AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama Serial: ಸಿಹಿಯ ಮನದಲ್ಲಿನ ಭಯ ದೂರ ಮಾಡಲು ಶ್ರೀ ರಾಮನ ಮುಂದಿನ ನಡೆಯೇನು?

ಸಿಹಿಗೆ ಅಮ್ಮನನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೋಗಿರಬಹುದು ಎಂಬ ಆತಂಕ ಉಂಟಾಗಿ ರಾಮ್ ಬಳಿಯಲ್ಲಿ ಪ್ರಶ್ನೆ ಮಾಡುತ್ತಾಳೆ. ಗಾಬರಿಗೊಂಡ ರಾಮ್ ಏನು ಮಾಡಬೇಕೆಂಬುದು ತಿಳಿಯದೇ ಕಂಗಾಲಾಗುತ್ತಾನೆ.

Seetha Raama Serial: ಸಿಹಿಯ ಮನದಲ್ಲಿನ ಭಯ ದೂರ ಮಾಡಲು ಶ್ರೀ ರಾಮನ ಮುಂದಿನ ನಡೆಯೇನು?
ಸೀತಾ ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Aug 10, 2023 | 9:38 PM

Share

ಸೀತಾ ರಾಮ’ (Seetha Raama Serial) ಧಾರಾವಾಹಿ ಸಂಚಿಕೆ 18: ರುದ್ರ ಪ್ರತಾಪನ ಪ್ಲಾನ್ ವರ್ಕ್ ಆಗಿದೆ. ಸೀತಾ ತಿಳಿಯದೇ ಲಾಯರ್ ಬಲೆಯಲ್ಲಿ ಸಿಕ್ಕಿ ಹಾಕಿಕೊಳ್ಳುತ್ತಾಳೆ. ಮುಖ್ಯವಾಗಿ ಸೀತಾಳಿಗೆ ಮನೆ ಸಮಸ್ಯೆ ಬಗೆಹರಿಸಿಕೊಳ್ಳಬೇಕಾಗಿರುತ್ತದೆ. ಆದರೆ ರುದ್ರನಿಗೆ ಸೀತಾಳ ಜೊತೆ ಸಮಯ ಕಳೆಯಬೇಕಾಗಿರುತ್ತದೆ. ಅದಕ್ಕಾಗಿಯೇ ಅಸಭ್ಯವಾಗಿ ನಡೆದುಕೊಳ್ಳಲು ಪ್ರಾಂಭಿಸುತ್ತಾನೆ. ಆದರೆ ಸೀತಾಳಿಗೆ ಬಿಸಿ ತುಪ್ಪ ಬಾಯಲ್ಲಿ ಹಾಕಿದ ಅನುಭವ. ಉಗುಳಲು ಆಗದು ನುಂಗಲು ಆಗದ ಪರಿಸ್ಥಿತಿ. ಏನು ಮಾಡಬೇಕೆಂದು ತೋಚದೆ, ದಾರಿ ತಪ್ಪಿದವರ ಸ್ಥಿತಿಯಾಗುತ್ತದೆ.

ಸಿಹಿಗೆ ಅಮ್ಮನ ಚಿಂತೆ

ಇನ್ನು ಸಿಹಿಗೆ ಅಮ್ಮ ಜೈಲಿಗೆ ಹೋಗುತ್ತಾಳೆ ಅನ್ನುವ ಭಯ. ಅದಕ್ಕಾಗಿಯೇ ಅಜ್ಜನ ಬಳಿ ಕಾರಾಗ್ರಹದ ಬಗ್ಗೆ ತಿಳಿದುಕೊಂಡು ಭಯ ಪಟ್ಟುಕೊಳ್ಳುತ್ತಾಳೆ. ಸೀತಾಳ ಅತ್ತಿಗೆ ನೋಟಿಸ್ ವಿಷಯವಾಗಿ ಜೈಲಿಗೆ ಹೋಗಬೇಕಾಗುತ್ತದೆ ಎಂಬ ಮಾತು ಅವಳನ್ನು ಭಯಪಡಿಸಿರುತ್ತದೆ. ಹಾಗಾಗಿ ಆಲೋಚನೆಯಂತಾದರೆ ಎಂಬುದೇ ಅವಳಿಗೆ ಆತಂಕ ಮೂಡಿಸುತ್ತದೆ.

ರಾಮನಿಗೆ ಸೀತಾಳದ್ದೇ ಚಿಂತೆ

ಇನ್ನು ಆಫೀಸ್ನಲ್ಲಿ ಹೊಸ ಅಕೌಂಟ್ ಟೀಮ್ ಬಂದಿರುವುದರಿಂದ, ಚರಣ್ ಡಿ. ಅವರಿಗೆ ತಲೆ ನೋವು ತರಿಸುತ್ತದೆ. ಅದಕ್ಕಾಗಿಯೇ ಆ ವಿಷಯವನ್ನು ಭಾರ್ಗವಿಗೆ ಮುಟ್ಟಿಸುವ ಕೆಲಸ ಮಾಡುತ್ತಾನೆ. ಮನೆಯವರಿಂದ ಗೊತ್ತಾಗದ ವಿಷಯ ಮ್ಯಾನೇಜರ್ ನಿಂದ ಬಂದು ತಲುಪುತ್ತಿರುವುದು ಭಾರ್ಗವಿಗೆ ಮುಂದಿನ ಆಟಕ್ಕೆ ಸಜ್ಜಾಗಲು ಸಹಾಯ ಮಾಡುತ್ತದೆ. ಇದೆಲ್ಲದರ ಮಧ್ಯೆ ರಾಮನಿಗೆ ಸೀತಾಳದ್ದೇ ಆತಂಕ. ಅದಕ್ಕಾಗಿಯೇ ಆಕೆಗೆ ಫೋನ್ ಮಾಡುತ್ತಾನೆ. ಯಾವುದೇ ಉತ್ತರ ಇಲ್ಲದಾಗ ಸಿಹಿಯ ಅಜ್ಜಿ ತಾತನಿಗೂ ಫೋನ್ ಮಾಡಿ ಸೀತಾ ಬಂದಿರುವ ಬಗ್ಗೆ ವಿಚಾರಿಸುತ್ತಾನೆ. ಇದನ್ನೆಲ್ಲಾ ಕೇಳುತ್ತಿದ್ದ ಸಿಹಿಗೆ ಅಮ್ಮನನ್ನು ಪೊಲೀಸರು ಜೈಲಿಗೆ ಕರೆದುಕೊಂಡು ಹೋಗಿರಬಹುದು ಎಂಬ ಆತಂಕ ಉಂಟಾಗಿ ರಾಮ್ ಬಳಿಯಲ್ಲಿ ಪ್ರಶ್ನೆ ಮಾಡುತ್ತಾಳೆ. ಗಾಬರಿಗೊಂಡ ರಾಮ್ ಏನು ಮಾಡಬೇಕೆಂಬುದು ತಿಳಿಯದೇ ಕಂಗಾಲಾಗುತ್ತಾನೆ. ಮುಂದೇನಾಗಬಹುದು ಕಾದು ನೋಡಬೇಕಾಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:50 pm, Wed, 9 August 23

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ