AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ವಠಾರದಲ್ಲಿ ಗಣೇಶನ ಹಬ್ಬ ನಡೆಯುತ್ತಾ?

Seetha Raama:ನನ್ನ ಬದುಕಿನ ಮುಖ್ಯವಾದ ವ್ಯಕ್ತಿಗಳಲ್ಲಿ ಸಿಹಿಯೂ ಒಬ್ಬಳು ಎನ್ನುತ್ತಾನೆ ರಾಮ್. ನನ್ನಿಂದ ಅವಳನ್ನು ದೂರ ಮಾಡಬೇಡಿ ಎಂದು ಸೀತಾ ಬಳಿ ಕೈ ಮುಗಿದು ಬೇಡಿಕೊಳ್ಳುತ್ತಾನೆ. ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ಕಾದು ನೋಡೋಣ.

ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ವಠಾರದಲ್ಲಿ ಗಣೇಶನ ಹಬ್ಬ ನಡೆಯುತ್ತಾ?
ಸೀತಾ-ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 20, 2023 | 11:48 PM

Share

ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 49: ಸಿಹಿಗೆ ತಮ್ಮ ವಠಾರದಲ್ಲಿ ಗಣೇಶನನ್ನು ಕೂರಿಸುವ ಸಂಭ್ರಮ. ಮಕ್ಕಳೆಲ್ಲಾ ಸೇರಿ ಅಲ್ಪ ಸ್ವಲ್ಪ ದುಡ್ಡು ಒಟ್ಟುಗೂಡಿಸಿ, ಹೆಚ್ಚು ಬೇಕಿರುವ ದುಡ್ಡಿಗೆ ಏನು ಮಾಡುವುದು ಎಂದು ಚಿಂತೆ ಮಾಡುತ್ತಾರೆ. ಅಷ್ಟೇ ಹೊತ್ತಿಗೆ ಸಿಹಿ ತಾನು ನನ್ನ ಗೆಳೆಯನನ್ನು ಕೇಳುವೆ ಎನ್ನುತ್ತಾಳೆ. ಇನ್ನು ಸೀತಾ ಮನೆಗೆ ಬಂದ ಅವಳ ಅಣ್ಣ, ಹಣ ಕೇಳುತ್ತಾನೆ. ಇಲ್ಲ ಎಂದರೂ ಕೇಳದೆ ಇರುವಷ್ಟು ಹಣವನ್ನು ಕಿತ್ತುಕೊಂಡು ಹೋಗುತ್ತಾನೆ.

ಇತ್ತ ಸಿಹಿ, ರಾಮನಿಗೆ ಗಣಪನನ್ನು ಕೂರಿಸಲು ಹಣ ಕೊಡು ಎಂದು ಫೋನ್ ಮಾಡಿ ಕೇಳುತ್ತಾಳೆ. ಅಷ್ಟರಲ್ಲಿ ಅಲ್ಲಿಗೂ ಬಂದ ಸೀತಾಳ ಅಣ್ಣ ಅವಳು ಮನೆ ಮನೆ ತಿರುಗಿ ಒಟ್ಟು ಮಾಡಿಟ್ಟ ಹಣವನ್ನೂ ಹಿಂದೂ ಮುಂದೂ ನೋಡದೆಯೇ ಕಿತ್ತು ಹೋಗುತ್ತಾನೆ. ಇದೆಲ್ಲವನ್ನು ಫೋನ್ ನಲ್ಲಿ ನೋಡುತ್ತಿದ್ದ ರಾಮ್ ಅವಳ ಮನೆಗೆ ಬರುತ್ತಾನೆ. ಕೋಪದಲ್ಲಿಯೇ ಜೋರಾಗಿ ಅಳುತ್ತಾ ಮನೆಗೆ ಬಂದ ಸಿಹಿ ಸೀತಮ್ಮನ ಬಳಿ ಮಾವ ಮಾಡಿದ ಕೆಲಸವನ್ನು ಹೇಳುತ್ತಾಳೆ. ಎಲ್ಲರೂ ನಂಗೆ ಮೋಸ ಮಾಡುತ್ತಾರೆ ಎಂದು ಬೇಸರ ಪಟ್ಟುಕೊಳ್ಳುತ್ತಾಳೆ. ಅವಳನ್ನು ಸಮಾಧಾನ ಮಾಡಿದ ರಾಮ್ ತಾನು ಗಣೇಶನನ್ನು ತರುವುದಾಗಿ ಸಿಹಿಗೆ ಪ್ರಾಮೀಸ್ ಮಾಡುತ್ತಾನೆ. ಅದನ್ನು ನೋಡಿದ ಸೀತಾ ಮಕ್ಕಳಿಗೆ ಹಾಗೆಲ್ಲಾ ಆಣೆ – ಪ್ರಮಾಣ ಮಾಡಿ ಕಲಿಸಬೇಡಿ ಎನ್ನುತ್ತಾಳೆ. ಅದಕ್ಕೆ ರಾಮ್ ನನ್ನ ಬದುಕಿನ ಮುಖ್ಯವಾದ ವ್ಯಕ್ತಿಗಳಲ್ಲಿ ಸಿಹಿಯೂ ಒಬ್ಬಳು. ನನ್ನಿಂದ ಅವಳನ್ನು ದೂರ ಮಾಡಬೇಡಿ ಎಂದು ಸೀತಾ ಬಳಿ ಕೈ ಮುಗಿದು ಬೇಡಿಕೊಳ್ಳುತ್ತಾನೆ. ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ಕಾದು ನೋಡೋಣ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!