AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಸೀತಾ ರಾಮ’ ಮಾತ್ರವಲ್ಲ ತೆಲುಗಿನ ಈ ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ ಗಗನ್ ಚಿನ್ನಪ್ಪ

ಗಗನ್ ಚಿನ್ನಪ್ಪ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರು ಶಿಕ್ಷಣ ಮುಗಿಸಿದ ಬಳಿಕ ಕೆಲಸಕ್ಕೆ ಸೇರಿದರು. ಆದರೆ, ಪ್ಯಾಷನ್ ಅವರನ್ನು ಸೆಳೆಯಿತು. ಕಿರುತೆರೆ ಲೋಕಕ್ಕೆ ಅವರು ಕಾಲಿಟ್ಟರು. ಗಗನ್ ಅವರು ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ನವೆಂಬರ್ 14, 2022ರಿಂದ ಪ್ರಸಾರ ಆರಂಭಿಸಿದೆ.

‘ಸೀತಾ ರಾಮ’ ಮಾತ್ರವಲ್ಲ ತೆಲುಗಿನ ಈ ಧಾರಾವಾಹಿಯಲ್ಲೂ ನಟಿಸುತ್ತಿದ್ದಾರೆ ಗಗನ್ ಚಿನ್ನಪ್ಪ
ಗಗನ್​ ಚಿನ್ನಪ್ಪ ತೆಲುಗು ಧಾರಾವಾಹಿ
 ಶ್ರೀಲಕ್ಷ್ಮೀ ಎಚ್
| Updated By: ಮದನ್​ ಕುಮಾರ್​|

Updated on: Sep 21, 2023 | 6:24 PM

Share

ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ಸೀತಾ ರಾಮ’ ಧಾರಾವಾಹಿ (Seetha Rama Serial) ಸಾಕಷ್ಟು ಗಮನ ಸೆಳೆಯುತ್ತಿದೆ. ಈ ಧಾರಾವಾಹಿಯಲ್ಲಿ ಗಗನ್ ಚಿನ್ನಪ್ಪ (Gagan Chinnappa), ವೈಷ್ಣವಿ ಗೌಡ, ರೀತು ಸಿಂಗ್, ಮುಖ್ಯಮಂತ್ರಿ ಚಂದ್ರು, ಅಶೋಕ್ ಮೊದಲಾದವರು ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿ ಎಲ್ಲರ ಗಮನ ಸೆಳೆಯುತ್ತಿದೆ. ಈ ಧಾರಾವಾಹಿ ಕಥಾ ನಾಯಕ ಗಗನ್ ಚಿನ್ನಪ್ಪ ಅವರ ಪಾತ್ರ ಅನೇಕರಿಗೆ ಇಷ್ಟವಾಗುತ್ತಿದೆ. ಅವರು ತೆಲುಗಿನಲ್ಲೂ ಒಂದು ಧಾರಾವಾಹಿಯಲ್ಲಿ (Telugu Serial) ನಟಿಸುತ್ತಿದ್ದಾರೆ ಎನ್ನುವ ವಿಚಾರ ನಿಮಗೆ ಗೊತ್ತೇ? ಆ ಬಗ್ಗೆ ಇಲ್ಲಿದೆ ವಿವರ. ಗಗನ್ ಚಿನ್ನಪ್ಪ ಅವರು ಕಿರುತೆರೆ ಮೂಲಕ ಫೇಮಸ್ ಆದವರು. ಅವರು ಶಿಕ್ಷಣ ಮುಗಿಸಿದ ಬಳಿಕ ಕೆಲಸಕ್ಕೆ ಸೇರಿದರು. ಆದರೆ, ಪ್ಯಾಷನ್ ಅವರನ್ನು ಸೆಳೆಯಿತು. ಕಿರುತೆರೆ ಲೋಕಕ್ಕೆ ಅವರು ಕಾಲಿಟ್ಟರು. ‘ಮಂಗಳ ಗೌರಿ ಮದುವೆ’ ಅವರು ನಟಿಸಿದ ಮೊದಲ ಧಾರಾವಾಹಿ. ಈ ಧಾರಾವಾಹಿಯಲ್ಲಿ ಅವರು ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆ ಬಳಿಕ ಅವರು ತೆಲುಗು ಕಿರುತೆರೆಗೂ ಕಾಲಿಟ್ಟರು.

ಗಗನ್ ಅವರು ತೆಲುಗು ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ಹೆಸರು ‘ಕೃಷ್ಣ ಮುಕುಂದ ಮುರಾರಿ’. ಈ ಧಾರಾವಾಹಿ ನವೆಂಬರ್ 14, 2022ರಿಂದ ಪ್ರಸಾರ ಆರಂಭಿಸಿದೆ. ಸ್ಟಾರ್ ಮಾ ವಾಹಿನಿಯಲ್ಲಿ ಪ್ರತಿ ಸೋಮವಾರದಿಂದ ಶನಿವಾರದವರೆಗೆ ರಾತ್ರಿ 8:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣುತ್ತಿದೆ. ಗಗನ್ ಚಿನ್ನಪ್ಪ ಅವರು ಮುರಾರಿ ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಪ್ರೇರಣಾ ಕಂಬಮ್, ಯಶ್ಮಿ ಗೌಡ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ.

ಪ್ರೀತಿ-ಪ್ರೇಮ ವಿಚಾರದಲ್ಲಿ ಮುಕ್ತವಾಗಿ ಮಾತನಾಡಿದ ಗಗನ್​ ಚಿನ್ನಪ್ಪ; ಆ ಸೀನಿಯರ್​ ಹುಡುಗಿ ಯಾರು?

ಗಗನ್ ಅವರಿಗೆ ತೆಲುಗು ಕಿರುತೆರೆಯಲ್ಲಿ ದೊಡ್ಡ ಅಭಿಮಾನಿ ಬಳಗ ಇದೆ. ಈ ಧಾರಾವಾಹಿ ಹೆಸರಲ್ಲಿ ಹಲವು ಫ್ಯಾನ್​ ಪೇಜ್​ಗಳು ಸೃಷ್ಟಿ ಆಗಿದ್ದು, ಸಾವಿರಾರು ಜನರು ಇದನ್ನು ಹಿಂಬಾಲಿಸುತ್ತಿದ್ದಾರೆ. ಗಗನ್ ಅವರನ್ನು ಅಲ್ಲಿಯವರು ಸಖತ್ ಇಷ್ಟಪಟ್ಟಿದ್ದಾರೆ. ಈ ಬಗ್ಗೆ ಅವರಿಗೆ ಖುಷಿ ಇದೆ. ಎರಡೂ ಧಾರಾವಾಹಿಯ ಶೂಟಿಂಗ್​ನ ಸರಿದೂಗಿಸಿಕೊಂಡು ಹೋಗುತ್ತಿದ್ದಾರೆ. ಗಗನ್ ಚಿನ್ನಪ್ಪ ಅವರಿಗೆ ಇನ್​ಸ್ಟಾಗ್ರಾಮ್​ನಲ್ಲಿ 72 ಸಾವಿರ ಜನ ಹಿಂಬಾಲಕರಿದ್ದಾರೆ. ಅವರು ಧಾರಾವಾಹಿಯ ಪ್ರಮೋಗಳನ್ನು ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಳ್ಳುತ್ತಾರೆ. ಅವರಿಗೆ ದಿನ ಕಳೆಂದಂತೆ ಹಿಂಬಾಲಕರ ಸಂಖ್ಯೆ ಹೆಚ್ಚುತ್ತಿದೆ.

Seetha Raama: ಸೀತಾ ರಾಮರ ನಡುವಿನ ವಿಷಯದಲ್ಲಿ ಅಶೋಕ್ ತೊಳಲಾಟ; ಪ್ರಿಯಾಗೆ ಪ್ರಾಣಸಂಕಟ!

ಸೀತಾ ರಾಮ ಧಾರಾವಾಹಿ ಕಥೆ ಏನು?

‘ಸೀತಾ ರಾಮ’ ಧಾರಾವಾಹಿ ಜೀ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ. ರಾಮ (ಗಗನ್ ಚಿನ್ನಪ್ಪ) ದೊಡ್ಡ ಉದ್ಯಮ ಕುಟುಂಬದ ಹಿನ್ನೆಲೆಯವನು. ತಂದೆ-ತಾಯಿ ಇಬ್ಬರೂ ಮೃತಪಟ್ಟಿದ್ದಾರೆ. ತಾತ (ಮುಖ್ಯಮಂತ್ರಿ ಚಂದ್ರು) ಹಾಗೂ ಚಿಕ್ಕಮ್ಮನೇ (ಪೂಜಾ ಲೋಕೇಶ್) ಈತನಿಗೆ ಸರ್ವಸ್ವ. ವಿದೇಶದಲ್ಲಿ ಸೆಟಲ್ ಆಗಿರೋ ಈತ ಭಾರತಕ್ಕೆ ಬಂದಿದ್ದಾನೆ. ಇಲ್ಲಿ ಸೀತೆ (ವೈಷ್ಣವಿ ಗೌಡ) ಪರಿಚಯ ಆಗುತ್ತದೆ. ಆಕೆಗೆ ಸಿಹಿ (ರೀತು ಸಿಂಗ್) ಹೆಸರಿನ ಮಗಳೂ ಇದ್ದಾಳೆ. ಗಗನ್ ಹಾಗೂ ಸಿಹಿ ಮಧ್ಯೆ ಒಳ್ಳೆಯ ಗೆಳೆತನ ಬೆಳೆದಿದೆ. ಈ ಕಾರಣದಿಂದಲೇ ರಾಮನಿಗೆ ಸೀತೆ ಮತ್ತಷ್ಟು ಹತ್ತಿರ ಆಗುತ್ತಿದ್ದಾಳೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ