AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಮನಿಗೆ ಕೌಂಟರ್ ಕೊಡಲು ಮಾಸ್ಟರ್ ಪ್ಲಾನ್ ಮಾಡಿದ ಭಾರ್ಗವಿ; ಸೀತಾಳಿಗೆ ಸಂಕಷ್ಟ

ಪ್ರಿಯಾಳಿಗೆ ಬಂದ ಹಣವನ್ನು ಸೀತಾಳಿಗೆ ಕೊಡಿಸುವ ವ್ಯವಸ್ಥೆ ಮಾಡು ಎಂದು ಅಶೋಕನ ಬಳಿ ರಾಮ ಕೇಳಿಕೊಳ್ಳುತ್ತಾನೆ. ಪ್ರಿಯಾ ಜೊತೆ ಈ ವಿಷಯ ಮಾತನಾಡು ಎಂದು ಹೇಳುತ್ತಾನೆ. ಇದೆಲ್ಲಾ ಕೇಳಿಸಿಕೊಂಡ ಮ್ಯಾನೇಜರ್ ಚರಣ್, ರಾಮನ ಚಿಕ್ಕಮ್ಮ ಭಾರ್ಗವಿಗೆ ವಿಷಯ ತಿಳಿಸುತ್ತಾನೆ.

ರಾಮನಿಗೆ ಕೌಂಟರ್ ಕೊಡಲು ಮಾಸ್ಟರ್ ಪ್ಲಾನ್ ಮಾಡಿದ ಭಾರ್ಗವಿ; ಸೀತಾಳಿಗೆ ಸಂಕಷ್ಟ
ಸೀತಾ ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on:Sep 15, 2023 | 7:39 AM

Share

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 45: ಶಾಲೆಯಿಂದ ಒಂದು ಚಿಕ್ಕ ಪ್ರವಾಸಕ್ಕೆ ಹೋಗಲು ಸೀತಮ್ಮನನ್ನು ಒಪ್ಪಿಸಿ ಎಂದು ಅಜ್ಜಿ ತಾತನ ಬಳಿ ಸಿಹಿ ಕೇಳಿಕೊಳ್ಳುತ್ತಾಳೆ ಸಿಹಿ. ಅದಕ್ಕೆ ಇಬ್ಬರ ಒಪ್ಪಿಗೆಯೂ ಸಿಗುತ್ತದೆ. ಸಿಹಿ ಮತ್ತು ಅವಳ ಗೆಳೆಯ ಶ್ರೇಯಸ್ ಇಬ್ಬರೂ ಸೇರಿ ಪಿಕ್ನಿಕ್​ಗೆ ಏನೇನು ಬೇಕು ಎಂಬುದನ್ನು ಲಿಸ್ಟ್ ಮಾಡಿಕೊಂಡು ಬಜೆಟ್ ಲೆಕ್ಕ ಹಾಕುತ್ತಾರೆ. ಅಮ್ಮನಿಗೆ ಜಾಸ್ತಿ ಖರ್ಚು ಬರುತ್ತದೇಯೋ ಏನೋ ಎಂದು ಅನಗತ್ಯ ವಸ್ತುಗಳನ್ನು ತೆಗೆದುಕೊಳ್ಳದೇ ಎಲ್ಲವನ್ನೂ ಕ್ಯಾನ್ಸಲ್ ಮಾಡುತ್ತಾಳೆ. ಅದನ್ನು ನೋಡಿದ ಅಜ್ಜಿ ತಾತ ಅವಳಿಗೆ ಅಗತ್ಯವಿರುವ ಕೆಲವು ವಸ್ತುಗಳನ್ನು ತಂದು ಕೊಡುತ್ತಾರೆ. ಅಮ್ಮನ ಸ್ವಲ್ಪ ಭಾರ ಇಳಿಸಿದಂತಾಯಿತು ಎಂದು ಸಿಹಿಯೂ ಖುಷಿ ಪಡುತ್ತಾಳೆ.

ಇನ್ನು ಸೀತಾಳ ಅತ್ತಿಗೆ ರುದ್ರ ಪ್ರತಾಪನ ಕಾಟದಿಂದ ಹೈರಾಣವಾಗುತ್ತಾಳೆ. ದುಡ್ಡಿನ ಆಸೆಗೋಸ್ಕರ ಲಾಯರ್ ಹೇಳಿದ ಹಾಗೇ ಮಾಡುತ್ತಾ ಬಂದ ಅವಳಿಗೆ, ಸೀತಾಳ ಹಠ ನುಂಗಲಾರದ ಬಿಸಿ ತುಪ್ಪವಾಗುತ್ತದೆ. ಇನ್ನು ಲಕ್ಷ ಹಣ ಬಂದ ಖುಷಿಯಲ್ಲಿ ಪ್ರಿಯಾ ಅಶೋಕ್​ಗೆ ಉಡುಗೊರೆ ನೀಡಲು ಶಾಪಿಂಗ್​ಗೆ ಹೋಗುತ್ತಾಳೆ. ಏನು ತೆಗೆದುಕೊಳ್ಳಬೇಕು ಎಂದು ತಿಳಿಯದೇ ಅಂಗಡಿಯೆಲ್ಲಾ ಹುಡುಕಾಡುತ್ತಾಳೆ. ಕೊನೆಗೂ ಒಂದು ಉಡುಗೊರೆ ತೆಗೆದುಕೊಳ್ಳುತ್ತಾಳೆ.

ಇದನ್ನೂ ಓದಿ: ಟಿಆರ್​ಪಿ ವಿವರ: ಎರಡನೇ ಸ್ಥಾನದಲ್ಲೇ ಮುಂದುವರಿದ ‘ಸೀತಾ ರಾಮ’; ಟಾಪ್ 5 ಧಾರಾವಾಹಿಗಳಿವು..

ಪ್ರಿಯಾಳಿಗೆ ಬಂದ ಹಣವನ್ನು ಸೀತಾಳಿಗೆ ಕೊಡಿಸುವ ವ್ಯವಸ್ಥೆ ಮಾಡು ಎಂದು ಅಶೋಕನ ಬಳಿ ರಾಮ ಕೇಳಿಕೊಳ್ಳುತ್ತಾನೆ. ಪ್ರಿಯಾ ಜೊತೆ ಈ ವಿಷಯ ಮಾತನಾಡು ಎಂದು ಹೇಳುತ್ತಾನೆ. ಇದೆಲ್ಲಾ ಕೇಳಿಸಿಕೊಂಡ ಮ್ಯಾನೇಜರ್ ಚರಣ್, ರಾಮನ ಚಿಕ್ಕಮ್ಮ ಭಾರ್ಗವಿಗೆ ವಿಷಯ ತಿಳಿಸುತ್ತಾನೆ. ಅದನ್ನು ಕೇಳಿದ ಅವಳು ಸೀತಾಳಿಗೆ ಇನ್ನಷ್ಟು ತೊಂದರೆ ಕೊಡಲು ಸ್ಯಾಲರಿ ಡೀಟೇಲ್ಸ್ ಕೇಳುತ್ತಾಳೆ. ಸೀತಾಳಿಗೆ ಬರಬೇಕಾದ ಹಣ ಅವಳ ಕೈ ಸೇರುತ್ತಾ? ಭಾರ್ಗವಿ ಆಟಕ್ಕೆ ಅಶೋಕ್ ಪೂರ್ಣವಿರಾಮ ಇಡುತ್ತಾನಾ? ಸೀತಾಳ ನಂಬಿಕೆ ಕಳೆದುಕೊಳ್ಳುತ್ತಾನಾ ರಾಮ್? ಕಾದು ನೋಡೋಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:38 am, Fri, 15 September 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು