ್ರಹ್ಮ ಹಂಸಲೇಖ ಅವರು ಈ ಶೋನ ಮಹಾಗುರು ಆಗಿ ಕಾಣಿಸಿಕೊಳ್ಳಲಿದ್ದಾರೆ. ವಿಜಯ್​ ಪ್ರಕಾಶ್​ ಹಾಗೂ ಅರ್ಜುನ್​ ಜನ್ಯ ಜಡ್ಜ್​ ಆಗಿ ಕಾಣಿಸಿಕೊಳ್ಳುತ್ತಿದ್ದಾರೆ. ಖ್ಯಾತ ಆ್ಯಂಕರ್​ ಅನುಶ್ರೀ ಈ ಶೋನ ನಿರೂಪಣೆ ಮಾಡಲಿದ್ದಾರೆ.

‘ಸ್ವರ ಸಂಸ್ಥಾನದಲ್ಲಿ 36 ಚಾಂಪಿಯನ್ ಗಾಯಕರ ಸಂಗೀತ ಸಮರ. ಶಾರದಾಂಬೆಯ ಅನುಗ್ರಹ , ಮಹಾಗುರು ಹಂಸಲೇಖ ಅವರ ಸಾರಥ್ಯ. ಅರ್ಜುನ್ ಜನ್ಯ ,ವಿಜಯ್ ಪ್ರಕಾಶ್ ತೀರ್ಪುಗಾರಿಕೆಯೊಂದಿಗೆ  6 ಶ್ರೇಷ್ಠ ಸಂಗೀತಗಾರರ ಮಾರ್ಗದರ್ಶನದಲ್ಲಿ ಶುರುವಾಗಲಿದೆ ಸರಿಗಮಪ ಚಾಂಪಿಯನ್ ಶಿಪ್’ ಎಂದು ಜೀ ಕನ್ನಡ ವಾಹಿನಿ ಪ್ರೋಮೋ ಹಂಚಿಕೊಂಡಿದೆ. ಈ ಪ್ರೋಮೋ ಅದ್ದೂರಿಯಾಗಿದೆ. ಈ ಪ್ರೋಮೋ ಸಾಕಷ್ಟು ಜನರ ಗಮನ ಸೆಳೆದಿದೆ. ಈ ಪ್ರೋಮೋದಲ್ಲಿ 36 ಸ್ಪರ್ಧಿಗಳೂ ಕಾಣಿಸಿಕೊಂಡಿದ್ದಾರೆ. ಅಂತಿಮವಾಗಿ ಒಬ್ಬರಿಗೆ ಸರಿಗಮಪ ಚಾಂಪಿಯನ್​ಶಿಪ್​ ಒಲಿಯಲಿದೆ.

View this post on Instagram

A post shared by Zee Kannada (@zeekannada)

ಸರಿಗಮಪ ಆರಂಭವಾದರೆ ಸಂಗೀತ ಪ್ರಿಯರಿಗೆ ರಸದೌತಣ ಸಿಕ್ಕಂತಾಗಲಿದೆ. ಈಗಾಗಲೇ ಕಲರ್ಸ್​ ಕನ್ನಡ ವಾಹಿನಿಯಲ್ಲಿ ಪ್ರತಿ ಶನಿವಾರ ಹಾಗೂ ಭಾನುವಾರ ರಾತ್ರಿ 9 ಗಂಟೆಗೆ ಎದೆ ತುಂಬಿ ಹಾಡುವೆನು ಕಾರ್ಯಕ್ರಮ ಪ್ರಸಾರವಾಗುತ್ತಿದೆ. ಈಗ ಶನಿವಾರ ಹಾಗೂ ಭಾನುವಾರ ಜೀಕನ್ನಡ ವಾಹಿನಿಯಲ್ಲಿ ರಾತ್ರಿ 7:30ರಿಂದ ಸರಿಗಮಪ ಬರಲಿದೆ. ಇದು ಸಂಗೀತ ಪ್ರಿಯರ ಖುಷಿ ಹೆಚ್ಚಿಸಿದೆ.

ಇದನ್ನೂ ಓದಿ: ಹಂಸಲೇಖ-ರವಿಚಂದ್ರನ್ ದೂರ ಆಗಿದ್ದು ಏಕೆ; ಕ್ರೇಜಿ ಸ್ಟಾರ್​ ಕೊಟ್ರು ಉತ್ತರ

‘ಸರಿಗಮಪ’ ಸುಬ್ರಮಣಿ ಪತ್ನಿ ಸಾವಿನ ಕೇಸ್​​ಗೆ ಟ್ವಿಸ್ಟ್​; ಕೊರೊನಾ ಅಲ್ಲ, ಆತ್ಮಹತ್ಯೆಯಿಂದ ನಿಧನ?

Published On - 11:03 pm, Mon, 13 September 21

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ