AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸರಿಗಮಪ’, ‘ಡ್ರಾಮಾ ಜ್ಯೂನಿಯರ್ಸ್’ ಹೊಸ ಸೀಸನ್​; ಆಡಿಷನ್​ ಕೊಡೋಕೆ ಇದೆ ಷರತ್ತು

‘ಸರಿಗಮಪ ಸೀಸನ್​ 19’ ಹಾಗೂ ‘ಡ್ರಾಮಾ ಜ್ಯೂನಿಯರ್ಸ್ ಸೀಸನ್​ 4’ ಆರಂಭವಾಗುತ್ತಿದೆ. ಇವೆರಡರಲ್ಲೂ ಭಾಗವಹಿಸುವ ಸ್ಪರ್ಧಿಗಳಿಗೆ ವಯಸ್ಸಿನ ಮಿತಿ ಇದೆ. ಈ ಎರಡೂ ರಿಯಾಲಿಟಿ ಶೋಗಳನ್ನು ಈ ಬಾರಿ ಮಕ್ಕಳಿಗಾಗಿಯೇ ಮೀಸಲಿಡಲಾಗುತ್ತಿದೆ.

‘ಸರಿಗಮಪ’, ‘ಡ್ರಾಮಾ ಜ್ಯೂನಿಯರ್ಸ್’ ಹೊಸ ಸೀಸನ್​; ಆಡಿಷನ್​ ಕೊಡೋಕೆ ಇದೆ ಷರತ್ತು
ಸರಿಗಮಪ-ಡ್ರಾಮಾ ಜ್ಯೂನಿಯರ್ಸ್​ ಪೋಸ್ಟ್​
TV9 Web
| Edited By: |

Updated on:Dec 12, 2021 | 5:48 PM

Share

ಕನ್ನಡ ಕಿರುತೆರೆಯಲ್ಲಿ ಈಗ ರಿಯಾಲಿಟಿ ಶೋಗಳು ಸಾಕಷ್ಟು ಹೈಲೈಟ್​ ಆಗುತ್ತಿವೆ. ಎಲ್ಲಾ ವಾಹಿನಿಗಳ ಮಧ್ಯೆ ಇದಕ್ಕಾಗಿ ದೊಡ್ಡ ಮಟ್ಟದ ಕಾಂಪಿಟೇಷನ್​ ಇದೆ. ಹೀಗಾಗಿ ಒಂದಕ್ಕಿಂತ ಒಂದು ಶೋಅನ್ನು ಅದ್ದೂರಿಯಾಗಿ ವೀಕ್ಷಕರ ಮುಂದೆ ಇಡುವ ಪ್ರಯತ್ನ ನಡೆಯುತ್ತಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುವ ‘ಸರಿಗಮಪ’, ‘ಡ್ರಾಮಾ ಜ್ಯೂನಿಯರ್ಸ್’ ಈಗಾಗಲೇ ಸಾಕಷ್ಟು ಖ್ಯಾತಿ ಪಡೆದುಕೊಂಡಿದೆ. ಈ ಎರಡೂ ಶೋಗಳು ಹಲವು ಪ್ರತಿಭೆಗಳಿಗೆ ವೇದಿಕೆ ಆಗಿದೆ. ‘ಸರಿಗಮಪ’ ಮೂಲಕ ಸಾಕಷ್ಟು ಗಾಯಕರು ರಾಜ್ಯಕ್ಕೆ ಪರಿಚಯವಾದರೆ,  ‘ಡ್ರಾಮಾ ಜ್ಯೂನಿಯರ್ಸ್’ ಮೂಲಕ ಹಲವು ಕಲಾವಿದರು ಗುರುತಿಸಿಕೊಂಡಿದ್ದಾರೆ. ಈಗ ಇವೆರಡೂ ಕಾರ್ಯಕ್ರಮದ ಹೊಸ ಸೀಸನ್​ ಆರಂಭವಾಗುತ್ತಿದೆ. ಇದಕ್ಕೆ ನೀವು ಕೂಡ ಆಡಿಷನ್ ಕೊಡಬಹುದು. ಆದರೆ, ಕೆಲವು ಷರತ್ತುಗಳಿವೆ.

‘ಸರಿಗಮಪ ಸೀಸನ್​ 19’ ಹಾಗೂ ‘ಡ್ರಾಮಾ ಜ್ಯೂನಿಯರ್ಸ್ ಸೀಸನ್​ 4’ ಆರಂಭವಾಗುತ್ತಿದೆ. ಸರಿಗಮಪ ಶೋನಲ್ಲಿ ಭಾಗವಹಿಸುವ ಸ್ಪರ್ಧಿಗಳಿಗೆ ವಯಸ್ಸಿನ ಮಿತಿ ಇದೆ. ಈ ಬಾರಿ ಸರಿಗಮಪ ಶೋಅನ್ನೂ ಮಕ್ಕಳಿಗಾಗಿಯೇ ಮೀಸಲಿಡಲಾಗಿದೆ. ಹೀಗಾಗಿ, ‘ಸರಿಗಮಪ ಸೀಸನ್​ 19’ರಲ್ಲಿ ಪಾಲ್ಗೊಳ್ಳುವವರ ವಯಸ್ಸು 4ರಿಂದ 16 ವರ್ಷದ ಒಳಗೆ ಇರಬೇಕು. ‘ಡ್ರಾಮಾ ಜ್ಯೂನಿಯರ್ಸ್​ ಸೀಸನ್​ 4’ರಲ್ಲಿ ಪಾಲ್ಗೊಳ್ಳುವವರ ವಯಸ್ಸು 4 ವರ್ಷದಿಂದ 14 ವರ್ಷದ ಒಳಗೆ ಇರಬೇಕು. ಅಂದರೆ ಮಾತ್ರ ನೀವು ಆಡಿಷನ್​ ಕೊಡಬಹುದು.

ಹಾಗಾದರೆ, ಈ ಕಾರ್ಯಕ್ರಮಕ್ಕೆ ಆಡಿಷನ್​ ಕೊಡೋಕೆ ಏನು ಮಾಡಬೇಕು? ಅದಕ್ಕೂ ಉತ್ತರವಿದೆ. ಆಡಿಷನ್​ಗೆ ನಿಮ್ಮ ಪರ್ಫಾರ್ಮೆನ್ಸ್​ ವಿಡಿಯೋ ಕಳುಹಿಸಬೇಕು. ಸರಿಗಮಪಕ್ಕೆ ಆಡಿಷನ್​ ಕೊಡುವವರು ತಮ್ಮ ಹಾಡಿನ ವಿಡಿಯೋವನ್ನು ವಾಟ್ಸಾಪ್​ ಸಂಖ್ಯೆ 9513516200 ಕಳುಹಿಸಬೇಕು ಮತ್ತು ಡ್ರಾಮಾ ಜ್ಯೂನಿಯರ್ಸ್​ಗೆ ವಾಟ್ಸಾಪ್​ ಸಂಖ್ಯೆ 9513134434 ವಿಡಿಯೋ ಕಳುಹಿಸಬೇಕು.

ಈ ಎರಡೂ ರಿಯಾಲಿಟಿ ಶೋಗಳನ್ನು ಇಷ್ಟಪಡುವವರು ಸಾಕಷ್ಟು ಮಂದಿ ಇದ್ದಾರೆ. ಈ ಎರಡೂ ಕಾರ್ಯಕ್ರಮ ಒಟ್ಟಿಗೆ ಪ್ರಸಾರವಾದರೆ ವೀಕ್ಷಕರ ಪಾಲಿಗೆ ವಿಶೇಷವಾಗಲಿದೆ. ಅಂದಹಾಗೆ, ಈ ಶೋ ಯಾವಾಗ ಪ್ರಸಾರವಾಗುತ್ತದೆ, ಯಾರೆಲ್ಲ ಇದರ ಜಡ್ಜ್​ ಆಗಿ ಇರಲಿದ್ದಾರೆ ಎಂಬಿತ್ಯಾದಿ ಮಾಹಿತಿಗಳು ಇನ್ನಷ್ಟೇ ಹೊರಬೀಳಬೇಕಿದೆ.

ಇದನ್ನೂ ಓದಿ: ‘ಸರಿಗಮಪ’ ಶೋಗೆ ಹಂಸಲೇಖ ಗೈರಾಗಿದ್ದೇಕೆ?; ವಾಹಿನಿ ಕಡೆಯಿಂದ ಸ್ಪಷ್ಟನೆ

‘ಸರಿಗಮಪ ನನ್ನ ಪ್ರೀತಿಯ ಭೂಮಿಕೆ, ಬೇಗ ಬಂದು ಸೇರಿಕೊಳ್ಳುತ್ತೇನೆ’; ಹಂಸಲೇಖ ಪತ್ರ

Published On - 5:10 pm, Sun, 12 December 21

Follow Us
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ಮೊಬೈಲ್ ನೋಡುತ್ತಾ ಹೋಗುತ್ತಿದ್ದಾಗ ಫ್ಲೋರ್​ನಿಂದ ಕೆಳಗೆ ಬಿದ್ದ ವ್ಯಕ್ತಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ನಿಮ್ಮ ಏರಿಯಾದಲ್ಲಿ ಗಣೇಶ ಕೂರಿಸ್ಬೇಕಾ? ಹಾಗಾದರೆ ಈ ವಿಡಿಯೋ ನೋಡಿ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಒಂದು ವಾರದಲ್ಲಿ ಮಂಜ ಕಾಮಿಡಿ ಪೀಸ್ ಆಗ್ತಾನೆ; ತಾಂಡವ್ ರಾಮ್ ಭವಿಷ್ಯ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ
ಫಿಲಿಪೈನ್ಸ್ ದೋಣಿ ಬೆಂಕಿ ದುರಂತ; ಮೃತರ ಸಂಖ್ಯೆ 35ಕ್ಕೆ ಏರಿಕೆ