AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್

ಸತೀಶ್ ಕ್ಯಾಡಬಾಮ್ ಅವರು ಮೂತ್ರ ಮಾಡುವ ವಿಡಿಯೋಗೆ 'ದಾದಾ ಯಾರ್ ಗೊತ್ತಾ' ಹಾಡು ಹಾಕಿ ಪೋಸ್ಟ್ ಮಾಡಿದ್ದು ವಿವಾದಕ್ಕೆ ಕಾರಣವಾಗಿದೆ. ಸುದೀಪ್ ಅಭಿಮಾನಿಗಳು ಮತ್ತು ರಜತ್, ವಿನಯ್ ಗೌಡ ಈ ಬಗ್ಗೆ ಸಿಟ್ಟು ವ್ಯಕ್ತಪಡಿಸಿದ್ದಾರೆ. ತಾನು "ಮೀಟರ್ ಇರೋವ್ನು" ಎಂದು ಹೇಳಿರುವ ಸತೀಶ್, ಸಿಎಂ ಹೇಳಿದರೂ ವಿಡಿಯೋ ತೆಗೆಯಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

‘ನಾನು ಮೀಟರ್ ಇರೋವ್ನು, ಸಿಎಂ ಹೇಳಿದ್ರೂ ವಿಡಿಯೋ ಡಿಲೀಟ್ ಮಾಡಲ್ಲ’; ಸತೀಶ್
ಸತೀಶ್-ಸುದೀಪ್
ರಾಜೇಶ್ ದುಗ್ಗುಮನೆ
|

Updated on:Mar 04, 2026 | 7:06 AM

Share

ಸತೀಶ್ ಕ್ಯಾಡಬಾಮ್ (Satish) ಅವರು ಸದಾ ಸುದ್ದಿಯಲ್ಲಿರಲು ಪ್ರಯತ್ನಿಸುತ್ತಾರೆ. ಒಂದಲ್ಲಾ ಒಂದು ವಿಷಯದ ಮೂಲಕ ಅವರು ವಿವಾದ ಸೃಷ್ಟಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಇತ್ತೀಚೆಗೆ ಸತೀಶ್ ಅವರು ಮೂತ್ರ ಮಾಡುವ ವಿಡಿಯೋ ಪೋಸ್ಟ್ ಮಾಡಿ ಅದಕ್ಕೆ, ‘ದಾದ ಯಾರ್ ಗೊತ್ತ..’ ಹಾಡನ್ನು ಹಾಕಿದ್ದರು. ಈ ವಿಷಯದಲ್ಲಿ ಸುದೀಪ್ ಅಭಿಮಾನಿಗಳು ಸಿಟ್ಟಾಗಿದ್ದರು. ಸುದೀಪ್ ಆಪ್ತ ಬಳಗದಲ್ಲಿರೋ ರಜತ್ ಹಾಗೂ ಸುದೀಪ್ ಕೂಡ ಸಿಟ್ಟಾಗಿದ್ದರು. ಈಗ ಈ ಬಗ್ಗೆ ಸತೀಶ್ ಅವರು ಸ್ಪಷ್ಟನೆ ನೀಡಿದ್ದಾರೆ. ಜೊತೆಗೆ ಚಾಲೆಂಜ್ ಕೂಡ ಹಾಕಿದ್ದಾರೆ.

ಸತೀಶ್ ಅವರು ಕೆಲ ದಿನಗಳ ಹಿಂದೆ ವಿಡಿಯೋ ಪೋಸ್ಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ಅವರು ಮೂತ್ರ ಮಾಡುತ್ತಿರೋದು ಕಂಡು ಬಂದಿದೆ. ಇಷ್ಟೇ ಆಗಿದ್ದರೆ ಯಾರೂ ಹೆಚ್ಚು ತಲೆಕೆಡಿಸಿಕೊಳ್ಳುತ್ತಿರಲಿಲ್ಲ. ಆದರೆ, ಅವರು ಇದಕ್ಕೆ, ‘ದಾದ ಯಾರ್ ಗೊತ್ತ..’ ಹಾಡನ್ನು ಹಾಕಿರೋದು ವಿವಾದಕ್ಕೆ ಎಡೆಮಾಡಿಕೊಟ್ಟಿದೆ. ರಜತ್ ಹಾಗೂ ವಿನಯ್ ಗೌಡ ಅವರು ಇದನ್ನು ಪ್ರಶ್ನೆ ಮಾಡಿದ್ದಾರೆ. ಅವರಿಗೆ ಕ್ಲಾಸ್ ಕೂಡ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: ಕಿಚ್ಚನ ಕಿಚಾಯಿಸಿದ ಡಾಗ್ ಸತೀಶ್​​ಗೆ ವಿನಯ್-ರಜತ್ ಖಡಕ್ ವಾರ್ನಿಂಗ್

ಎಸ್​​ಎಸ್​ ಟಿವಿ ಯೂಟ್ಯೂಬ್​ ಚಾನೆಲ್​​ಗೆ ನೀಡಿದ ಸಂದರ್ಶನದಲ್ಲಿ ಈ ವಿಷಯಕ್ಕೆ ಸಂಬಂಧಿಸಿದಂತೆ ಸತೀಶ್ ಮಾತನಾಡಿದರು. ‘ನಾನು ಮೂತ್ರ ಮಾಡಿದ್ರೂ ಸುದ್ದಿ ಆಗುತ್ತೆ ಅಂತ ಹೇಳಿದ್ದೆ. ಅದನ್ನ ತೋರಿಸೋಕೆ ವಿಡಿಯೋ ಮಾಡಿದ್ದು. ಆ ವಿಡಿಯೋಗೆ ಹಾಡು ಹೆಚ್ಚು ಸೂಕ್ತ ಅನಿಸುತ್ತಿತ್ತು. ಅದಕ್ಕೆ ಹಾಕಿದೆ’ ಎಂದು ಅವರು ಹೇಳಿದ್ದಾರೆ. ಇನ್ನು, ಯಾವುದೇ ಕಾರಣಕ್ಕೂ ವಿಡಿಯೋನ ತೆಗೆಯಲ್ಲ ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದ್ದಾರೆ.

View this post on Instagram

A post shared by SStv (@sstv_media)

‘ನಾನು ಕಮೆಂಟ್ಸ್ ನೋಡಿಲ್ಲ. ಹೀಗಾಗಿ, ಯಾರು ಏನು ಹೇಳಿದ್ರೋ ಗೊತ್ತಿಲ್ಲ. ನಾನು ಮೀಟರ್​​​ಲೆಸ್ ಆಗಿದ್ರೆ ವಿಡಿಯೋ ತೆಗೆಯುತ್ತಿದ್ದೆ. ನಾನು ಮೀಟರ್ ಇರುವವನು. ಹೀಗಾಗಿ, ವಿಡಿಯೋನ ಹಾಗೆಯೇ ಇಟ್ಟಿದ್ದೇನೆ. ಸಿಎಂ ಬಂದು ಹೇಳಿದ್ರೂ ವಿಡಿಯೋ ತೆಗೆಯಲ್ಲ’ ಎಂದಿದ್ದಾರೆ ಅವರು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 7:06 am, Wed, 4 March 26

Follow Us
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಕನ್ನಡ ಚಿತ್ರರಂಗಕ್ಕೆ 93ರ ಸಂಭ್ರಮ: ಒಂದೇ ವೇದಿಕೆಯಲ್ಲಿ ಸೆಲೆಬ್ರಿಟಿಗಳು
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್​ನ ಮೆಹ್ರಾಬಾದ್ ವಿಮಾನ ನಿಲ್ದಾಣದ ಮೇಲೆ ಬಾಂಬ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿ ಕಟ್ಟಡದ ಮೇಲೆ ಇಸ್ರೇಲ್ ದಾಳಿ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಖಮೇನಿ ಸಾವಿನ ಕುರಿತಾದ ಪ್ರತಿಭಟನೆಗಳನ್ನು ಖಂಡಿಸಿದ ಮುಂಬೈನ ಶಿಯಾ ನಾಯಕ
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
ಚಂದ್ರ ಗ್ರಹಣದ ದಿನವೇ ಗದಗದಲ್ಲಿ ಸಪ್ತಪದಿ ತುಳಿದ 19 ಜೋಡಿಗಳು
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
‘ಭೀಮಾ ತೀರದಲ್ಲಿ’ ರೀ-ರಿಲೀಸ್: ಮಾಹಿತಿ ಹಂಚಿಕೊಂಡ ನಿರ್ಮಾಪಕ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ಸಂಚರಿಸುತ್ತಿದ್ದಾಗಲೇ ಬಸ್​​​​ನ ಇಂಜಿನ್‌ನಲ್ಲಿ ಕಾಣಿಸಿಕೊಂಡ ಬೆಂಕಿ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ನಭೋಮಂಡಲದಲ್ಲಿ ಚಂದ್ರಗ್ರಹಣದ ಅದ್ಭುತ ಕ್ಷಣ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಪ್ರಧಾನಿ ಮುಂದೆ ಕಠಿಣ ಸವಾಲುಗಳು: ಮೋದಿ ಬಗ್ಗೆ ಪಂಡಿತರ ಸ್ಫೋಟಕ ಭವಿಷ್ಯ
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!
ಬಂಡೆಮಹಾಕಾಳಿ ದೇವಾಲಯಕ್ಕೆ ತಟ್ಟದ ಚಂದ್ರಗ್ರಹಣ; ಕಾಳಿಯ ದರ್ಶನಕ್ಕೆ ಜನವೋ ಜನ!