AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ವಠಾರದಲ್ಲಿ ಗಣೇಶನ ಹಬ್ಬ ನಡೆಯುತ್ತಾ?

Seetha Raama:ನನ್ನ ಬದುಕಿನ ಮುಖ್ಯವಾದ ವ್ಯಕ್ತಿಗಳಲ್ಲಿ ಸಿಹಿಯೂ ಒಬ್ಬಳು ಎನ್ನುತ್ತಾನೆ ರಾಮ್. ನನ್ನಿಂದ ಅವಳನ್ನು ದೂರ ಮಾಡಬೇಡಿ ಎಂದು ಸೀತಾ ಬಳಿ ಕೈ ಮುಗಿದು ಬೇಡಿಕೊಳ್ಳುತ್ತಾನೆ. ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ಕಾದು ನೋಡೋಣ.

ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ವಠಾರದಲ್ಲಿ ಗಣೇಶನ ಹಬ್ಬ ನಡೆಯುತ್ತಾ?
ಸೀತಾ-ರಾಮ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Sep 20, 2023 | 11:48 PM

Share

ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 49: ಸಿಹಿಗೆ ತಮ್ಮ ವಠಾರದಲ್ಲಿ ಗಣೇಶನನ್ನು ಕೂರಿಸುವ ಸಂಭ್ರಮ. ಮಕ್ಕಳೆಲ್ಲಾ ಸೇರಿ ಅಲ್ಪ ಸ್ವಲ್ಪ ದುಡ್ಡು ಒಟ್ಟುಗೂಡಿಸಿ, ಹೆಚ್ಚು ಬೇಕಿರುವ ದುಡ್ಡಿಗೆ ಏನು ಮಾಡುವುದು ಎಂದು ಚಿಂತೆ ಮಾಡುತ್ತಾರೆ. ಅಷ್ಟೇ ಹೊತ್ತಿಗೆ ಸಿಹಿ ತಾನು ನನ್ನ ಗೆಳೆಯನನ್ನು ಕೇಳುವೆ ಎನ್ನುತ್ತಾಳೆ. ಇನ್ನು ಸೀತಾ ಮನೆಗೆ ಬಂದ ಅವಳ ಅಣ್ಣ, ಹಣ ಕೇಳುತ್ತಾನೆ. ಇಲ್ಲ ಎಂದರೂ ಕೇಳದೆ ಇರುವಷ್ಟು ಹಣವನ್ನು ಕಿತ್ತುಕೊಂಡು ಹೋಗುತ್ತಾನೆ.

ಇತ್ತ ಸಿಹಿ, ರಾಮನಿಗೆ ಗಣಪನನ್ನು ಕೂರಿಸಲು ಹಣ ಕೊಡು ಎಂದು ಫೋನ್ ಮಾಡಿ ಕೇಳುತ್ತಾಳೆ. ಅಷ್ಟರಲ್ಲಿ ಅಲ್ಲಿಗೂ ಬಂದ ಸೀತಾಳ ಅಣ್ಣ ಅವಳು ಮನೆ ಮನೆ ತಿರುಗಿ ಒಟ್ಟು ಮಾಡಿಟ್ಟ ಹಣವನ್ನೂ ಹಿಂದೂ ಮುಂದೂ ನೋಡದೆಯೇ ಕಿತ್ತು ಹೋಗುತ್ತಾನೆ. ಇದೆಲ್ಲವನ್ನು ಫೋನ್ ನಲ್ಲಿ ನೋಡುತ್ತಿದ್ದ ರಾಮ್ ಅವಳ ಮನೆಗೆ ಬರುತ್ತಾನೆ. ಕೋಪದಲ್ಲಿಯೇ ಜೋರಾಗಿ ಅಳುತ್ತಾ ಮನೆಗೆ ಬಂದ ಸಿಹಿ ಸೀತಮ್ಮನ ಬಳಿ ಮಾವ ಮಾಡಿದ ಕೆಲಸವನ್ನು ಹೇಳುತ್ತಾಳೆ. ಎಲ್ಲರೂ ನಂಗೆ ಮೋಸ ಮಾಡುತ್ತಾರೆ ಎಂದು ಬೇಸರ ಪಟ್ಟುಕೊಳ್ಳುತ್ತಾಳೆ. ಅವಳನ್ನು ಸಮಾಧಾನ ಮಾಡಿದ ರಾಮ್ ತಾನು ಗಣೇಶನನ್ನು ತರುವುದಾಗಿ ಸಿಹಿಗೆ ಪ್ರಾಮೀಸ್ ಮಾಡುತ್ತಾನೆ. ಅದನ್ನು ನೋಡಿದ ಸೀತಾ ಮಕ್ಕಳಿಗೆ ಹಾಗೆಲ್ಲಾ ಆಣೆ – ಪ್ರಮಾಣ ಮಾಡಿ ಕಲಿಸಬೇಡಿ ಎನ್ನುತ್ತಾಳೆ. ಅದಕ್ಕೆ ರಾಮ್ ನನ್ನ ಬದುಕಿನ ಮುಖ್ಯವಾದ ವ್ಯಕ್ತಿಗಳಲ್ಲಿ ಸಿಹಿಯೂ ಒಬ್ಬಳು. ನನ್ನಿಂದ ಅವಳನ್ನು ದೂರ ಮಾಡಬೇಡಿ ಎಂದು ಸೀತಾ ಬಳಿ ಕೈ ಮುಗಿದು ಬೇಡಿಕೊಳ್ಳುತ್ತಾನೆ. ಸಿಹಿಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾನಾ ರಾಮ್? ಕಾದು ನೋಡೋಣ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ವಿಜಯನಗರ: ಮನೆಗಳಿಗೆ ಕನ್ನ ಹಾಕ್ತಿದ್ದ ಇಬ್ಬರು ಖದೀಮರು ಅರೆಸ್ಟ್
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಕಬ್ಬನ್ ಪಾರ್ಕಲ್ಲಿ ಕಳೆಗಟ್ಟಿದ ಮಾವು ಮೇಳ, ಖರೀದಿಗೆ ಮುಗಿಬಿದ್ದ ಜನರು
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಸಂತಾನವನ್ನು ಮುಂದೂಡಿದರೆ ಯಾವ ದೋಷ ಉಂಟಾಗುತ್ತೆ?
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಇಂದು ಈ ರಾಶಿಯವರಿಗೆ ಹಿತ ಶತ್ರುಗಳ ಕಾಟ!
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ಕಾನ್ಸ್‌ಟೇಬಲ್‌ ಜತೆ ಎಂಗೇಜ್ಮೆಂಟ್‌ ಆಗಿ ಮೂರೇ ತಿಂಗಳಿಗೆ ಯುವತಿ ದುರಂತ ಸಾವು
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್
ತ್ರಿಶಾ ಜತೆ ಮೈತ್ರಿ ಮಾಡಿಕೊಂಡು ದಳಪತಿ ವಿಜಯ್ ಗೆದ್ದರು: ರಿಷಿಕಾ ಸಿಂಗ್