AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama: ಸೀತಾ ಮತ್ತು ಸಿಹಿ ನೋಡಲು ರಾಮ್ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ?

ಚಿಕ್ಕಿಯ ಕಣ್ಣು ತಪ್ಪಿಸಿ, ರಾಮ್ ಮತ್ತು ಅಶೋಕ್ ಇಬ್ಬರೂ ಪೂಜೆ ಮಾಡುವ ಜಾಗದಿಂದ ಕಾಣೆಯಾಗುತ್ತಾರೆ. ಇನ್ನು ಸೀತಾ ಮತ್ತು ಸಿಹಿ ಕೃಷ್ಣ, ಯಶೋದೆಯಾಗಿ ನೃತ್ಯ ಮಾಡುತ್ತಾರೆ. ಸೀತಾ ಮತ್ತು ಸಿಹಿ ನೋಡಲು ರಾಮ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ? ಕಾದು ನೋಡೋಣ.

Seetha Raama: ಸೀತಾ ಮತ್ತು ಸಿಹಿ ನೋಡಲು ರಾಮ್ ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ?
ಗಗನ್​ ಚಿನ್ನಪ್ಪ, ವೈಷ್ಣವಿ ಗೌಡ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 09, 2023 | 9:14 AM

Share

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 41: ಸೀತಾ ಮತ್ತು ಸಿಹಿ ಇರುವ ವಠಾರ ನಂದ ಗೋಕುಲವಾಗಿ, ಸಿಹಿ ಬಾಲ ಕೃಷ್ಣನಾಗುತ್ತಾಳೆ. ಜೊತೆಗೆ ತನ್ನ ಮನೆಯವರೊಂದಿಗೆ ಸೇರಿ ಕೃಷ್ಣನ ಬಾಲ್ಯದ ದಿನಗಳ ಬಗ್ಗೆ ಕೇಳಿ ತಿಳಿದುಕೊಳ್ಳುತ್ತಾ, ನೂರೆಂಟು ಪ್ರಶ್ನೆಗಳನ್ನು ಕೇಳುತ್ತಾಳೆ. ಎಲ್ಲದಕ್ಕೂ ಅವಳ ಅಜ್ಜಿ ಉತ್ತರ ಕೊಡುತ್ತಾಳೆ. ಸಿಹಿ ತನ್ನ ಡಾನ್ಸ್ ನೋಡಲು ಫ್ರೆಂಡ್ ಶ್ರೀರಾಮನನ್ನು ಕೆರೆಯುತ್ತೇನೆ ಎನ್ನುತ್ತಾಳೆ. ಸೀತಾ ಏನೆ ಹೇಳಿದರೂ ಅವನನ್ನು ಕರೆಯಲೇ ಬೇಕು ಎಂದು ಹಠ ಮಾಡುತ್ತಾಳೆ.

ಇನ್ನು ಭಾರ್ಗವಿ ಮ್ಯಾನೇಜರ್ ಚರಣ್ ಗೆ ಫೋನ್ ಮಾಡಿ ಸೀತಾಗೆ ಹೋಗುವ ದುಡ್ಡನ್ನು ತಡೆಯಬೇಕು, ನಿಮ್ಮ ಬಾಸ್ ಆಫೀಸಿಗೆ ಬರುವುದಿಲ್ಲ ಎನ್ನುತ್ತಾಳೆ. ಅಷ್ಟೇ ಹೊತ್ತಿಗೆ ಅಲ್ಲಿಗೆ ಬಂದ ಅಶೋಕ್ ಅವರು ತಮ್ಮ ಮ್ಯಾನೇಜರ್ ಜೊತೆಗೆ ಮಾತನಾಡುತ್ತಿರಬಹುದು ಎಂದು ತಿಳಿದು ಅವರಿಗೂ ಕರೆ ಮಾಡಿ ನೋಡುತ್ತಾನೆ. ಅಲ್ಲಿಯೂ ಫೋನ್ ಎಂಗೇಜ್ ಬರುವುದನ್ನು ನೋಡಿ ಭಾರ್ಗವಿ ಮತ್ತು ಚರಣ್ ಮಾತನಾಡುತ್ತಿರಬಹುದು ಎಂದು ಊಹಿಸುತ್ತಾನೆ. ಸ್ಪಷ್ಟವಾಗಿ ಹೇಳುವುದಕ್ಕೆ ಅವನ ಬಳಿ ಯಾವುದೇ ಪುರಾವೆಗಳಿರುವುದುದಿಲ್ಲ. ಹಾಗಾಗಿ ಅವರೇ ಕಳ್ಳರಿರಬಹುದು ಎಂದು ಹೇಳುವುದು ಅಷ್ಟು ಸುಲಭವೂ ಅಲ್ಲ ಎಂಬುದು ಅಶೋಕ್​ಗೆ ತಿಳಿದಿರುತ್ತದೆ.

ಇದನ್ನೂ ಓದಿ: ಟಿಆರ್​ಪಿ ವಿವರ: ಎರಡನೇ ಸ್ಥಾನದಲ್ಲೇ ಮುಂದುವರಿದ ‘ಸೀತಾ ರಾಮ’; ಟಾಪ್ 5 ಧಾರಾವಾಹಿಗಳಿವು..

ಇನ್ನು ಸಿಹಿ ಬಾಲ ಕೃಷ್ಣನಾದ ಮೇಲೆ ಸೀತಾ ಯಶೋದೆ ಆಗಲೇ ಬೇಕಲ್ಲ. ಅದೇ ರೀತಿ ಇಬ್ಬರೂ ಸೇರಿ ಡಾನ್ಸ್ ಮಾಡುವುದಕ್ಕೆ ರೆಡಿ ಆಗುತ್ತಾರೆ. ಸಿಹಿ ಕೂಡ ಫೋನ್ ಮಾಡಿ ರಾಮನನ್ನು ಬರ ಹೇಳುತ್ತಾಳೆ. ರಾಮ್ ಮನೆಯಲ್ಲೂ ಹಬ್ಬದ ಕಳೆ ಕಟ್ಟಿರುತ್ತದೆ. ಆದರೆ ಸಿಹಿ ಹೇಳಿದ ಮೇಲೆ ರಾಮ್​ನಿಗೆ ಬರುವುದಿಲ್ಲ ಎನ್ನಲು ಮನಸ್ಸಾಗುವುದಿಲ್ಲ. ಚಿಕ್ಕಿಯ ಕಣ್ಣು ತಪ್ಪಿಸಿ, ರಾಮ್ ಮತ್ತು ಅಶೋಕ್ ಇಬ್ಬರೂ ಪೂಜೆ ಮಾಡುವ ಜಾಗದಿಂದ ಕಾಣೆಯಾಗುತ್ತಾರೆ. ಇನ್ನು ಸೀತಾ ಮತ್ತು ಸಿಹಿ ಕೃಷ್ಣ, ಯಶೋದೆಯಾಗಿ ನೃತ್ಯ ಮಾಡುತ್ತಾರೆ. ರಾಮ, ಸೀತಾ ಮತ್ತು ಸಿಹಿ ನೋಡಲು ಬರುತ್ತಾನಾ? ಭಾರ್ಗವಿಗೆ ಶ್ರೀರಾಮನ ಗೆಳೆತನದ ಬಗ್ಗೆ ತಿಳಿಯುತ್ತಾ? ಕಾದು ನೋಡೋಣ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?