AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರ್ಗವಿ ಕತ್ತಿಗೆ ಚಾಕು ಇಡುತ್ತಿದ್ದಂತೆ ಸೀತಾ ಬಾಳಲ್ಲಿ ಮತ್ತೆ ಬಂದ ಸಿಹಿ: ಕಳ್ಳರಿಗೆ ಇದೆ ಮಾರಿಹಬ್ಬ

Seetha Raama serial: ಸೀತಾ ರಾಮ ಧಾರಾವಾಹಿ ಕನ್ನಡದ ಜನಪ್ರಿಯ ಧಾರಾವಾಹಿ. ‘ಸೀತಾ ರಾಮ’ ಧಾರಾವಾಹಿ ಇಷ್ಟು ದಿನ ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿತ್ತು. ಈಗ ಆ ಸಮಯ ಬದಲಾವಣೆ ಆಗಿದ್ದು, ಸಂಜೆ 5.30ಕ್ಕೆ ಪ್ರಸಾರ ಕಾಣುತ್ತಿದೆ. ಹೀಗಾಗಿ, ದೊಡ್ಡ ಟ್ವಿಸ್ಟ್ ಕೊಟ್ಟು ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಅನಿವಾರ್ಯತೆ ಇದೆ. ಪ್ರೇಕ್ಷಕರನ್ನು ಹಿಡಿದಿಟ್ಟುಕೊಳ್ಳುತ್ತದೆಯೇ ಸೀತಾ ರಾಮ ಧಾರಾವಾಹಿ.

ಭಾರ್ಗವಿ ಕತ್ತಿಗೆ ಚಾಕು ಇಡುತ್ತಿದ್ದಂತೆ ಸೀತಾ ಬಾಳಲ್ಲಿ ಮತ್ತೆ ಬಂದ ಸಿಹಿ: ಕಳ್ಳರಿಗೆ ಇದೆ ಮಾರಿಹಬ್ಬ
Seetha Ram
 ಶ್ರೀಲಕ್ಷ್ಮೀ ಎಚ್
| Edited By: |

Updated on:Feb 11, 2025 | 7:17 PM

Share

‘ಸೀತಾ ರಾಮ’ ಧಾರಾವಾಹಿಯಲ್ಲಿ ಪ್ರಮುಖ ತಿರುವು ಬಂದಿದೆ. ಸೀತಾ ಬಾಳಲ್ಲಿ ಮತ್ತೆ ಸಿಹಿಯ ಎಂಟ್ರಿ ಆಗಿದೆ. ಇದನ್ನು ನೋಡಿ ಭಾರ್ಗವಿ ಹಾಗೂ ಅವಳ ಪತಿ ಶಾಕ್ನಲ್ಲಿ ಮುಳುಗಿ ಹೋಗಿದ್ದಾರೆ. ಈ ಕಳ್ಳರಿಗೆ ಮುಂದೆ ಮಾರಿ ಹಬ್ಬ ಇರುವುದು ಗ್ಯಾರಂಟಿ ಎಂದು ಎಲ್ಲರೂ ಅಂದುಕೊಂಡಿದ್ದಾರೆ. ಸದ್ಯ ರಿಲೀಸ್ ಆಗಿರೋ ಪ್ರೋಮೋ ಗಮನ ಸೆಳೆಯುತ್ತಿದೆ. ಈ ಪ್ರೋಮೋಗೆ ಫ್ಯಾನ್ಸ್ ಕಡೆಯಿಂದ ಭರ್ಜರಿ ಲೈಕ್ಸ್ ಸಿಗುತ್ತಿದೆ.

‘ಸೀತಾ ರಾಮ’ ಧಾರಾವಾಹಿಯಲ್ಲಿ ಭಾರ್ಗವಿ (ಪೂಜಾ ಲೋಕೇಶ್) ವಿಲನ್. ಭಾರ್ಗವಿ ಪ್ಲ್ಯಾನ್ ಮಾಡಿ ಸಿಹಿಯನ್ನು ಹತ್ಯೆ ಮಾಡಿಸಿದ್ದಳು. ಆ ಬಳಿಕ ಸೀತಾಗೆ ನಿಧಾನವಾಗಿ ಹುಚ್ಚು ಹಿಡಿಯುತ್ತಾ ಇತ್ತು. ಆಕೆಯನ್ನು ಆಸ್ಪತ್ರೆಗೆ ಸೇರಿಸುವ ಕೆಲಸವೂ ಆಗುವುದರಲ್ಲಿ ಇತ್ತು. ಪದೇ ಪದೇ ಭಾರ್ಗವಿಯು ಸೀತಾಳನ್ನು ಕೆಣಕಲು ಆರಂಭಿಸಿದ್ದಳು. ಈ ಕಾರಣದಿಂದಲೇ ಸೀತಾ ಸಿಟ್ಟಾದಳು.

ಭಾರ್ಗವಿಯು ಸಿಹಿಯ ಬಗ್ಗೆ ಹೇಳಿದ ಮಾತು ಸೀತಾಳಿಗೆ ಸಿಟ್ಟು ತರಿಸಿದೆ. ಈ ಕಾರಣದಿಂದಲೇ ಸೀತಾ ಭಾರ್ಗವಿಯ ಕತ್ತಿಗೆ ಚಾಕು ಇಟ್ಟಿದ್ದಾಳೆ. ಹೀಗಾಗಿ, ಅವಳನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗುವ ಪ್ಲ್ಯಾನ್ ನಡೆಯಿತು. ಆ ಸಮಯಕ್ಕೆ ಸರಿಯಾಗಿ ಸಿಹಿಯ ಎಂಟ್ರಿ ಆಗಿದೆ. ಸುಬ್ಬಿಯನ್ನು, ಸಿಹಿಯ ಗೆಟಪ್ನಲ್ಲಿ ಕರೆದುಕೊಂಡು ಬರಲಾಗಿದೆ.

View this post on Instagram

A post shared by Zee Kannada (@zeekannada)

ಸಿಹಿ ಸತ್ತಿದ್ದು, ಅವಳ ಅಂತ್ಯ ಸಂಸ್ಕಾರವನ್ನು ಮಾಡಿದ್ದು ಭಾರ್ಗವಿ ಕಣ್ಣಾರೆ ನೋಡಿದ್ದಾಳೆ. ಸೀತಾಗೆ ಹುಚ್ಚು ಹೆಚ್ಚಾಗಿದೆ ಆಕೆಯನ್ನು ಆಸ್ಪತ್ರೆಗೆ ಸೇರಿಸಬೇಕು ಎನ್ನುವಾಗ ಸಿಹಿ ಬಂದಿದ್ದು ಆಕೆಗೆ ಶಾಕಿಂಗ್ ಆಗಿದೆ. ಮುಂದೇನು ಮಾಡಬೇಕು ಎಂಬುದು ಆಕೆಗೂ ತಿಳಿಯದಂತೆ ಆಗಿದೆ. ‘ಮುಂದೆ ಮಾರಿ ಹಬ್ಬ ಗ್ಯಾರಂಟಿ’ ಎಂದು ಅನೇಕರು ಮಾತನಾಡಿಕೊಂಡಿದ್ದಾರೆ.

ಇದನ್ನೂ ಓದಿ:ಸೀತಾಗೆ ಸಿಹಿ ಸಿಗೋ ಮೊದಲೇ ಬದಲಾಯಿತು ‘ಸೀತಾ ರಾಮ’ ಪ್ರಸಾರ ಸಮಯ: ವೀಕ್ಷಕರ ಅಸಮಾಧಾನ

ಸಿಹಿಯನ್ನು ಅತಿಯಾಗಿ ಪ್ರೀತಿಸಿದ್ದಳು ಸೀತಾ. ಆದರೆ, ಸಿಹಿ ಇಲ್ಲದ ಕಾರಣ ಗೊಂಬೆಯನ್ನೇ ಸಿಹಿ ಎಂದು ಸೀತಾ ಅಂದುಕೊಳ್ಳುವಮಟ್ಟಕ್ಕೆ ಬಂದಿದ್ದಳು. ಅಷ್ಟರಮಟ್ಟಿಗೆ ಆಕೆಗೆ ಹುಚ್ಚು ಹಿಡಿಯುವಂತೆ ಮಾಡಿದ್ದರು. ಈಗ ಎಲ್ಲವೂ ಬದಲಾಗುವ ಹಂತದಲ್ಲಿ ಇದೆ.

‘ಸೀತಾ ರಾಮ’ ಧಾರಾವಾಹಿ ಇಷ್ಟು ದಿನ ರಾತ್ರಿ 9.30ಕ್ಕೆ ಪ್ರಸಾರ ಆಗುತ್ತಿತ್ತು. ಈಗ ಆ ಸಮಯ ಬದಲಾವಣೆ ಆಗಿದ್ದು, ಸಂಜೆ 5.30ಕ್ಕೆ ಪ್ರಸಾರ ಕಾಣುತ್ತಿದೆ. ಹೀಗಾಗಿ, ದೊಡ್ಡ ಟ್ವಿಸ್ಟ್ ಕೊಟ್ಟು ಪ್ರೇಕ್ಷಕರನ್ನು ಸೆಳೆದುಕೊಳ್ಳುವ ಅನಿವಾರ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:33 pm, Tue, 11 February 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು