AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Seetha Raama: ಅಶೋಕ್ ಕೈಯಲ್ಲಿ ಸಿಕ್ಕಿಬೀಳುತ್ತಾಳಾ ಆಫೀಸ್ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದ್ದ ಭಾರ್ಗವಿ?

Seetha Raama: ಲೇಡಿಸ್ ಕ್ಲಬ್​ನಲ್ಲಿರುವುದು ಭಾರ್ಗವಿ ಹೌದೋ ಅಲ್ಲವೋ ಎಂಬ ಅನುಮಾನ ಬಗೆಹರಿಸಿಕೊಳ್ಳಲು ಅಶೋಕ್ ರಾಮನ ಮನೆಗೆ ಬರುತ್ತಾನೆ. ಆದರೆ  ಭಾರ್ಗವಿ ಮನೆಯಲ್ಲಿರುವುದನ್ನು ನೋಡಿ ತನ್ನ ಲೆಕ್ಕಾಚಾರ ಹೇಗೆ ತಪ್ಪಾಯಿತು ಎಂದು ಯೋಚಿಸುತ್ತಾನೆ. ಅಷ್ಟರಲ್ಲಿ ಅಲ್ಲಿಗೆ ಬಂದ ರಾಮನ ಚಿಕ್ಕಮ್ಮ, ಭಾರ್ಗವಿ  ಬಳಿ ನೀವು ಲೇಡಿಸ್ ಕ್ಲಬ್ ಗೆ ಇನ್ನು ಹೋಗಿಲ್ಲವಾ? ಎಂದು ಕೇಳುತ್ತಾಳೆ. ಈ ಸುಳಿವು ಅಶೋಕ್ ನಿಗೆ, ಭಾರ್ಗವಿಯೇ  ಈ ಆಟಕ್ಕೆಲ್ಲಾ ಸೂತ್ರಧಾರಿ ಎಂಬುದು ತಿಳಿಯುತ್ತಾ?

Seetha Raama: ಅಶೋಕ್ ಕೈಯಲ್ಲಿ ಸಿಕ್ಕಿಬೀಳುತ್ತಾಳಾ ಆಫೀಸ್ ಲೆಕ್ಕಾಚಾರವನ್ನೇ ಬುಡಮೇಲು ಮಾಡಿದ್ದ ಭಾರ್ಗವಿ?
ಭಾರ್ಗವಿ
ಪ್ರೀತಿ ಭಟ್​, ಗುಣವಂತೆ
| Edited By: |

Updated on: Oct 10, 2023 | 8:25 AM

Share

‘ಸೀತಾ ರಾಮ’ (Seetha Raama Serial) ಧಾರಾವಾಹಿ (Serial) ಸಂಚಿಕೆ 63: ಬ್ಯಾಂಕ್​ನವರು ಎಂದು ಸುಳ್ಳು ಹೇಳಿ ಬಂದ ಗುಂಡಾಗಳು ರಾಮ್ ಕೈಯಲ್ಲಿ ಸಿಕ್ಕಿ ಬೀಳುತ್ತಾರೆ. ಏನು ಅರಿಯದ ಸೀತಾಳನ್ನು ಹೆದರಿಸಿ ತನ್ನ ಕೆಲಸ ಸಾಧಿಸಿಕೊಳ್ಳಬೇಕೆಂದಿದ್ದ ಲಾಯರ್ ರುದ್ರ ಪ್ರತಾಪ್, ಪುಡಿ ರೌಡಿಗಳನ್ನು ಕಳುಹಿಸಿರುತ್ತಾನೆ. ಆದರೆ ಅವರು ಸೀತಾಳನ್ನು ಹೆದರಿಸುವುದನ್ನು ನೋಡಿದ ರಾಮ್, ಅವರ ಬಗ್ಗೆ ವಿಚಾರಿಸುತ್ತಾನೆ. ಅವನ ಮಾತಿಗೆ ಹೆದರಿದ ರೌಡಿಗಳು ಅಲ್ಲಿಂದ ಪರಾರಿಯಾಗುತ್ತಾರೆ. ಈ ವಿಷಯ ರುದ್ರ ಪ್ರತಾಪ್​ಗೂ ತಿಳಿದು, ತನ್ನ ಪ್ಲಾನ್ ಹಾಳಾದ ಸಿಟ್ಟಿಗೆ ಕೆಂಡಕಾರುತ್ತಾನೆ.

ಇನ್ನು ಅಶೋಕ್ ರಾಮನ ಬದಲು ಫೈಲ್ ತೆಗೆದುಕೊಂಡು, ಮ್ಯಾನೇಜರ್ ಚರಣ್ ಕೊಟ್ಟಿರುವ ವಿಳಾಸ ಹಿಡಿದುಕೊಂಡು ಹೊರಡುತ್ತಾನೆ. ಏನಾದರೂ ಮಾಡಿ ಇದರ ಹಿಂದಿರುವ ಕೈ ಯಾರು ಎಂಬುದನ್ನು ತಿಳಿದುಕೊಳ್ಳಬೇಕು ಎಂಬುದು ಅವರ ಆಸೆಯಾದರೂ, ಕಳ್ಳನ ನಡೆ ಹೇಗಿರಬಹುದು ಎಂಬುದು ತಿಳಿದಿಲ್ಲದ ಕಾರಣ ನಿಧಾನವಾಗಿ ಅವರನ್ನು ಹಿಡಿಯಬೇಕು ಎಂದು ತೀರ್ಮಾನ ಮಾಡಿಕೊಳ್ಳುತ್ತಾರೆ. ಆದರೆ ಈ ವಿಷಯ ರಾಮನಿಂದ ಚರಣ್​ಗೆ ತಿಳಿದು ಅವನು ಭಾರ್ಗವಿಯನ್ನು ಎಚ್ಚರಿಸುತ್ತಾನೆ. ಅದನ್ನು ತಿಳಿದು ಅವಳು ತನ್ನ ಮಾರ್ಗ ಬದಲಾಯಿಸುತ್ತಾಳೆ.

ಇದನ್ನೂ ಓದಿ: ದಕ್ಷಿಣದಲ್ಲೂ ಬಾಲಿವುಡ್​ನಲ್ಲೂ ಬ್ಯುಸಿ ಆದ ‘ಸೀತಾ ರಾಮಂ’ ಸುಂದರಿ

ಸಿಹಿಯನ್ನು ಸ್ಕೂಲ್ ನಿಂದ ಕರೆದುಕೊಂಡು ಹೋಗಲು ಬಂದ ರಾಮ್ ಮತ್ತು ಸೀತಾ ಅವಳ ಬೇಡಿಕೆ ಕೇಳಿ ಹೆದರುತ್ತಾರೆ. ಫ್ರೆಂಡ್ ಮನೆಗೆ ಹೋಗೋಣ ಎಂದು ಹಠ ಮಾಡುತ್ತಾಳೆ. ರಾಮ್ ನಿಗೆ ಕರೆದುಕೊಂಡು ಹೋಗುವ ಹಾಗಿಲ್ಲ, ಬೇಡ ಎಂದರೆ ಅವಳಿಗೆ ಬೇಸರವಾಗುತ್ತದೆ ಹಾಗಾಗಿ ಏನು ಮಾಡಬೇಕು ಎಂದು ತಿಳಿಯದೆ ಕಂಗಾಲಾಗಿ, ಬಳಿಕ ಹೋಗೋಣ ಎನ್ನುತ್ತಾನೆ. ಇನ್ನು ಲೇಡಿಸ್ ಕ್ಲಬ್ ನಲ್ಲಿರುವುದು ಭಾರ್ಗವಿ ಹೌದೋ ಅಲ್ಲವೋ ಎಂಬ ಅನುಮಾನ ಬಗೆಹರಿಸಿಕೊಳ್ಳಲು ಅಶೋಕ್ ರಾಮನ ಮನೆಗೆ ಬರುತ್ತಾನೆ. ಆದರೆ  ಭಾರ್ಗವಿ ಮನೆಯಲ್ಲಿರುವುದನ್ನು ನೋಡಿ ತನ್ನ ಲೆಕ್ಕಾಚಾರ ಹೇಗೆ ತಪ್ಪಾಯಿತು ಎಂದು ಯೋಚಿಸುತ್ತಾನೆ. ಅಷ್ಟರಲ್ಲಿ ಅಲ್ಲಿಗೆ ಬಂದ ರಾಮನ ಮತ್ತೊಂದು ಚಿಕ್ಕಮ್ಮ, ಭಾರ್ಗವಿ  ಬಳಿ ನೀವು ಲೇಡಿಸ್ ಕ್ಲಬ್​ಗೆ ಇನ್ನು ಹೋಗಿಲ್ಲವಾ? ಎಂದು ಕೇಳುತ್ತಾಳೆ. ಈ ಸುಳಿವು ಅಶೋಕ್​ನಿಗೆ, ಭಾರ್ಗವಿಯೇ  ಈ ಆಟಕ್ಕೆಲ್ಲಾ ಸೂತ್ರಧಾರಿ ಎಂಬುದು ತಿಳಿಯುತ್ತಾ? ಮುಂದೇನಾಗಬಹುದು? ಕಾದು ನೋಡೋಣ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Preethi Bhat Gunavante
Preethi Bhat Gunavante

ಪ್ರೀತಿ ಭಟ್ ಗುಣವಂತೆ – ಮೂಲತಃ ಹೊನ್ನಾವರದ ಗುಣವಂತೆಯವಳು. ಪತ್ರಿಕೋದ್ಯಮ ಮತ್ತು ಸಮೂಹ ಸಂವಹನದಲ್ಲಿ (M.C.J) ಎಂ.ಎ ಮಾಡಿದ್ದು ಪತ್ರಿಕಾ ರಂಗದಲ್ಲಿ 6 ವರ್ಷಗಳ ಅನುಭವವಿದೆ. ಸುದ್ದಿ ಬಿಡುಗಡೆ ವಾರ ಪತ್ರಿಕೆಯಲ್ಲಿ, ಉದಯವಾಣಿ ದಿನ ಪತ್ರಿಕೆಯಲ್ಲಿ ಕೆಲಸ ಮಾಡಿದ್ದೇನೆ. ಅದಾದ ಬಳಿಕ 2023ರಿಂದ ಟಿವಿ9 ಕನ್ನಡದಲ್ಲಿ ಕೆಲಸ ಮಾಡುತ್ತಿದ್ದೇನೆ. ಅಧ್ಯಾತ್ಮ, ಆರೋಗ್ಯ, ಜೀವನಶೈಲಿಗೆ ಸಂಬಂಧಿಸಿದ ಲೇಖನಗಳನ್ನು ಬರೆಯುವುದರಲ್ಲಿ ಆಸಕ್ತಿ ಹೊಂದಿದ್ದು, ಓದುಗರಿಗೆ ಉತ್ತಮ ಲೇಖನಗಳನ್ನು ಒದಗಿಸುವಲ್ಲಿ ಪ್ರೀತಿಯಿಂದ, ಪ್ರಾಮಾಣಿಕವಾಗಿ ಪ್ರಯತ್ನಿಸುತ್ತಿದ್ದೇನೆ. ಬರವಣಿಗೆ ಹೊರತು ಪಡಿಸಿದರೆ ನನ್ನ ಆಸಕ್ತಿಕರ ಕ್ಷೇತ್ರ ಪ್ರವಾಸ.

Read More
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಡಿಕೆ ಶಿವಕುಮಾರ್ ಸಿಎಂ ಆಗುತ್ತಿದ್ದಂತೆಯೇ ಹಲವು ಅಧಿಕಾರಿಗಳಿಗೆ ಗೇಟ್ ಪಾಸ್
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ