AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’, ‘ಡ್ರಾಮಾ ಜ್ಯೂನಿಯರ್ಸ್’ ಹೊಸ ಸೀಸನ್​; ಆಡಿಷನ್​ ಕೊಡೋಕೆ ಇದೆ ಷರತ್ತು

‘ಸರಿಗಮಪ ಸೀಸನ್​ 19’ ಹಾಗೂ ‘ಡ್ರಾಮಾ ಜ್ಯೂನಿಯರ್ಸ್ ಸೀಸನ್​ 4’ ಆರಂಭವಾಗುತ್ತಿದೆ. ಇವೆರಡರಲ್ಲೂ ಭಾಗವಹಿಸುವ ಸ್ಪರ್ಧಿಗಳಿಗೆ ವಯಸ್ಸಿನ ಮಿತಿ ಇದೆ. ಈ ಎರಡೂ ರಿಯಾಲಿಟಿ ಶೋಗಳನ್ನು ಈ ಬಾರಿ ಮಕ್ಕಳಿಗಾಗಿಯೇ ಮೀಸಲಿಡಲಾಗುತ್ತಿದೆ.

‘ಸರಿಗಮಪ’, ‘ಡ್ರಾಮಾ ಜ್ಯೂನಿಯರ್ಸ್’ ಹೊಸ ಸೀಸನ್​; ಆಡಿಷನ್​ ಕೊಡೋಕೆ ಇದೆ ಷರತ್ತು
ಸರಿಗಮಪ-ಡ್ರಾಮಾ ಜ್ಯೂನಿಯರ್ಸ್​ ಪೋಸ್ಟ್​
TV9 Web
| Edited By: |

Updated on:Dec 12, 2021 | 5:48 PM

Share

ಕನ್ನಡ ಕಿರುತೆರೆಯಲ್ಲಿ ಈಗ ರಿಯಾಲಿಟಿ ಶೋಗಳು ಸಾಕಷ್ಟು ಹೈಲೈಟ್​ ಆಗುತ್ತಿವೆ. ಎಲ್ಲಾ ವಾಹಿನಿಗಳ ಮಧ್ಯೆ ಇದಕ್ಕಾಗಿ ದೊಡ್ಡ ಮಟ್ಟದ ಕಾಂಪಿಟೇಷನ್​ ಇದೆ. ಹೀಗಾಗಿ ಒಂದಕ್ಕಿಂತ ಒಂದು ಶೋಅನ್ನು ಅದ್ದೂರಿಯಾಗಿ ವೀಕ್ಷಕರ ಮುಂದೆ ಇಡುವ ಪ್ರಯತ್ನ ನಡೆಯುತ್ತಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’, ‘ಡ್ರಾಮಾ ಜ್ಯೂನಿಯರ್ಸ್’ ಈಗಾಗಲೇ ಸಾಕಷ್ಟು ಖ್ಯಾತಿ ಪಡೆದುಕೊಂಡಿದೆ. ಈ ಎರಡೂ ಶೋಗಳು ಹಲವು ಪ್ರತಿಭೆಗಳಿಗೆ ವೇದಿಕೆ ಆಗಿದೆ. ‘ಸರಿಗಮಪ’ ಮೂಲಕ ಸಾಕಷ್ಟು ಗಾಯಕರು ರಾಜ್ಯಕ್ಕೆ ಪರಿಚಯವಾದರೆ,  ‘ಡ್ರಾಮಾ ಜ್ಯೂನಿಯರ್ಸ್’ ಮೂಲಕ ಹಲವು ಕಲಾವಿದರು ಗುರುತಿಸಿಕೊಂಡಿದ್ದಾರೆ. ಈಗ ಇವೆರಡೂ ಕಾರ್ಯಕ್ರಮದ ಹೊಸ ಸೀಸನ್​ ಆರಂಭವಾಗುತ್ತಿದೆ. ಇದಕ್ಕೆ ನೀವು ಕೂಡ ಆಡಿಷನ್ ಕೊಡಬಹುದು. ಆದರೆ, ಕೆಲವು ಷರತ್ತುಗಳಿವೆ.

‘ಸರಿಗಮಪ ಸೀಸನ್​ 19’ ಹಾಗೂ ‘ಡ್ರಾಮಾ ಜ್ಯೂನಿಯರ್ಸ್ ಸೀಸನ್​ 4’ ಆರಂಭವಾಗುತ್ತಿದೆ. ಸರಿಗಮಪ ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ವಯಸ್ಸಿನ ಮಿತಿ ಇದೆ. ಈ ಬಾರಿ ಸರಿಗಮಪ ಶೋಅನ್ನೂ ಮಕ್ಕಳಿಗಾಗಿಯೇ ಮೀಸಲಿಡಲಾಗಿದೆ. ಹೀಗಾಗಿ, ‘ಸರಿಗಮಪ ಸೀಸನ್​ 19’ರಲ್ಲಿ ಪಾಲ್ಗೊಳ್ಳುವವರ ವಯಸ್ಸು 4ರಿಂದ 16 ವರ್ಷದ ಒಳಗೆ ಇರಬೇಕು. ‘ಡ್ರಾಮಾ ಜ್ಯೂನಿಯರ್ಸ್​ ಸೀಸನ್​ 4’ರಲ್ಲಿ ಪಾಲ್ಗೊಳ್ಳುವವರ ವಯಸ್ಸು 4 ವರ್ಷದಿಂದ 14 ವರ್ಷದ ಒಳಗೆ ಇರಬೇಕು. ಅಂದರೆ ಮಾತ್ರ ನೀವು ಆಡಿಷನ್​ ಕೊಡಬಹುದು.

ಹಾಗಾದರೆ, ಈ ಕಾರ್ಯಕ್ರಮಕ್ಕೆ ಆಡಿಷನ್​ ಕೊಡೋಕೆ ಏನು ಮಾಡಬೇಕು? ಅದಕ್ಕೂ ಉತ್ತರವಿದೆ. ಆಡಿಷನ್​ಗೆ ನಿಮ್ಮ ಪರ್ಫಾರ್ಮೆನ್ಸ್​ ವಿಡಿಯೋ ಕಳುಹಿಸಬೇಕು. ಸರಿಗಮಪಕ್ಕೆ ಆಡಿಷನ್​ ಕೊಡುವವರು ತಮ್ಮ ಹಾಡಿನ ವಿಡಿಯೋವನ್ನು ವಾಟ್ಸಾಪ್​ ಸಂಖ್ಯೆ 9513516200 ಕಳುಹಿಸಬೇಕು ಮತ್ತು ಡ್ರಾಮಾ ಜ್ಯೂನಿಯರ್ಸ್​ಗೆ ವಾಟ್ಸಾಪ್​ ಸಂಖ್ಯೆ 9513134434 ವಿಡಿಯೋ ಕಳುಹಿಸಬೇಕು.

ಈ ಎರಡೂ ರಿಯಾಲಿಟಿ ಶೋಗಳನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ಈ ಎರಡೂ ಕಾರ್ಯಕ್ರಮ ಒಟ್ಟಿಗೆ ಪ್ರಸಾರವಾದರೆ ವೀಕ್ಷಕರ ಪಾಲಿಗೆ ವಿಶೇಷವಾಗಲಿದೆ. ಅಂದಹಾಗೆ, ಈ ಶೋ ಯಾವಾಗ ಪ್ರಸಾರವಾಗುತ್ತದೆ, ಯಾರೆಲ್ಲ ಇದರ ಜಡ್ಜ್​ ಆಗಿ ಇರಲಿದ್ದಾರೆ ಎಂಬಿತ್ಯಾದಿ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದೆ.

ಇದನ್ನೂ ಓದಿ: ‘ಸರಿಗಮಪ’ ಶೋಗೆ ಹಂಸಲೇಖ ಗೈರಾಗಿದ್ದೇಕೆ?; ವಾಹಿನಿ ಕಡೆಯಿಂದ ಸ್ಪಷ್ಟನೆ

‘ಸರಿಗಮಪ ನನ್ನ ಪ್ರೀತಿಯ ಭೂಮಿಕೆ, ಬೇಗ ಬಂದು ಸೇರಿಕೊಳ್ಳುತ್ತೇನೆ’; ಹಂಸಲೇಖ ಪತ್ರ

Published On - 5:10 pm, Sun, 12 December 21

Follow Us
Web contact
Web contact

TV9 Kannada

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​
ವಿಜಯೇಂದ್ರ ಮತ್ತು ಅಶೋಕ್​ಗೆ ಹುಷಾರ್​​ ಆಗಿರಿ ಎಂದಿದ್ದೇಕೆ ಯತ್ನಾಳ್​