AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಧಾರಾವಾಹಿಗೆ ವಿದಾಯದ ಸಂಚಿಕೆ; ಸೀತಾಗೆ ಗನ್​ ಹಿಡಿದ ಭಾರ್ಗವಿ

ಜೀ ಕನ್ನಡದ ಜನಪ್ರಿಯ ಧಾರಾವಾಹಿ 'ಸೀತಾ ರಾಮ' ಮೇ 30 ರಂದು ಅಂತ್ಯಗೊಳ್ಳಲಿದೆ. ಕೊನೆಯ ವಾರದಲ್ಲಿ, ಭಾರ್ಗವಿ ಸೀತಾಳ ಮೇಲೆ ಬಂದೂಕು ತೋರಿಸುವುದು ಸೇರಿದಂತೆ ಹಲವು ಆಘಾತಕಾರಿ ಘಟನೆಗಳು ನಡೆಯಲಿವೆ. ಭಾರ್ಗವಿಯ ನಿಜ ಸ್ವರೂಪ ಬಹಿರಂಗಗೊಳ್ಳುವುದು ಕೂಡ ಈ ವಾರದಲ್ಲಿ ನಡೆಯಲಿದೆ. ಧಾರಾವಾಹಿಯ ಅಭಿಮಾನಿಗಳು ಕೊನೆಯ ಸಂಚಿಕೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

‘ಸೀತಾ ರಾಮ’ ಧಾರಾವಾಹಿಗೆ ವಿದಾಯದ ಸಂಚಿಕೆ; ಸೀತಾಗೆ ಗನ್​ ಹಿಡಿದ ಭಾರ್ಗವಿ
ಸೀತಾ ರಾಮ
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ|

Updated on: May 26, 2025 | 7:55 AM

Share

ಎಲ್ಲರನ್ನೂ ರಂಜಿಸಿದ ಜೀ ಕನ್ನಡದ ‘ಸೀತಾ ರಾಮ’ ಧಾರಾವಾಹಿಯು (Seetha Raama Serial) ಈಗ ಕೊನೆಯಾಗುವ ಹಂತಕ್ಕೆ ತಲುಪಿರೋದು ವೀಕ್ಷಕರಿಗೆ ಗೊತ್ತೇ ಇದೆ. ಧಾರಾವಾಹಿಯು ಯಾವ ರೀತಿಯಲ್ಲಿ ಪೂರ್ಣಗೊಳ್ಳಲಿದೆ ಎಂಬ ವಿಚಾರ ಗೊತ್ತಿರಲಿಲ್ಲ. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಮುಂದಿನ ವಾರದಲ್ಲಿ ಯಾವ ದಿನ ಸಂಚಿಕೆ ಯಾವ ರೀತಿಯಲ್ಲಿ ಇರಲಿದೆ ಎಂಬುದಕ್ಕೆ ಜೀ ಕನ್ನಡ ವಾಹಿನಿಯು ಮಾಹಿತಿ ನೀಡಿದೆ. ಭಾರ್ಗವಿಯು ಸೀತಾಳಿಗೆ ಗನ್ ಹಿಡಿದು ಹೆದರಿಸಿದ್ದಾಳೆ.

‘ಸೀತಾ ರಾಮ’ ಧಾರಾವಾಹಿ ಪೂರ್ಣಗೊಳ್ಳಬಹುದೇ ಎನ್ನುವ ಅನುಮಾನ ಅನೇಕರಿಗೆ ಮೂಡಿತ್ತು. ಇದಕ್ಕೆ ಕಾರಣ ಆಗಿದ್ದು ಧಾರಾವಾಹಿಯ ಕಥೆ ಹಾಗೂ ಸಮಯ ಬದಲಾವಣೆ. ಈಗ ‘ಸೀತಾ ರಾಮ’ ಧಾರಾವಾಹಿ ಮುಂದಿನ ವಾರಕ್ಕೆ ಕೊನೆ ಆಗಲಿದೆ. ಮೇ 30ಕ್ಕೆ ಧಾರಾವಾಹಿಯ ಕೊನೆ ಎಪಿಸೋಡ್ ಪ್ರಸಾರ ಕಾಣಲಿದೆ.

ಇದನ್ನೂ ಓದಿ
Image
‘ಕುಬೇರ’ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ; ಗ್ಲಾಮರ್ ಮಾಯ
Image
‘ಸರಿಗಮಪ’ ಫೈನಲಿಸ್ಟ್ ಇವರೇ ನೋಡಿ; ಫಿನಾಲೆ ಮತ್ತಷ್ಟು ಕಠಿಣ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

‘ಸೀತಾ ರಾಮ’ ಧಾರಾವಾಹಿಯಲ್ಲಿ ಸಿಹಿ ಹಾಗೂ ಸುಬ್ಬಿ ಎಂಬ ಗುಟ್ಟು ಸೀತಾ ಹಾಗೂ ರಾಮನಿಗೆ ಗೊತ್ತಿರಲಿಲ್ಲ. ಈ ಗುಟ್ಟು ಈಗ ರಟ್ಟಾಗಿದೆ. ಈ ವಿಚಾರ ಸೀತಾಗೆ ಸೋಮವಾರ ತಿಳಿಯಲಿದೆ. ಈ ಎಪಿಸೋಡ್ ಸಾಕಷ್ಟು ಕುತೂಹಲ ಮೂಡಿಸಿದೆ. ಆ ಬಳಿಕ ಮಂಗಳವಾರ ಅಶೋಕ ಹಾಗೂ ಸತ್ಯ ಭಾರ್ಗವಿ ಬಣ್ಣ ಬಯಲು ಮಾಡುತ್ತಾರೆ. ಬುಧವಾರ ಭಾರ್ಗವಿ ನಿಜ ಸ್ವರೂಪ ಗೊತ್ತಾಗುತ್ತದೆ.

View this post on Instagram

A post shared by Zee Kannada (@zeekannada)

ಗುರುವಾರ ಭಾಗರ್ವಿಯು ಸೀತಾಳನ್ನು ಬಂಧಿಸುತ್ತಾಳೆ ಮತ್ತು ಗನ್ ಹಿಡಿಯುತ್ತಾಳೆ. ಶುಕ್ರವಾರ ಇಡೀ ಮನೆಯವರಿಗೆ ಭಾರ್ಗವಿಯ ನಿಜವಾದ ವಿಚಾರ ಗೊತ್ತಾಗುತ್ತದೆ. ಈ ರೀತಿಯಲ್ಲಿ ಮುಂದಿನ ವಾರ ಇರಲಿದೆ ಎಂದು ಜೀ ಕನ್ನಡ ವಾಹಿನಿ ಮಾಹಿತಿ ನೀಡಿದೆ. ಈ ಧಾರಾವಾಹಿ ಕೊನೆಗೊಂಡ ಬಳಿಕ ಮುಂದೇನು ಎನ್ನುವ ಪ್ರಶ್ನೆ ಧಾರಾವಾಹಿ ಅಭಿಮಾನಿಗಳಿಗೆ ಮೂಡಿದೆ.

ಇದನ್ನೂ ಓದಿ: ಸಿಹಿಯ ಆತ್ಮದ ಜೊತೆ ಮಾತನಾಡಿದ ಸೀತಾ; ‘ಸೀತಾ ರಾಮ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್

‘ಸೀತಾ ರಾಮ’ ಧಾರಾವಾಹಿ ಆರಂಭದಲ್ಲಿ ಸಾಕಷ್ಟು ಉತ್ತಮವಾಗಿ ಮೂಡಿ ಬಂದಿತ್ತು. ಈ ಕಾರಣಕ್ಕೆ ಅಭಿಮಾನಿಗಳು ಮುಗಿಬಿದ್ದು ವೀಕ್ಷಣೆ ಮಾಡಿದ್ದರು, ಅಲ್ಲದೆ, ಉತ್ತಮ ಟಿಆರ್​ಪಿ ಕೂಡ ಪಡೆದುಕೊಂಡಿತ್ತು. ಹೀಗಾಗಿ, ಇದೇ ಸಮಯಕ್ಕೆ ಧಾರಾವಾಹಿಯನ್ನು ಮರುಪ್ರಸಾರ ಮಾಡಿ ಎಂದು ಅನೇಕರು ಬೇಡಿಕೆ ಇಡುತ್ತಾ ಇದ್ದಾರೆ. ವಾಹಿನಿಯವರು ಇದನ್ನು ಈಡೇರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ