AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ

Seetha Raama: ರಾಮ ಹಾಗೂ ಸೀತೆಯ ನಡುವೆ ಆಪ್ತತೆ ಬೆಳೆಯಲು ಸಿಹಿ ಸೇತುವೆ ಆಗುತ್ತಾಳೆ. ಇವಿಷ್ಟನ್ನು ಪ್ರೋಮೋ ಮೂಲಕ ತೋರಿಸಲಾಗಿದೆ. ಇದರ ಜೊತೆ ಧಾರಾವಾಹಿ ಪ್ರಸಾರ ಸಮಯ ತಿಳಿಸಲಾಗಿದೆ.

ಹೊಸ ಪ್ರೋಮೋ ಹಂಚಿಕೊಂಡು ‘ಸೀತಾ ರಾಮ’ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದ ಜೀ ಕನ್ನಡ
ಸೀತಾ ರಾಮ ಧಾರಾವಾಹಿ
Follow us
ರಾಜೇಶ್ ದುಗ್ಗುಮನೆ
|

Updated on:Jul 12, 2023 | 8:03 AM

ವೈಷ್ಣವಿ ಗೌಡ (Vaishnavi Gowda) ಹಾಗೂ ಗಗನ್ ಚಿನ್ನಪ್ಪ ನಟನೆಯ ‘ಸೀತಾ ರಾಮ’ ಧಾರಾವಾಹಿ (Seetha Rama Serial) ಪ್ರೋಮೋ ಮೂಲಕವೇ ಸಾಕಷ್ಟು ಕುತೂಹಲ ಮೂಡಿಸಿತ್ತು. ಕಾರಣಾಂತರಗಳಿಂದ ಧಾರಾವಾಹಿ ಪ್ರಸಾರ ವಿಳಂಬ ಆಗುತ್ತಲೇ ಇತ್ತು. ಇತ್ತೀಚೆಗೆ ಧಾರಾವಾಹಿ ಪ್ರಾರಂಭ ದಿನಾಂಕ ತಿಳಿಸಿದ್ದ ಜೀ ಕನ್ನಡ ವಾಹಿನಿ, ಈಗ ಧಾರಾವಾಹಿಯ ಪ್ರಸಾರ ಸಮಯ ತಿಳಿಸಿದೆ. ವಾಹಿನಿ ಈ ಕುರಿತು ಹೊಸ ಪ್ರೋಮೋ ಒಂದನ್ನು ಹಂಚಿಕೊಂಡಿದೆ. ಈ ಪ್ರೋಮೋ ಎಲ್ಲರ ಗಮನ ಸೆಳೆಯುತ್ತಿದೆ. ಈ ಪ್ರೋಮೋನ ಬರೋಬ್ಬರಿ 56 ಸಾವಿರ ಮಂದಿ ಲೈಕ್ ಮಾಡಿದ್ದಾರೆ.

ರಾಮ್ (ಗಗನ್)​ ದೊಡ್ಡ ಉದ್ಯಮಿ. ವಿದೇಶದಲ್ಲಿದ್ದರೂ ಆತನಿಗೆ ನೆನಪಗೋದು ಕುಟುಂಬವೇ. ಸದಾ ಕುಟುಂಬದ ಕಾಳಜಿ ಬಗ್ಗೆ ಯೋಚಿಸುತ್ತಾ ಇರುತ್ತಾನೆ. ಆದರೆ, ಕುಟುಂಬದವರಿಗೆ ಇವನ ಮೇಲೆ ಪ್ರೀತಿ ಇಲ್ಲ. ಬರೀ ದ್ವೇಷ. ಆಶೀರ್ವಾದ ಪಡೆಯ ಹೋದ ರಾಮ್​ಗೆ ಸಿಗೋದು ಕೆಟ್ಟದಾಗಲಿ ಎನ್ನುವ ಹಾರೈಕೆ. ಮತ್ತೊಂದು ಕಡೆ ತಾವಾಯಿತು ತಮ್ಮ ಕೆಲಸವಾಯಿತು ಎಂದು ವಾಸಿಸುತ್ತಿರುವ ಸೀತಾ (ವೈಷ್ಣವಿ ಗೌಡ) ಹಾಗೂ ಆಕೆಯ ಮಗಳು ಸಿಹಿ (ರೀತು ಸಿಂಗ್). ರಾಮ ಹಾಗೂ ಸೀತೆಯ ನಡುವೆ ಆಪ್ತತೆ ಬೆಳೆಯಲು ಸಿಹಿ ಸೇತುವೆ ಆಗುತ್ತಾಳೆ. ಇವಿಷ್ಟನ್ನು ಪ್ರೋಮೋ ಮೂಲಕ ತೋರಿಸಲಾಗಿದೆ.

‘ಸೀತಾ ರಾಮ’ ಧಾರಾವಾಹಿ ಜೀ ಕನ್ನಡ ವಾಹಿನಿಯಲ್ಲಿ ರಾತ್ರಿ 9:30ಕ್ಕೆ ಪ್ರಸಾರ ಆಗಲಿದೆ. ಜುಲೈ 17ರಿಂದ ಧಾರಾವಾಹಿ ಪ್ರಸಾರ ಆರಂಭಿಸಲಿದೆ. ಈಗಾಗಲೇ ರಿಲೀಸ್ ಆಗಿರುವ ಟೈಟಲ್ ಸಾಂಗ್ ಎಲ್ಲರ ಗಮನ ಸೆಳೆದಿದೆ. ಈಗ ಹೊಸ ಪ್ರೋಮೋಗೆ ಮೆಚ್ಚುಗೆ ಸಿಗುತ್ತಿದೆ.

View this post on Instagram

A post shared by Zee Kannada (@zeekannada)

ಇದನ್ನೂ ಓದಿ: ‘ಸೀತಾ ರಾಮ’ ಟೈಟಲ್ ಗೀತೆಯಲ್ಲಿ ಗಮನ ಸೆಳೆದ ವೈಷ್ಣವಿ; ಧಾರಾವಾಹಿ ಕಥೆಯ ಬಗ್ಗೆ ಮೂಡಿದೆ ಕುತೂಹಲ

ವೈಷ್ಣವಿ ಗೌಡ ಅವರು ‘ಬಿಗ್ ಬಾಸ್’ನಿಂದ ಸಾಕಷ್ಟು ಜನಪ್ರಿಯತೆ ಪಡೆದರು. ಅವರು ಇತ್ತೀಚೆಗೆ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರಲಿಲ್ಲ. ಈಗ ಅವರು ‘ಸೀತಾ ರಾಮ’ ಧಾರಾವಾಹಿಯಲ್ಲಿ ನಟಿಸುತ್ತಿರುವುದು ಅಭಿಮಾನಿಗಳಿಗೆ ಖುಷಿ ನೀಡಿದೆ. ಇನ್ನು, ಗಗನ್ ಚಿನ್ನಪ್ಪ ಅವರು ‘ಮಂಗಳ ಗೌರಿ ಮದುವೆ’ ಧಾರಾವಾಹಿ ಮೂಲಕ ಜನಪ್ರಿಯತೆ ಪಡೆದವರು. ಅವರನ್ನು ಈಗ ಮತ್ತೆ ಕಿರುತೆರೆ ಮೇಲೆ ನೋಡಲು ಫ್ಯಾನ್ಸ್ ಕಾದಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 7:47 am, Wed, 12 July 23

ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಬಾನು ಮುಷ್ತಾಕ್ ಕೃತಿ ಹಾರ್ಟ್ ಲ್ಯಾಂಪ್​ಗೆ ಅಂತರಾಷ್ಟ್ರೀಯ ಬೂಕರ್ ಪ್ರಶಸ್ತಿ!
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಧರ್ಮಸ್ಥಳ: ಬೊಳಿಯೂರು ತಲುಪಿದ ಆಕಾಂಕ್ಷಾ ಎಸ್ ನಾಯರ್ ಪಾರ್ಥಿವ ಶರೀರ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
ಕಟ್ಟಡದ ಒಂದು ಭಾಗ ಕುಸಿತ, ಒಳಗಿಂದ ಸಹಾಯಕ್ಕಾಗಿ ಅಂಗಲಾಚುತ್ತಿರುವ ಜನ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
VIDEO: ಧೋನಿಯ ಪಾದಗಳನ್ನು ಮುಟ್ಟಿ ಆಶೀರ್ವಾದ ಪಡೆದ ಯುವ ಆಟಗಾರ
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
ಪುರುಷರು ಸಾಷ್ಟಾಂಗ, ಸ್ತ್ರೀಯರು ಪಂಚಾಂಗ ನಮಸ್ಕಾರ ಏಕೆ ಮಾಡಬೇಕು?
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
Daily horoscope: ಈ ರಾಶಿಯವರು ಧಾರ್ಮಿಕ ಕಾರ್ಯಕ್ರಮಗಳಿಗೆ ಭೇಟಿಕೊಡುವರು
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
‘ನಿದ್ರಾದೇವಿ ನೆಕ್ಸ್ಟ್​ ಡೋರ್’ ಚಿತ್ರದಲ್ಲಿ ಗೆಟಪ್ ಬದಲಿಸಿದ ಶೈನ್ ಶೆಟ್ಟಿ
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಪ್ರವೀಣ್ ಶೆಟ್ಟಿ ಪುತ್ರ ಪ್ರವೀರ್ ಶೆಟ್ಟಿಗೆ ಚಿತ್ರರಂಗದಲ್ಲಿ ಸ್ಫೂರ್ತಿ ಯಾರು
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಬೆಂಗಳೂರು ರಣಭೀಕರ ಮಳೆಗೆ ಮುಳುಗಿದ `ಬೆಳ್ಳುಳ್ಳಿ ಕಬಾಬ್’ ಹೋಟೆಲ್
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​
ಪಿಎಸ್​​ಐ ನಾಗರಾಜ್​​ ಪತ್ನಿ ಆತ್ಮಹತ್ಯೆ ಪ್ರಕರಣಕ್ಕೆ ಬಿಗ್ ಟ್ವಿಸ್ಟ್​