AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama Serial: ಸಿಹಿಯ ಮನದಲ್ಲಿನ ಭಯ ದೂರ ಮಾಡಲು ಶ್ರೀ ರಾಮನ ಮುಂದಿನ ನಡೆಯೇನು?

ಸಿಹಿಗೆ ಅಮ್ಮನನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೋಗಿರಬಹುದು ಎಂಬ ಆತಂಕ ಉಂಟಾಗಿ ರಾಮ್ ಬಳಿಯಲ್ಲಿ ಪ್ರಶ್ನೆ ಮಾಡುತ್ತಾಳೆ. ಗಾಬರಿಗೊಂಡ ರಾಮ್ ಏನು ಮಾಡಬೇಕೆಂಬುದು ತಿಳಿಯದೇ ಕಂಗಾಲಾಗುತ್ತಾನೆ.

Seetha Raama Serial: ಸಿಹಿಯ ಮನದಲ್ಲಿನ ಭಯ ದೂರ ಮಾಡಲು ಶ್ರೀ ರಾಮನ ಮುಂದಿನ ನಡೆಯೇನು?
ಸೀತಾ ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Aug 10, 2023 | 9:38 PM

Share

ಸೀತಾ ರಾಮ’ (Seetha Raama Serial) ಧಾರಾವಾಹಿ ಸಂಚಿಕೆ 18: ರುದ್ರ ಪ್ರತಾಪನ ಪ್ಲಾನ್ ವರ್ಕ್ ಆಗಿದೆ. ಸೀತಾ ತಿಳಿಯದೇ ಲಾಯರ್ ಬಲೆಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾಳೆ. ಮುಖ್ಯವಾಗಿ ಸೀತಾಳಿಗೆ ಮನೆ ಸಮಸ್ಯೆ ಬಗೆಹರಿಸಿಕೊಳ್ಳಬೇಕಾಗಿರುತ್ತದೆ. ಆದರೆ ರುದ್ರನಿಗೆ ಸೀತಾಳ ಜೊತೆ ಸಮಯ ಕಳೆಯಬೇಕಾಗಿರುತ್ತದೆ. ಅದಕ್ಕಾಗಿಯೇ ಅಸಭ್ಯವಾಗಿ ನಡೆದುಕೊಳ್ಳಲು ಪ್ರಾಂಭಿಸುತ್ತಾನೆ. ಆದರೆ ಸೀತಾಳಿಗೆ ಬಿಸಿ ತುಪ್ಪ ಬಾಯಲ್ಲಿ ಹಾಕಿದ ಅನುಭವ. ಉಗುಳಲು ಆಗದು ನುಂಗಲು ಆಗದ ಪರಿಸ್ಥಿತಿ. ಏನು ಮಾಡಬೇಕೆಂದು ತೋಚದೆ, ದಾರಿ ತಪ್ಪಿದವರ ಸ್ಥಿತಿಯಾಗುತ್ತದೆ.

ಸಿಹಿಗೆ ಅಮ್ಮನ ಚಿಂತೆ

ಇನ್ನು ಸಿಹಿಗೆ ಅಮ್ಮ ಜೈಲಿಗೆ ಹೋಗುತ್ತಾಳೆ ಅನ್ನುವ ಭಯ. ಅದಕ್ಕಾಗಿಯೇ ಅಜ್ಜನ ಬಳಿ ಕಾರಾಗ್ರಹದ ಬಗ್ಗೆ ತಿಳಿದುಕೊಂಡು ಭಯ ಪಟ್ಟುಕೊಳ್ಳುತ್ತಾಳೆ. ಸೀತಾಳ ಅತ್ತಿಗೆ ನೋಟಿಸ್ ವಿಷಯವಾಗಿ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಮಾತು ಅವಳನ್ನು ಭಯಪಡಿಸಿರುತ್ತದೆ. ಹಾಗಾಗಿ ಆಲೋಚನೆಯಂತಾದರೆ ಎಂಬುದೇ ಅವಳಿಗೆ ಆತಂಕ ಮೂಡಿಸುತ್ತದೆ.

ರಾಮನಿಗೆ ಸೀತಾಳದ್ದೇ ಚಿಂತೆ

ಇನ್ನು ಆಫೀಸ್ನಲ್ಲಿ ಹೊಸ ಅಕೌಂಟ್ ಟೀಮ್ ಬಂದಿರುವುದರಿಂದ, ಚರಣ್ ಡಿ. ಅವರಿಗೆ ತಲೆ ನೋವು ತರಿಸುತ್ತದೆ. ಅದಕ್ಕಾಗಿಯೇ ಆ ವಿಷಯವನ್ನು ಭಾರ್ಗವಿಗೆ ಮುಟ್ಟಿಸುವ ಕೆಲಸ ಮಾಡುತ್ತಾನೆ. ಮನೆಯವರಿಂದ ಗೊತ್ತಾಗದ ವಿಷಯ ಮ್ಯಾನೇಜರ್ ನಿಂದ ಬಂದು ತಲುಪುತ್ತಿರುವುದು ಭಾರ್ಗವಿಗೆ ಮುಂದಿನ ಆಟಕ್ಕೆ ಸಜ್ಜಾಗಲು ಸಹಾಯ ಮಾಡುತ್ತದೆ. ಇದೆಲ್ಲದರ ಮಧ್ಯೆ ರಾಮನಿಗೆ ಸೀತಾಳದ್ದೇ ಆತಂಕ. ಅದಕ್ಕಾಗಿಯೇ ಆಕೆಗೆ ಫೋನ್ ಮಾಡುತ್ತಾನೆ. ಯಾವುದೇ ಉತ್ತರ ಇಲ್ಲದಾಗ ಸಿಹಿಯ ಅಜ್ಜಿ ತಾತನಿಗೂ ಫೋನ್ ಮಾಡಿ ಸೀತಾ ಬಂದಿರುವ ಬಗ್ಗೆ ವಿಚಾರಿಸುತ್ತಾನೆ. ಇದನ್ನೆಲ್ಲಾ ಕೇಳುತ್ತಿದ್ದ ಸಿಹಿಗೆ ಅಮ್ಮನನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೋಗಿರಬಹುದು ಎಂಬ ಆತಂಕ ಉಂಟಾಗಿ ರಾಮ್ ಬಳಿಯಲ್ಲಿ ಪ್ರಶ್ನೆ ಮಾಡುತ್ತಾಳೆ. ಗಾಬರಿಗೊಂಡ ರಾಮ್ ಏನು ಮಾಡಬೇಕೆಂಬುದು ತಿಳಿಯದೇ ಕಂಗಾಲಾಗುತ್ತಾನೆ. ಮುಂದೇನಾಗಬಹುದು ಕಾದು ನೋಡಬೇಕಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Wed, 9 August 23

Follow Us
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
ಗದಗ: ಬಸ್ ನಿಲ್ಲಿಸದಿರುವುದನ್ನ ಪ್ರಶ್ನಿಸಿದ ವಿದ್ಯಾರ್ಥಿ ಮೇಲೆ ದರ್ಪ
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC ಬೋರ್ಡ್ ಎಡವಟ್ಟಿಗೆ ಪ್ರತಿಭಾವಂತ ಅಂಧ ವಿದ್ಯಾರ್ಥಿನಿ ಫೇಲ್
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
SSLC Results 2026: 1 ಅಂಕದಿಂದ ಫಸ್ಟ್ ರ‍್ಯಾಂಕ್ ಮಿಸ್!
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ಡೆನ್​ಮಾರ್ಕ್ನಲ್ಲಿ ಎರಡು ರೈಲುಗಳು ಮುಖಾಮುಖಿ ಡಿಕ್ಕಿ, 12 ಮಂದಿಗೆ ಗಾಯ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ತೃತೀಯ ಭಾಷೆ ಹಿಂದಿಯಲ್ಲಿ ಅನುತ್ತೀರ್ಣರಾದವರ ಸಂಖ್ಯೆ ಬಾರಿ ಇಳಿಕೆ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ
ವಿದ್ಯಾರ್ಥಿಗಳೇ ಗಮನಿಸಿ: SSLC ಫೇಲ್​​ ಆದವರಿಗೆ 3ನೇ ಬಾರಿ ಪರೀಕ್ಷೆ ಇರಲ್ಲ