AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಧಾರಾವಾಹಿಗೆ ವಿದಾಯದ ಸಂಚಿಕೆ; ಸೀತಾಗೆ ಗನ್​ ಹಿಡಿದ ಭಾರ್ಗವಿ

ಜೀ ಕನ್ನಡದ ಜನಪ್ರಿಯ ಧಾರಾವಾಹಿ 'ಸೀತಾ ರಾಮ' ಮೇ 30 ರಂದು ಅಂತ್ಯಗೊಳ್ಳಲಿದೆ. ಕೊನೆಯ ವಾರದಲ್ಲಿ, ಭಾರ್ಗವಿ ಸೀತಾಳ ಮೇಲೆ ಬಂದೂಕು ತೋರಿಸುವುದು ಸೇರಿದಂತೆ ಹಲವು ಆಘಾತಕಾರಿ ಘಟನೆಗಳು ನಡೆಯಲಿವೆ. ಭಾರ್ಗವಿಯ ನಿಜ ಸ್ವರೂಪ ಬಹಿರಂಗಗೊಳ್ಳುವುದು ಕೂಡ ಈ ವಾರದಲ್ಲಿ ನಡೆಯಲಿದೆ. ಧಾರಾವಾಹಿಯ ಅಭಿಮಾನಿಗಳು ಕೊನೆಯ ಸಂಚಿಕೆಗಾಗಿ ಕಾತರದಿಂದ ಕಾಯುತ್ತಿದ್ದಾರೆ.

‘ಸೀತಾ ರಾಮ’ ಧಾರಾವಾಹಿಗೆ ವಿದಾಯದ ಸಂಚಿಕೆ; ಸೀತಾಗೆ ಗನ್​ ಹಿಡಿದ ಭಾರ್ಗವಿ
ಸೀತಾ ರಾಮ
 ಶ್ರೀಲಕ್ಷ್ಮೀ ಎಚ್
| Edited By: |

Updated on: May 26, 2025 | 7:55 AM

Share

ಎಲ್ಲರನ್ನೂ ರಂಜಿಸಿದ ಜೀ ಕನ್ನಡದ ‘ಸೀತಾ ರಾಮ’ ಧಾರಾವಾಹಿಯು (Seetha Raama Serial) ಈಗ ಕೊನೆಯಾಗುವ ಹಂತಕ್ಕೆ ತಲುಪಿರೋದು ವೀಕ್ಷಕರಿಗೆ ಗೊತ್ತೇ ಇದೆ. ಧಾರಾವಾಹಿಯು ಯಾವ ರೀತಿಯಲ್ಲಿ ಪೂರ್ಣಗೊಳ್ಳಲಿದೆ ಎಂಬ ವಿಚಾರ ಗೊತ್ತಿರಲಿಲ್ಲ. ಕೊನೆಗೂ ಇದಕ್ಕೆ ಉತ್ತರ ಸಿಕ್ಕಿದೆ. ಮುಂದಿನ ವಾರದಲ್ಲಿ ಯಾವ ದಿನ ಸಂಚಿಕೆ ಯಾವ ರೀತಿಯಲ್ಲಿ ಇರಲಿದೆ ಎಂಬುದಕ್ಕೆ ಜೀ ಕನ್ನಡ ವಾಹಿನಿಯು ಮಾಹಿತಿ ನೀಡಿದೆ. ಭಾರ್ಗವಿಯು ಸೀತಾಳಿಗೆ ಗನ್ ಹಿಡಿದು ಹೆದರಿಸಿದ್ದಾಳೆ.

‘ಸೀತಾ ರಾಮ’ ಧಾರಾವಾಹಿ ಪೂರ್ಣಗೊಳ್ಳಬಹುದೇ ಎನ್ನುವ ಅನುಮಾನ ಅನೇಕರಿಗೆ ಮೂಡಿತ್ತು. ಇದಕ್ಕೆ ಕಾರಣ ಆಗಿದ್ದು ಧಾರಾವಾಹಿಯ ಕಥೆ ಹಾಗೂ ಸಮಯ ಬದಲಾವಣೆ. ಈಗ ‘ಸೀತಾ ರಾಮ’ ಧಾರಾವಾಹಿ ಮುಂದಿನ ವಾರಕ್ಕೆ ಕೊನೆ ಆಗಲಿದೆ. ಮೇ 30ಕ್ಕೆ ಧಾರಾವಾಹಿಯ ಕೊನೆ ಎಪಿಸೋಡ್ ಪ್ರಸಾರ ಕಾಣಲಿದೆ.

ಇದನ್ನೂ ಓದಿ
Image
‘ಕುಬೇರ’ ಟೀಸರ್: ಪಕ್ಕಾ ಮಿಡಲ್ ಕ್ಲಾಸ್ ಹುಡುಗಿಯಾದ ರಶ್ಮಿಕಾ; ಗ್ಲಾಮರ್ ಮಾಯ
Image
‘ಸರಿಗಮಪ’ ಫೈನಲಿಸ್ಟ್ ಇವರೇ ನೋಡಿ; ಫಿನಾಲೆ ಮತ್ತಷ್ಟು ಕಠಿಣ
Image
‘ನಾನು ಯಶ್ ಅಭಿಮಾನಿ ಅಲ್ಲ, ಆದರೆ ಆ ಹೀರೋ ನಂಗೆ ಆದರ್ಶ’; ಯಶ್ ತಾಯಿ
Image
25ನೇ ವಯಸ್ಸಿಗೆ ಕಾಲಿಟ್ಟ ಸುಹಾನ; ಶಾರುಖ್ ಮಗಳ ಬಳಿ ಇದೆ ದುಬಾರಿ ವಸ್ತುಗಳು

‘ಸೀತಾ ರಾಮ’ ಧಾರಾವಾಹಿಯಲ್ಲಿ ಸಿಹಿ ಹಾಗೂ ಸುಬ್ಬಿ ಎಂಬ ಗುಟ್ಟು ಸೀತಾ ಹಾಗೂ ರಾಮನಿಗೆ ಗೊತ್ತಿರಲಿಲ್ಲ. ಈ ಗುಟ್ಟು ಈಗ ರಟ್ಟಾಗಿದೆ. ಈ ವಿಚಾರ ಸೀತಾಗೆ ಸೋಮವಾರ ತಿಳಿಯಲಿದೆ. ಈ ಎಪಿಸೋಡ್ ಸಾಕಷ್ಟು ಕುತೂಹಲ ಮೂಡಿಸಿದೆ. ಆ ಬಳಿಕ ಮಂಗಳವಾರ ಅಶೋಕ ಹಾಗೂ ಸತ್ಯ ಭಾರ್ಗವಿ ಬಣ್ಣ ಬಯಲು ಮಾಡುತ್ತಾರೆ. ಬುಧವಾರ ಭಾರ್ಗವಿ ನಿಜ ಸ್ವರೂಪ ಗೊತ್ತಾಗುತ್ತದೆ.

View this post on Instagram

A post shared by Zee Kannada (@zeekannada)

ಗುರುವಾರ ಭಾಗರ್ವಿಯು ಸೀತಾಳನ್ನು ಬಂಧಿಸುತ್ತಾಳೆ ಮತ್ತು ಗನ್ ಹಿಡಿಯುತ್ತಾಳೆ. ಶುಕ್ರವಾರ ಇಡೀ ಮನೆಯವರಿಗೆ ಭಾರ್ಗವಿಯ ನಿಜವಾದ ವಿಚಾರ ಗೊತ್ತಾಗುತ್ತದೆ. ಈ ರೀತಿಯಲ್ಲಿ ಮುಂದಿನ ವಾರ ಇರಲಿದೆ ಎಂದು ಜೀ ಕನ್ನಡ ವಾಹಿನಿ ಮಾಹಿತಿ ನೀಡಿದೆ. ಈ ಧಾರಾವಾಹಿ ಕೊನೆಗೊಂಡ ಬಳಿಕ ಮುಂದೇನು ಎನ್ನುವ ಪ್ರಶ್ನೆ ಧಾರಾವಾಹಿ ಅಭಿಮಾನಿಗಳಿಗೆ ಮೂಡಿದೆ.

ಇದನ್ನೂ ಓದಿ: ಸಿಹಿಯ ಆತ್ಮದ ಜೊತೆ ಮಾತನಾಡಿದ ಸೀತಾ; ‘ಸೀತಾ ರಾಮ’ ಧಾರಾವಾಹಿಯಲ್ಲಿ ಬಿಗ್ ಟ್ವಿಸ್ಟ್

‘ಸೀತಾ ರಾಮ’ ಧಾರಾವಾಹಿ ಆರಂಭದಲ್ಲಿ ಸಾಕಷ್ಟು ಉತ್ತಮವಾಗಿ ಮೂಡಿ ಬಂದಿತ್ತು. ಈ ಕಾರಣಕ್ಕೆ ಅಭಿಮಾನಿಗಳು ಮುಗಿಬಿದ್ದು ವೀಕ್ಷಣೆ ಮಾಡಿದ್ದರು, ಅಲ್ಲದೆ, ಉತ್ತಮ ಟಿಆರ್​ಪಿ ಕೂಡ ಪಡೆದುಕೊಂಡಿತ್ತು. ಹೀಗಾಗಿ, ಇದೇ ಸಮಯಕ್ಕೆ ಧಾರಾವಾಹಿಯನ್ನು ಮರುಪ್ರಸಾರ ಮಾಡಿ ಎಂದು ಅನೇಕರು ಬೇಡಿಕೆ ಇಡುತ್ತಾ ಇದ್ದಾರೆ. ವಾಹಿನಿಯವರು ಇದನ್ನು ಈಡೇರಿಸುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಪ್ರಿಯಕರನಿಗೆ ಬೆಂಕಿ ಇಟ್ಟ ಪ್ರೇಯಸಿ: ಸ್ಫೋಟಕ ಅಂಶ ಬಿಚ್ಚಿಟ್ಟ ಎಸ್ಪಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಸೈಕಲ್ ಸವಾರನಿಂದಲ್ಲೂ 25 ರೂ. ಟೋಲ್ ವಸೂಲಿ ಮಾಡಿದ ಸಿಬ್ಬಂದಿ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ಕೋಲಾರ: ಇಟ್ಟಿಗೆ ಫ್ಯಾಕ್ಟರಿಯಲ್ಲಿ ಜೀತಕ್ಕಿದ್ದ 10 ಕಾರ್ಮಿಕರ ರಕ್ಷಣೆ
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ದಾವಣಗೆರೆ ಉಪಚುನಾವಣೆ ಫಲಿತಾಂಶ ಬಂದ್ಮೇಲೆ ಜಮೀರ್ ಭವಿಷ್ಯ ನಿರ್ಧಾರ?
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಈ ಆವೃತ್ತಿಯ 3ನೇ ಅರ್ಧಶತಕ ಚಚ್ಚಿದ ಅಭಿಷೇಕ್
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಸಿಎಂಗೆ ಕಾಂಪ್ರಾಮೈಸ್ ಪಾಲಿಟಿಕ್ಸ್ ಅನಿವಾರ್ಯ: ಜಾರಕಿಹೊಳಿ ಅಚ್ಚರಿ ಹೇಳಿಕೆ!
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ಪಹಲ್ಗಾಮ್ ಅಟ್ಯಾಕ್ ನಲ್ಲಿ ಪ್ರಾಣ ಬಿಟ್ಟಿದ್ದ ಭರತ್ ನೆನೆದು ಪೋಷಕರು ಕಣ್ಣೀರು
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ವರುಣ್ ಧವನ್ ಜೊತೆಗೆ ಕುಣಿದು-ಕುಪ್ಪಳಿಸಿದ ಮೃಣಾಲ್ ಠಾಕೂರ್: ವಿಡಿಯೋ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಎರಡು ಭಿನ್ನ ಆರ್ಕೆಸ್ಟ್ರಾ, ‘ರಾಮಾಯಣ’ಕ್ಕಾಗಿ ರೆಹಮಾನ್ ಸಾಹಸ ನೋಡಿ
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!
ಶಾಸಕ ಎನ್.ಎ. ಹ್ಯಾರಿಸ್ ನಿವಾಸದಲ್ಲಿ 37 ಲಕ್ಷ ನಗದು ಪತ್ತೆ!