AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama Serial: ಸಿಹಿಯ ಮನದಲ್ಲಿನ ಭಯ ದೂರ ಮಾಡಲು ಶ್ರೀ ರಾಮನ ಮುಂದಿನ ನಡೆಯೇನು?

ಸಿಹಿಗೆ ಅಮ್ಮನನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೋಗಿರಬಹುದು ಎಂಬ ಆತಂಕ ಉಂಟಾಗಿ ರಾಮ್ ಬಳಿಯಲ್ಲಿ ಪ್ರಶ್ನೆ ಮಾಡುತ್ತಾಳೆ. ಗಾಬರಿಗೊಂಡ ರಾಮ್ ಏನು ಮಾಡಬೇಕೆಂಬುದು ತಿಳಿಯದೇ ಕಂಗಾಲಾಗುತ್ತಾನೆ.

Seetha Raama Serial: ಸಿಹಿಯ ಮನದಲ್ಲಿನ ಭಯ ದೂರ ಮಾಡಲು ಶ್ರೀ ರಾಮನ ಮುಂದಿನ ನಡೆಯೇನು?
ಸೀತಾ ರಾಮ
Follow us
ಪ್ರೀತಿ ಭಟ್​, ಗುಣವಂತೆ
| Updated By: ಮಂಜುನಾಥ ಸಿ.

Updated on:Aug 10, 2023 | 9:38 PM

ಸೀತಾ ರಾಮ’ (Seetha Raama Serial) ಧಾರಾವಾಹಿ ಸಂಚಿಕೆ 18: ರುದ್ರ ಪ್ರತಾಪನ ಪ್ಲಾನ್ ವರ್ಕ್ ಆಗಿದೆ. ಸೀತಾ ತಿಳಿಯದೇ ಲಾಯರ್ ಬಲೆಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾಳೆ. ಮುಖ್ಯವಾಗಿ ಸೀತಾಳಿಗೆ ಮನೆ ಸಮಸ್ಯೆ ಬಗೆಹರಿಸಿಕೊಳ್ಳಬೇಕಾಗಿರುತ್ತದೆ. ಆದರೆ ರುದ್ರನಿಗೆ ಸೀತಾಳ ಜೊತೆ ಸಮಯ ಕಳೆಯಬೇಕಾಗಿರುತ್ತದೆ. ಅದಕ್ಕಾಗಿಯೇ ಅಸಭ್ಯವಾಗಿ ನಡೆದುಕೊಳ್ಳಲು ಪ್ರಾಂಭಿಸುತ್ತಾನೆ. ಆದರೆ ಸೀತಾಳಿಗೆ ಬಿಸಿ ತುಪ್ಪ ಬಾಯಲ್ಲಿ ಹಾಕಿದ ಅನುಭವ. ಉಗುಳಲು ಆಗದು ನುಂಗಲು ಆಗದ ಪರಿಸ್ಥಿತಿ. ಏನು ಮಾಡಬೇಕೆಂದು ತೋಚದೆ, ದಾರಿ ತಪ್ಪಿದವರ ಸ್ಥಿತಿಯಾಗುತ್ತದೆ.

ಸಿಹಿಗೆ ಅಮ್ಮನ ಚಿಂತೆ

ಇನ್ನು ಸಿಹಿಗೆ ಅಮ್ಮ ಜೈಲಿಗೆ ಹೋಗುತ್ತಾಳೆ ಅನ್ನುವ ಭಯ. ಅದಕ್ಕಾಗಿಯೇ ಅಜ್ಜನ ಬಳಿ ಕಾರಾಗ್ರಹದ ಬಗ್ಗೆ ತಿಳಿದುಕೊಂಡು ಭಯ ಪಟ್ಟುಕೊಳ್ಳುತ್ತಾಳೆ. ಸೀತಾಳ ಅತ್ತಿಗೆ ನೋಟಿಸ್ ವಿಷಯವಾಗಿ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಮಾತು ಅವಳನ್ನು ಭಯಪಡಿಸಿರುತ್ತದೆ. ಹಾಗಾಗಿ ಆಲೋಚನೆಯಂತಾದರೆ ಎಂಬುದೇ ಅವಳಿಗೆ ಆತಂಕ ಮೂಡಿಸುತ್ತದೆ.

ರಾಮನಿಗೆ ಸೀತಾಳದ್ದೇ ಚಿಂತೆ

ಇನ್ನು ಆಫೀಸ್ನಲ್ಲಿ ಹೊಸ ಅಕೌಂಟ್ ಟೀಮ್ ಬಂದಿರುವುದರಿಂದ, ಚರಣ್ ಡಿ. ಅವರಿಗೆ ತಲೆ ನೋವು ತರಿಸುತ್ತದೆ. ಅದಕ್ಕಾಗಿಯೇ ಆ ವಿಷಯವನ್ನು ಭಾರ್ಗವಿಗೆ ಮುಟ್ಟಿಸುವ ಕೆಲಸ ಮಾಡುತ್ತಾನೆ. ಮನೆಯವರಿಂದ ಗೊತ್ತಾಗದ ವಿಷಯ ಮ್ಯಾನೇಜರ್ ನಿಂದ ಬಂದು ತಲುಪುತ್ತಿರುವುದು ಭಾರ್ಗವಿಗೆ ಮುಂದಿನ ಆಟಕ್ಕೆ ಸಜ್ಜಾಗಲು ಸಹಾಯ ಮಾಡುತ್ತದೆ. ಇದೆಲ್ಲದರ ಮಧ್ಯೆ ರಾಮನಿಗೆ ಸೀತಾಳದ್ದೇ ಆತಂಕ. ಅದಕ್ಕಾಗಿಯೇ ಆಕೆಗೆ ಫೋನ್ ಮಾಡುತ್ತಾನೆ. ಯಾವುದೇ ಉತ್ತರ ಇಲ್ಲದಾಗ ಸಿಹಿಯ ಅಜ್ಜಿ ತಾತನಿಗೂ ಫೋನ್ ಮಾಡಿ ಸೀತಾ ಬಂದಿರುವ ಬಗ್ಗೆ ವಿಚಾರಿಸುತ್ತಾನೆ. ಇದನ್ನೆಲ್ಲಾ ಕೇಳುತ್ತಿದ್ದ ಸಿಹಿಗೆ ಅಮ್ಮನನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೋಗಿರಬಹುದು ಎಂಬ ಆತಂಕ ಉಂಟಾಗಿ ರಾಮ್ ಬಳಿಯಲ್ಲಿ ಪ್ರಶ್ನೆ ಮಾಡುತ್ತಾಳೆ. ಗಾಬರಿಗೊಂಡ ರಾಮ್ ಏನು ಮಾಡಬೇಕೆಂಬುದು ತಿಳಿಯದೇ ಕಂಗಾಲಾಗುತ್ತಾನೆ. ಮುಂದೇನಾಗಬಹುದು ಕಾದು ನೋಡಬೇಕಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Wed, 9 August 23

ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
ವಾಸ್ತು ಪ್ರಕಾರ ಮನೆಗೆ ಮೆಟ್ಟಿಲುಗಳನ್ನ ಇಡುವುದರ ಮಹತ್ವ ತಿಳಿಯಿರಿ
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
Daily horoscope: ಈ ರಾಶಿಯವರು ಸಾಲಗಾರರ ಕಾಟದಿಂದ ಮುಕ್ತರಾಗುವರು
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ