AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama Serial: ಸೀತಾ, ರಾಮರ ಗೆಳತನಕ್ಕೆ ಭಾರ್ಗವಿಯೇ ಅಡ್ಡಗೋಡೆಯಾಗುತ್ತಾಳಾ?

Seetha Raama Serial: ರಾಮನ ಬದುಕಿನಲ್ಲಿ ಯಾರೋ ಹುಡುಗಿ ಬಂದಿದ್ದಾಳೆ ಎಂಬುದು ಭಾರ್ಗವಿಗೆ ಅನುಮಾನವಿದ್ದರೂ ಯಾರು? ಏನು? ಎಂಬುದು ತಿಳಿದಿಲ್ಲದ ಕಾರಣ ಅವಳ ಕುತುಹೂಲ ದಿನೇ ದಿನೇ ಹೆಚ್ಚುತ್ತದೆ. ಸೀತಾ, ರಾಮರ ಗೆಳತನಕ್ಕೆ ಭಾರ್ಗವಿಯೇ ಅಡ್ಡಗೋಡೆಯಾಗುತ್ತಾಳಾ? ಮನೆ ಬಿಡಿಸಿಕೊಳ್ಳುವಲ್ಲಿ ರಾಮ್, ಸೀತಾಗೆ ಹೇಗೆ ಸಹಾಯ ಮಾಡಬಹುದು? ಕಾದು ನೋಡೋಣ.

Seetha Raama Serial: ಸೀತಾ, ರಾಮರ ಗೆಳತನಕ್ಕೆ ಭಾರ್ಗವಿಯೇ ಅಡ್ಡಗೋಡೆಯಾಗುತ್ತಾಳಾ?
ಸೀತಾ ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 02, 2023 | 7:59 AM

Share

ಸೀತಾ ರಾಮ’ (Seetha Raama Serial) ಧಾರಾವಾಹಿ ಸಂಚಿಕೆ 35: ಸೀತಾಳ ಗಂಡನ ಬಗ್ಗೆ ಕೇಳಿದ್ದ ರಾಮನಿಗೆ ಅದಕ್ಕೆ ಸರಿಯಾದ ಉತ್ತರ ಸಿಗದಿದ್ದರೂ ಸೀತಾಳ ಜೊತೆಗಿನ ಗೆಳೆತನ ಮಾತ್ರ ಗಟ್ಟಿಯಾಗುತ್ತದೆ. ಇದಕ್ಕೆಲ್ಲಾ ಸಿಹಿಯೇ ಕೊಂಡಿಯಾದರೂ ಸೀತಾ, ರಾಮರ ಬಂಧ ಅನುಬಂಧವಾಗುವ ಸಮಯ ಹತ್ತಿರವಾಗುತ್ತಿರುವುದರಲ್ಲಿ ಸಂಶಯವೇ ಇಲ್ಲ. ಇನ್ನು ಸೀತಾ ಮನೆ ಮಾರುವ ವಿಷಯ ರಾಮನನ್ನು ಕೊರಗುವಂತೆ ಮಾಡಿರುತ್ತದೆ ಹಾಗಾಗಿ ಆ ಬಗ್ಗೆ ಸೀತಾ ಬಳಿ ಮಾತನಾಡುತ್ತಾನೆ. ಆದರೆ ಅವಳು ಮಾತ್ರ ಆ ವಿಷಯ ಬಿಟ್ಟು ಬೇರೆ ಯಾವ ದಾರಿಯನ್ನೂ ಒಪ್ಪುವುದಿಲ್ಲ. ಈ ಸಮಸ್ಯೆ ಬಗೆಹರಿಸಲು ಹೇಗಾದರೂ ಅವಳಿಗೆ ಸಹಾಯ ಮಾಡಬೇಕು ಎಂದು ಅಂದುಕೊಳ್ಳುತ್ತಾನೆ. ಇನ್ನು ಈ ವಿಷಯವನ್ನು ಅಶೋಕನಿಗೂ ತಿಳಿಸುತ್ತಾನೆ. ಸೀತಾ, ಸಿಹಿಯೊಂದಿಗೆ ಕಳೆದ ಸಂತೋಷದ ಘಳಿಗೆಯನ್ನೂ ಹಂಚಿಕೊಳ್ಳುತ್ತಾನೆ.

ಭಾರ್ಗವಿ ಮತ್ತೆ ರಾಮನ ಚಿಕ್ಕಪ್ಪ ಸತ್ಯನ ಜೊತೆ ನಡೆದ ಜಗಳ ಮನೆಯವರ ಮನೆ ಮುಂದೆ ಬಯಲಾಗುತ್ತದೆ. ಆದರೆ ತನ್ನದೇನೂ ತಪ್ಪೇ ಇಲ್ಲ ಎಂಬಂತೆ ಭಾರ್ಗವಿ ಅದನ್ನೆಲ್ಲಾ ಸಲಿಸಾಗಿ ಮುಚ್ಚಿ ಹಾಕುತ್ತಾಳೆ. ಅದನ್ನು ನೋಡಿದ ದೇಸಾಯಿ ಮನೆಯವರೂ ಕೂಡ ಸತ್ಯ ಗೊತ್ತಿಲ್ಲದೇ ಸತ್ಯನನ್ನೇ ಸುಳ್ಳುಗಾರನನ್ನಾಗಿ ನೋಡುತ್ತಾರೆ. ಆದರೆ ರಾಮ ಮಾತ್ರ ಚಿಕ್ಕಪ್ಪನನ್ನು ಎಂದಿಗೂ ಬಿಟ್ಟುಕೊಡುವುದಿಲ್ಲ. ಅವನು ಸಮಾಧಾನದಿಂದಲೇ ಅವರನ್ನು ಮಾತನಾಡಿಸಿ ಕಾಳಜಿ ತೋರಿಸುತ್ತಾನೆ.

ಎಲ್ಲವೂ ಇದ್ದು ಏನು ಇಲ್ಲದ ಪರಿಸ್ಥಿತಿ ರಾಮನದ್ದು. ಅದೇ ಸಮಯಕ್ಕೆ ಬಂದ ಭಾರ್ಗವಿಯೂ ರಾಮನನ್ನು ಸಮಾಧಾನ ಪಡಿಸಲು ನೋಡುತ್ತಾಳೆ. ಅವನ ಮದುವೆ ವಿಚಾರವನ್ನೂ ಪ್ರಸ್ತಾಪ ಮಾಡುತ್ತಾಳೆ. ಆದರೆ ರಾಮನ ಬಳಿ ಅದಾವುದಕ್ಕೂ ಉತ್ತರವಿರುವುದಿಲ್ಲ. ಭಾರ್ಗವಿ ಅಂದುಕೊಂಡ ಹಾಗೇ ರಾಮ್ ನಡೆದುಕೊಳ್ಳುವುದಿಲ್ಲ. ಅವನ ಬದುಕಿನಲ್ಲಿ ಯಾರೋ ಹುಡುಗಿ ಬಂದಿದ್ದಾಳೆ ಎಂಬುದು ಭಾರ್ಗವಿಗೆ ಅನುಮಾನವಿದ್ದರೂ ಯಾರು? ಏನು? ಎಂಬುದು ತಿಳಿದಿಲ್ಲದ ಕಾರಣ ಅವಳ ಕುತುಹೂಲ ಇನ್ನು ಹೆಚ್ಚುತ್ತದೆ. ಸೀತಾ, ರಾಮರ ಗೆಳತನಕ್ಕೆ ಭಾರ್ಗವಿಯೇ ಅಡ್ಡಗೋಡೆಯಾಗುತ್ತಾಳಾ? ಮನೆ ಬಿಡಿಸಿಕೊಳ್ಳುವಲ್ಲಿ ರಾಮ್, ಸೀತಾಗೆ ಹೇಗೆ ಸಹಾಯ ಮಾಡಬಹುದು? ಕಾದು ನೋಡೋಣ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ