AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ

Seetha Raama: ರಾಮ ಹಾಗೂ ಸೀತೆಯ ನಡುವೆ ಆಪ್ತತೆ ಬೆಳೆಯಲು ಸಿಹಿ ಸೇತುವೆ ಆಗುತ್ತಾಳೆ. ಇವಿಷ್ಟನ್ನು ಪ್ರೋಮೋ ಮೂಲಕ ತೋರಿಸಲಾಗಿದೆ. ಇದರ ಜೊತೆ ಧಾರಾವಾಹಿ ಪ್ರಸಾರ ಸಮಯ ತಿಳಿಸಲಾಗಿದೆ.

ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ
ಸೀತಾ ರಾಮ ಧಾರಾವಾಹಿ
ರಾಜೇಶ್ ದುಗ್ಗುಮನೆ
|

Updated on:Jul 12, 2023 | 8:03 AM

Share

ವೈಷ್ಣವಿ ಗೌಡ (Vaishnavi Gowda) ಹಾಗೂ ಗಗನ್ ಚಿನ್ನಪ್ಪ ನಟನೆಯ ‘ಸೀತಾ ರಾಮ’ ಧಾರಾವಾಹಿ (Seetha Rama Serial) ಪ್ರೋಮೋ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿತ್ತು. ಕಾರಣಾಂತರಗಳಿಂದ ಧಾರಾವಾಹಿ ಪ್ರಸಾರ ವಿಳಂಬ ಆಗುತ್ತಲೇ ಇತ್ತು. ಇತ್ತೀಚೆಗೆ ಧಾರಾವಾಹಿ ಪ್ರಾರಂಭ ದಿನಾಂಕ ತಿಳಿಸಿದ್ದ ಜೀ ಕನ್ನಡ ವಾಹಿನಿ, ಈಗ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದೆ. ವಾಹಿನಿ ಈ ಕುರಿತು ಹೊಸ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋ ಎಲ್ಲರ ಗಮನ ಸೆಳೆಯುತ್ತಿದೆ. ಈ ಪ್ರೋಮೋನ ಬರೋಬ್ಬರಿ 56 ಸಾವಿರ ಮಂದಿ ಲೈಕ್ ಮಾಡಿದ್ದಾರೆ.

ರಾಮ್ (ಗಗನ್)​ ದೊಡ್ಡ ಉದ್ಯಮಿ. ವಿದೇಶದಲ್ಲಿದ್ದರೂ ಆತನಿಗೆ ನೆನಪಗೋದು ಕುಟುಂಬವೇ. ಸದಾ ಕುಟುಂಬದ ಕಾಳಜಿ ಬಗ್ಗೆ ಯೋಚಿಸುತ್ತಾ ಇರುತ್ತಾನೆ. ಆದರೆ, ಕುಟುಂಬದವರಿಗೆ ಇವನ ಮೇಲೆ ಪ್ರೀತಿ ಇಲ್ಲ. ಬರೀ ದ್ವೇಷ. ಆಶೀರ್ವಾದ ಪಡೆಯ ಹೋದ ರಾಮ್​ಗೆ ಸಿಗೋದು ಕೆಟ್ಟದಾಗಲಿ ಎನ್ನುವ ಹಾರೈಕೆ. ಮತ್ತೊಂದು ಕಡೆ ತಾವಾಯಿತು ತಮ್ಮ ಕೆಲಸವಾಯಿತು ಎಂದು ವಾಸಿಸುತ್ತಿರುವ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಮಗಳು ಸಿಹಿ (ರೀತು ಸಿಂಗ್). ರಾಮ ಹಾಗೂ ಸೀತೆಯ ನಡುವೆ ಆಪ್ತತೆ ಬೆಳೆಯಲು ಸಿಹಿ ಸೇತುವೆ ಆಗುತ್ತಾಳೆ. ಇವಿಷ್ಟನ್ನು ಪ್ರೋಮೋ ಮೂಲಕ ತೋರಿಸಲಾಗಿದೆ.

‘ಸೀತಾ ರಾಮ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಪ್ರಸಾರ ಆಗಲಿದೆ. ಜುಲೈ 17ರಿಂದ ಧಾರಾವಾಹಿ ಪ್ರಸಾರ ಆರಂಭಿಸಲಿದೆ. ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಸಾಂಗ್ ಎಲ್ಲರ ಗಮನ ಸೆಳೆದಿದೆ. ಈಗ ಹೊಸ ಪ್ರೋಮೋಗೆ ಮೆಚ್ಚುಗೆ ಸಿಗುತ್ತಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ಸೀತಾ ರಾಮ’ ಟೈಟಲ್ ಗೀತೆಯಲ್ಲಿ ಗಮನ ಸೆಳೆದ ವೈಷ್ಣವಿ; ಧಾರಾವಾಹಿ ಕಥೆಯ ಬಗ್ಗೆ ಮೂಡಿದೆ ಕುತೂಹಲ

ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಿಂದ ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಇತ್ತೀಚೆಗೆ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಈಗ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇನ್ನು, ಗಗನ್ ಚಿನ್ನಪ್ಪ ಅವರು ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದವರು. ಅವರನ್ನು ಈಗ ಮತ್ತೆ ಕಿರುತೆರೆ ಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Wed, 12 July 23

ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ಹೈವೇಯಲ್ಲೇ ಅಡುಗೆ ಮಾಡಿ ಧಿಮಾಕು ತೋರಿದ ಮಹಿಳೆ!
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ